Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ಶ್ರೀಮುರಳಿ ಭೇಟಿ ಮಾಡಿದ ಬಿಗ್ ಬಾಸ್ ವಿನ್ನರ್ ಶಶಿಕುಮಾರ್
ಬಿಗ್ ಬಾಸ್ ಕನ್ನಡ 6ನೇ ಆವೃತ್ತಿಯ ವಿನ್ನರ್ ಶಶಿ ಕುಮಾರ್ ಈಗ ಏನು ಮಾಡುತ್ತಿದ್ದಾರೆ ಎನ್ನುವ ಕುತೂಹಲ ಜನಸಾಮಾನ್ಯರದ್ದು. ಮಾಡರ್ನ್ ರೈತ ಎಂದು ಗುರುತಿಸಿಕೊಂಡಿದ್ದ ಶಶಿ ಬಿಗ್ ಬಾಸ್ ಮನೆಯಲ್ಲಿ ವೀಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದರು. ಬಿಗ್ ಬಾಸ್ ವಿನ್ನರ್ ಪಟ್ಟ ಮುಡಿಗೇರಿಸಿಕೊಂಡ ನಂತರ ಶಶಿ ಸ್ಯಾಂಡಲ್ ವುಡ್ ನ ಕೆಲವು ನಟರನ್ನು ಭೇಟಿಯಾಗುತ್ತಿದ್ದಾರೆ.
ಇತ್ತೀಚಿಗಷ್ಟೇ ರೋರಿಂಗ್ ಸ್ಟಾರ್ ಶ್ರೀಮುರಳಿ ಅವರನ್ನ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ಫೋಟೋ ಹಂಚಿಕೊಂಡಿರುವ ಶಶಿ, 'ಶ್ರೀಮುರುಳಿ ಅವರನ್ನ ಮಾತನಾಡಿಸಿರುವುದು ಸಂತಸ ತಂದಿದೆ' ಎಂದು ಹೇಳಿಕೊಂಡಿದ್ದಾರೆ.
View this post on InstagramA post shared by bigg fan of kavi shashi 😍 (@kavi_shashi_army) on
ನುಡಿದಂತೆ ನಡೆದ 'ಬಿಗ್ ಬಾಸ್' ವಿನ್ನರ್ ಶಶಿ ಕುಮಾರ್.!
ಶ್ರೀಮುರಳಿ ಅವರನ್ನ ಭೇಟಿಯಾಗಿರುವುದು ಶಶಿ ಫಾಲೋವರ್ಸ್ ಗೆ ಕುತೂಹಲ ಮೂಡಿಸಿದೆ. ಯಾಕಂದ್ರೆ ಶ್ರೀಮುರಳಿ ಸಿನಿಮಾದಲ್ಲಿ ಶಶಿ ಏನಾದರೂ ಅಭಿನಯಿಸ್ತಾರಾ ಎಂಬ ಪ್ರಶ್ನೆಯೂ ಉದ್ಭವವಾಗಿದೆ.
ಪರೀಕ್ಷೆಗಾಗಿ ಚಿತ್ರೀಕರಣಕ್ಕೆ ರಜೆ ಹಾಕಿದ ಭರಾಟೆ ನಾಯಕಿ
ಈ ಬಗ್ಗೆ ಹೇಳಿಕೊಂಡಿರುವ ಶಶಿ ಸಿನಿಮಾ ಬಗ್ಗೆ ಪ್ರಸ್ತಾಪಿಸಿಲ್ಲ. ಆದ್ರೆ ಕೃಷಿಗೆ ಸಂಬಂಧ ಪಟ್ಟ ಒಂದಿಷ್ಟು ವಿಚಾರಗಳನ್ನು ಶ್ರೀ ಮುರಳಿ ಜೊತೆ ಚರ್ಚೆ ಮಾಡಿರುವುದಾಗಿ ಹೇಳಿದ್ದಾರೆ. ಅಲ್ಲದೆ ಶ್ರೀ ಮುರಳಿ ತುಂಬ ಸರಳ ವ್ಯಕ್ತಿ, ಚೆನ್ನಾಗಿ ಮಾತನಾಡಿದ್ರು ಎಂದು ಮೆಚ್ಚಿಕೊಂಡಿದ್ದಾರೆ.
ಸದ್ಯ ಭರಾಟೆ ಸಿನಿಮಾ ಮಾಡ್ತಿರುವ ಶ್ರೀಮುರಳಿ ಅದಾದ ಬಳಿಕ ಮದಗಜ ಎಂಬ ಚಿತ್ರವನ್ನ ಕೈಗೆತ್ತಿಕೊಳ್ಳಲಿದ್ದಾರೆ. ಇನ್ನೊಂದೆಡೆ ಶಶಿಕುಮಾರ್ ಕೆಲವು ಟಿವಿ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದು, ಅವಕಾಶ ಸಿಕ್ಕರೇ ಸಿನಿಮಾದಲ್ಲು ನಟಿಸುವೆ ಎಂದು ಇಂಗಿತ ವ್ಯಕ್ತಪಡಿಸಿದ್ದರು.