Don't Miss!
- News ಲೋಕಸಭಾ ಚುನಾವಣೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಎಚ್ಡಿಕೆ ಮೇಕೆದಾಟು ಅಸ್ತ್ರ
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೆಣ್ಣು ಮಗುವಿಗೆ ಜನ್ಮ ನೀಡಿದ ಬಿಗ್ ಬಾಸ್ ಅಕ್ಷತಾ ಪಾಂಡವಪುರ
ಬಿಗ್ ಬಾಸ್ ಕನ್ನಡ 6ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದ ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವಪುರ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಜನವರಿ 15 ರಂದು ನಮ್ಮ ಮನೆಗೆ ಲಕ್ಷ್ಮಿ ಬಂದಿದ್ದಾಳೆ ಎಂದು ನಟಿ ಅಕ್ಷತಾ ಇನ್ಸ್ಟಾಗ್ರಾಂನಲ್ಲಿ ಸಂತಸ ಹಂಚಿಕೊಂಡಿದ್ದಾರೆ.
ಅಕ್ಷತಾ ಹೆಣ್ಣು ಮಗುವಿಗೆ ಜನ್ಮ ನೀಡಿರುವ ಸಂಗತಿ ಹಂಚಿಕೊಂಡ ನಂತರ ಅನೇಕರು ಶುಭಾಶಯ ಕೋರಿದ್ದಾರೆ. ಗರ್ಭಿಣಿ ಸಂದರ್ಭ ಫೋಟೋ ಶೇರ್ ಮಾಡಿರುವ ಅಕ್ಷತಾ ಅದರ ಮೇಲೆ 'ಲಕ್ಷ್ಮಿ' ಎಂದು ಕನ್ನಡದಲ್ಲಿ ಬರೆದುಕೊಂಡಿದ್ದಾಳೆ.
ಹೊಸ ವರ್ಷದಲ್ಲಿ ಹೊಸ ಜೀವವನ್ನು ಸ್ವಾಗತಿಸಲಿರುವ ಬಿಗ್ ಬಾಸ್ ಅಕ್ಷತಾ ಪಾಂಡವಪುರ
ಕಳೆದ ತಿಂಗಳು ಪತಿಯ ಜೊತೆಗಿನ ಸೀಮಂತದ ಫೋಟೋ ಹಂಚಿಕೊಂಡಿದ್ದ ಅಕ್ಷತಾ ''ಕಳೆದ 8 ತಿಂಗಳಿಗಿಂತ ಬರುವ 1 ತಿಂಗಳ ಮೇಲೇನೆ ಹೆಚ್ಚು ಪ್ರೀತಿ.. ಈ ಬಾರಿಯ ಹೊಸವರ್ಷದ ನಿರೀಕ್ಷೆಗೆ ನಮ್ಮಿಬ್ಬರಿಗೂ ಒಳಗಿರುವ ಜೀವವೇ ಕಾರಣ..'' ಎಂದು ಪೋಸ್ಟ್ ಹಾಕಿದ್ದರು.
ಅಂದ್ಹಾಗೆ, ರಂಗಭೂಮಿ ಕಲಾವಿದೆ ಅಕ್ಷತಾ ಅವರ ಪತಿ ರಂಗ ನಿರ್ದೇಶಕ ಪ್ರಸನ್ನ ಸಾಗರ್. ಮೂಲತಃ ಸಾಗರದವರು. ಇವರಿಬ್ಬರದ್ದು ಲವ್ ಮ್ಯಾರೇಜ್. ಏಂಟು ವರ್ಷಗಳ ಹಿಂದೆ ಇವರಿಬ್ಬರು ಮದುವೆಯಾಗಿದ್ದಾರೆ.
ಅಕ್ಷತಾ ಮೂಲತಃ ಪಾಂಡವಪುರದ ಹುಡುಗಿ. ಕೆಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಮೈಸೂರಿನ ಜೆ ಎಸ್ ಎಸ್ ಕಾಲೇಜಿನಲ್ಲಿ ವಿಧ್ಯಾಭ್ಯಾಸ ಮುಗಿಸಿದ ಅವರು ನಂತರ ರಂಗಭೂಮಿಯಲ್ಲಿ ಹೆಚ್ಚು ತೊಡಗಿಸಿಕೊಂಡರು.
ತಾಳಿ ಕಟ್ಟಿದ ಪತಿ ಬಗ್ಗೆ 'ಬಿಗ್ ಬಾಸ್' ಮನೆಯಲ್ಲಿ ಅಕ್ಷತಾ ಹೀಗೇ ಹೇಳೋದಾ.?
Recommended Video
'ಒಬ್ಬಳು' ಅಕ್ಷತಾ ಪಾಂಡವಪುರ ಅವರ ಇತ್ತೀಚಿಗಿನ ನಾಟಕ. ಈ ನಾಟಕ ಏಕ ವ್ಯಕ್ತಿ ಪ್ರದರ್ಶನವಾಗಿದ್ದು, ಸುಮಾರು 30ಕ್ಕೂ ಹೆಚ್ಚು ಯಶಸ್ವಿ ಪ್ರದರ್ಶನಗಳನ್ನು ಕಂಡಿದೆ. ಪ್ರಸನ್ನ ಡಿ ಈ ನಾಟಕದ ನಿರ್ದೇಶನ ಮಾಡಿದ್ದಾರೆ. ಇದು ಅಕ್ಷತಾರಿಗೆ ಒಳ್ಳೆಯ ಹೆಸರು ತಂದು ಕೊಟ್ಟಿದೆ. ನಾಟಕಗಳ ಜೊತೆ ಜೊತೆಗೆ ಸಿನಿಮಾಗಳಲ್ಲಿಯೂ ಅಕ್ಷತಾ ಅಭಿನಯಿಸಿದ್ದಾರೆ. 'ಪಲ್ಲಟ' ಎನ್ನುವ ಸಿನಿಮಾದ ನಟನೆಗೆ ಅವರಿಗೆ ರಾಜ್ಯ ಪ್ರಶಸ್ತಿ ಬಂದಿದೆ. ಎಸ್ ಪಿ ರಘು ಈ ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದರು.