Just In
Don't Miss!
- Education
Vijayapura District Court Recruitment 2021: ವಿಜಯಪುರ ಜಿಲ್ಲಾ ನ್ಯಾಯಾಲಯದಲ್ಲಿ 2 ಬೆರಳಚ್ಚು-ನಕಲುಗಾರ ಹುದ್ದೆಗಳ ನೇಮಕಾತಿ
- News
ಪೆಟ್ರೋಲ್ ಪಂಪ್ಗಳಿಂದ ಪ್ರಧಾನಿ ಮೋದಿ ಫೋಟೊ ತೆರವಿಗೆ ಚುನಾವಣಾ ಆಯೋಗ ಸೂಚನೆ
- Automobiles
31 ಟನ್ ಸರಕು ಸಾಗಾಣಿಕೆ ಸಾಮರ್ಥ್ಯದ ಟಾಟಾ ಹೊಸ ಸಿಗ್ನಾ 3118.ಟಿ ಟ್ರಕ್ ಬಿಡುಗಡೆ
- Finance
ಚಿನ್ನದ ಬೆಲೆ ಕೊಂಚ ಇಳಿಕೆ: ಮಾರ್ಚ್ 03ರ ಬೆಲೆ ಎಷ್ಟಿದೆ?
- Sports
'ಭಾರತ-ಇಂಗ್ಲೆಂಡ್ 4ನೇ ಟೆಸ್ಟ್ನಲ್ಲಿ ನಾನು ಇಂಗ್ಲೆಂಡ್ಗೆ ಚಿಯರ್ ಮಾಡ್ತೇನೆ'
- Lifestyle
ಮಾರ್ಚ್ ನಲ್ಲಿದೆ ಕಷ್ಟ ನಿವಾರಿಸುವ ಫಾಲ್ಗುಣ ಅಮವಾಸ್ಯೆ, ಯಾಕಿಷ್ಟು ಮಹತ್ವ ಗೊತ್ತಾ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಗ್ಬಾಸ್ ಮಾಜಿ ಸ್ಪರ್ಧಿ ಜಯಶ್ರೀ ರಾಮಯ್ಯ ಆತ್ಮಹತ್ಯೆ
ಮಾಜಿ ಬಿಗ್ಬಾಸ್ ಸ್ಪರ್ಧಿ, ನಟಿ ಜಯಶ್ರೀ ರಾಮಯ್ಯ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ಜಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಗ್ಬಾಸ್ ಸೀಸನ್ ಮೂರರಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ಜಯಶ್ರೀ ಅವರು ಈ ಹಿಂದೆ ಎರಡು ಬಾರಿ ಆತ್ಮಹತ್ಯೆ ಪ್ರಯತ್ನ ಮಾಡಿದ್ದರು. ಆಗ ಸೂಕ್ತ ಚಿಕಿತ್ಸೆ ಪಡೆದು ಸಾವಿನಿಂದ ಪಾರಾಗಿದ್ದರು.
ಜಯಶ್ರೀ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ಫೇಸ್ಬುಕ್ ಲೈವ್ ನಲ್ಲಿ ಒಮ್ಮೆ ತಮಗೆ ದಯಾಮರಣ ಪ್ರಾಪ್ತಿ ಮಾಡಿ,' ನನಗೆ ಬದುಕಿ ಇರಲು ಇಷ್ಟವಿಲ್ಲ. ನಾನು ಒಳ್ಳೆಯ ಹುಡುಗಿ ಅಲ್ಲ' ಎಂದು ಮಾತನಾಡಿದ್ದರು.
ಜಯಶ್ರೀ ಕುಟುಂಬದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಜಗಳ ನಡೆದಿತ್ತು. ಜಯಶ್ರೀ ಅವರು ತಮ್ಮ ಮಾವನ ವಿರುದ್ಧ ಪೊಲೀಸ್ ಠಾಣೆಗೆ ದೂರು ನೀಡಿದ್ದರು. 2019 ರ ಸೆಪ್ಟೆಂಬರ್ ನಲ್ಲಿ ಒನ್ ಇಂಡಿಯಾದೊಂದಿಗೆ ಮಾತನಾಡಿದ್ದ ಜಯಶ್ರೀ, 'ನಮ್ಮ ಮಾವ ನನ್ನನ್ನು ಹಾಗೂ ತಾಯಿಯನ್ನು ಮನೆಯಿಂದ ಹೊರಗೆ ಹಾಕಿದ್ದಾರೆ, ಆಸ್ತಿ ವಿಷಯವಾಗಿ ನಮ್ಮ ಮೇಲೆ ದಬ್ಬಾಳಿಕೆ ಮಾಡಿದ್ದಾರೆ' ಎಂದು ಅವಲತ್ತುಕೊಂಡಿದ್ದರು.
ಮಾರನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆ ಬಗ್ಗೆ ಇನ್ನಷ್ಟು ಮಾಹಿತಿಗಳು ಹೊರಬರಬೇಕಿದೆ.