Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅನ್ನ ತಿನ್ನುವವರು ರೈತ ಹೋರಾಟದ ಪರ ನಿಲ್ಲಬೇಕು: ಬಿಗ್ಬಾಸ್ ಶಶಿ
ಕೃಷಿ ಕಾಯ್ದೆ ವಿರೋಧಿಸಿ ರೈತರು ಮಾಡುತ್ತಿರುವ ಪ್ರತಿಭಟನೆಗೆ ಬೆಂಬಲಿಸುವವರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಸಾಗುತ್ತಿದೆ.
ಕನ್ನಡದ ನಟರು ಸಹ ನಿಧಾನಕ್ಕೆ ಕೃಷಿ ಕಾಯ್ದೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ರೈತರು ಮಾಡುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸುತ್ತಿದ್ದಾರೆ.
ನಿನ್ನೆ ನಟ ಚೇತನ್ ಅಹಿಂಸಾ ಕೃಷಿ ಹೋರಾಟದ ಪರವಾಗಿ ಟ್ವೀಟ್ ಮಾಡಿದ್ದರು. ನಟ ಪ್ರಕಾಶ್ ರೈ ಸಹ ರೈತ ಹೋರಾಟವನ್ನು ಬೆಂಬಲಿಸಿದ್ದರು. ಇಂದು ಶಿವರಾಜ್ ಕುಮಾರ್ ರೈತ ಹೋರಾಟದ ಪರ ನಿಲ್ಲುವುದಾಗಿ ಹೇಳಿದ್ದಾರೆ.
ಇದೀಗ ಬಿಗ್ಬಾಸ್ ಖ್ಯಾತಿಯ ಶಶಿ, ರೈತ ಹೋರಾಟದ ಪರ ನಿಂತಿದ್ದು, ಇಂದು ಬೆಂಗಳೂರಿನ ಮೌರ್ಯ ವೃತ್ತದಲ್ಲಿ ನಡೆದ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಶಶಿ, 'ಅನ್ನ-ತರಕಾರಿ ತಿನ್ನುವ ಪ್ರತಿಯೊಬ್ಬರು, ರೈತ ಹೋರಾಟವನ್ನು ಬೆಂಬಲಿಸಬೇಕು' ಎಂದಿದ್ದಾರೆ.
ಕಳೆದ ಬಾರಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದೆವು, ಆದರೆ ಕೇಂದ್ರ ಸರ್ಕಾರ ಪ್ರತಿಕ್ರಿಯಿಸಲಿಲ್ಲ. ಈ ಸರ್ಕಾರವು ತನಗೆ ತೋಚಿದ್ದೆ ಸರಿ ಎಂಬ ಧೋರಣೆಯೊಂದಿಗೆ ಮುಂದೆ ಸಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು ಶಶಿ.
Recommended Video
ಪ್ರತಿಭಟನಾ ನಿರತ ರೈತರೊಂದಿಗೆ ಸರ್ಕಾರ ಮಾತುಕತೆ ನಡೆಸಿ, ಕಾಯ್ದೆಯಲ್ಲಿನ ನಕಾರಾತ್ಮಕ ಅಂಶಗಳನ್ನು ತೆಗೆದು ಸಕಾರಾತ್ಮಕ ಅಂಶಗಳನ್ನು ಉಳಿಸಿಕೊಂಡರೆ, ಕೇಂದ್ರ ಸರ್ಕಾರಕ್ಕೂ ಸೂಕ್ತ, ರೈತರಿಗೂ ಸೂಕ್ತ ಎಂದಿದ್ದಾರೆ ಶಶಿ.