Don't Miss!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- News ಉಚಿತ ಉಪಹಾರದಿಂದ ಉಚಿತ ದಂತ ತಪಾಸಣೆವರೆಗೆ; ಮತದಾನ ಮಾಡಿದವರಿಗೆ ಭರ್ಜರಿ ಆಫರ್ ಕೊಟ್ಟ ಮೈಸೂರು ವ್ಯಾಪಾರಸ್ಥರು
- Automobiles HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬರ್ತಡೆ ಬಾಯ್ ಕಿಚ್ಚ ಸುದೀಪ್ ಗೆ ಹೊಸ ಬಿರುದು
ಸುದೀಪ್ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ಹತ್ತತ್ರ 16 ವರ್ಷಗಳು ಕಳೆದಿವೆ. ಇಲ್ಲಿಯವರೆಗೂ ಅಭಿಮಾನಿಗಳು ಅವರನ್ನ 'ಕಿಚ್ಚ', 'ನಲ್ಲ', 'ರನ್ನ', 'ಅಭಿನಯ ಚಕ್ರವರ್ತಿ' ಅಂತ ಪ್ರೀತಿಯಿಂದ ಕರೆದಿದ್ದಾರೆ.
ಇವತ್ತು ಕಿಚ್ಚ ಸುದೀಪ್ ಹುಟ್ಟುಹಬ್ಬ. 41ನೇ ವರ್ಷದ ಜನ್ಮದಿನವನ್ನ ತಮ್ಮ ಅಭಿಮಾನಿಗಳೊಂದಿಗೆ ಸುದೀಪ್ ಭರ್ಜರಿಯಾಗಿ ಆಚರಿಸಿಕೊಳ್ಳುತ್ತಿದ್ದಾರೆ. ಇದೇ ಸಂದರ್ಭದಲ್ಲಿ ಸುದೀಪ್ ಗೆ ಹೊಸ ಬಿರುದು ನೀಡಲಾಗಿದೆ.
ಅಭಿಮಾನಿಗಳ ಪ್ರೀತಿಯ 'ನಲ್ಲ'ನಿಗೆ 'ಕಲಾಭೂಷಣ' ಅಂತ ನಾಮಕರಣ ಮಾಡಿಲಾಗಿದೆ. ಸುದೀಪ್ ಮನೆ ಮುಂದೆ ಹಾಕಲಾಗಿರುವ ದೊಡ್ಡ ದೊಡ್ಡ ಪೋಸ್ಟರ್ ಗಳಲ್ಲಿ ''ಕಲಾಭೂಷಣ' ಸುದೀಪ್ ಅವರಿಗೆ ಜನ್ಮದಿನದ ಶುಭಾಶಯಗಳು'' ಅಂತ ಬರೆಯಲಾಗಿದೆ.
ಇನ್ನೂ ಪ್ರಕಾಶ್ ಜಯರಾಮ್ ನಿರ್ದೇಶಿಸುತ್ತಿರುವ ಹೊಸ ಚಿತ್ರದ ಪೋಸ್ಟರ್ ಮತ್ತು 'ಹೆಬ್ಬುಲಿ' ಪೋಸ್ಟರ್ ಗಳಲ್ಲೂ ಸುದೀಪ್ 'ಕಲಾಭೂಷಣ' ಆಗಿದ್ದಾರೆ. [ಕಿಚ್ಚನಿಗೆ 'ಕೋಟಿಗೊಬ್ಬ 2' ತಂಡದಿಂದ ಅಚ್ಚರಿಯ ಗಿಫ್ಟ್]
ಬರ್ತಡೆ ಪ್ರಯುಕ್ತ ಸುದೀಪ್ ಅವರಿಗೆ ಇದು ಬಿಗ್ ಸರ್ಪ್ರೈಸ್ ಆಗಿದ್ರೆ, ಅವರ ಅಭಿಮಾನಿಗಳಿಗಾಗಿ ಇಂದು ಕೆ.ಎಸ್.ರವಿಕುಮಾರ್ ಆಕ್ಷನ್ ಕಟ್ ಹೇಳುತ್ತಿರುವ 'ಕೋಟಿಗೊಬ್ಬ-2' ಚಿತ್ರದ ಟೀಸರ್ ಬಿಡುಗಡೆ ಆಗಲಿದೆ.