Don't Miss!
- News ‘ಕಾಂಗ್ರೆಸ್ ಡೇಂಜರ್’ ಪೋಸ್ಟರ್ ಬಿಡುಗಡೆ ಮಾಡಿದ ಬಿಜೆಪಿ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುತಾತ್ಮ ಯೋಧ ಸಂದೀಪ್ ಕುಟುಂಬಕ್ಕೆ ನೆರವಾದ 'ಬಿಗ್ ಬಾಸ್' ಪ್ರಥಮ್
'ಬಿಗ್ ಬಾಸ್ ಕನ್ನಡ 4' ನಲ್ಲಿ 50 ಲಕ್ಷ ಗೆದ್ದ ಪ್ರಥಮ್ ಅಂದು, ವೇದಿಕೆಯಲ್ಲೇ ಈ ದುಡ್ಡು ಯೋಧರಿಗೆ, ರೈತರಿಗೆ, ಬಡ ಜನರಿಗೆ ಮೀಸಲು ಎಂದು ಮಾತು ಕೊಟ್ಟಿದ್ದರು.
ಈಗ 'ಬಿಗ್ ಬಾಸ್' ಫಿನಾಲೆ ವೇದಿಕೆಯಲ್ಲಿ ಕೊಟ್ಟ ಮಾತನ್ನ ಒಳ್ಳೆ ಹುಡುಗ ಪ್ರಥಮ್ ಉಳಿಸಿಕೊಂಡಿದ್ದಾರೆ. ಹೌದು, ಜಮ್ಮು ಕಾಶ್ಮೀರದ ಸೋನ್ ಬರ್ಗ್'ನಲ್ಲಿ ಹಿಮಪಾತ ದುರಂತದಲ್ಲಿ ವೀರ ಮರಣ ಹೊಂದಿದ್ದ ಹಾಸನದ ಯೋಧ ಸಂದೀಪ್ ಕುಮಾರ್ ಕುಟುಂಬಕ್ಕೆ ಪ್ರಥಮ್ ನೆರವಾಗಿದ್ದಾರೆ.['ಬಿಗ್ ಬಾಸ್'ನಲ್ಲಿ 'ಪ್ರಥಮ್' ಗೆದ್ದ 50 ಲಕ್ಷ ರೈತರಿಗೆ, ಯೋಧರಿಗೆ ಮೀಸಲು!]
ಹುತಾತ್ಮ ಯೋಧನ ಮನೆಗೆ ಪ್ರಥಮ್ ಭೇಟಿ
ಜಮ್ಮು ಕಾಶ್ಮೀರದ ಹಿಮಕುಸಿತಕ್ಕೆ ಸಿಲುಕಿ ವೀರಮರಣವನ್ನಪ್ಪಿದ ಯೋಧ ಸಂದೀಪ್ ಕುಮಾರ್ ಶೆಟ್ಟಿ ಅವರ ಮನೆಗೆ ನಿನ್ನೆ (ಫೆಬ್ರವರಿ 9) 'ಬಿಗ್ ಬಾಸ್' ವಿನ್ನರ್ ಪ್ರಥಮ್ ಭೇಟಿ ನೀಡಿದ್ದಾರೆ.['ಬಿಗ್ ಬಾಸ್' ಫಿನಾಲೆಯಲ್ಲಿ ಕನ್ನಡಿಗರ ಮನಗೆದ್ದ ತಂದೆ-ಮಗ!]
ಯೋಧನ ಕುಟುಂಬಕ್ಕೆ 50 ಸಾವಿರ ನೆರವು
ಯೋಧ ಸಂದೀಪ್ ಅವರ ಮನೆಗೆ ಭೇಟಿ ನೀಡಿದ್ದ ಪ್ರಥಮ್, ಸಂದೀಪ್ ಪೋಷಕರಾದ ಪುಟ್ಟರಾಜು ಹಾಗೂ ಗಂಗಮ್ಮನವರಿಗೆ 50 ಸಾವಿರ ರೂಪಾಯಿ ನೀಡುವುದರ ಮೂಲಕ ಸಹಾಯವಾಗಿದ್ದಾರೆ.
ಸಂದೀಪ್ ಅವರ ಸಮಾಧಿಗೆ ನಮನ
ಸಂದೀಪ್ ಕುಮಾರ್ ಶೆಟ್ಟಿ ಅವರ ಸ್ವಗ್ರಾಮ ದೇವಿಹಳ್ಳಿಗೆ ತೆರೆಳಿದ್ದ ಪ್ರಥಮ್, ಸಂದೀಪ್ ಸಮಾಧಿಗೆ ನಮಸ್ಕರಿಸಿ ಯೋಧನಿಗೆ ಗೌರವ ಸಲ್ಲಿಸಿದರು.
ಪ್ರಥಮ್ ಮೊದಲ ಹೆಜ್ಜೆ!
ನಾನು ಚಿಕ್ಕವನಿದ್ದಾಗ ಯೋಧನಾಗಬೇಕು ಅಂತಾ ಆಸೆ ಪಟ್ಟಿದ್ದೆ ಎಂದು ಹಲವು ಬಾರಿ ಹೇಳಿದ್ದ ಪ್ರಥಮ್, ಸಂದೀಪ್ ಕುಟುಂಬಕ್ಕೆ ನೆರವಾಗುವುದರ ಮೂಲಕ ಈ ತಮ್ಮ ಮೊದಲ ಹೆಜ್ಜೆ ಇಟ್ಟಿದ್ದಾರೆ.