Don't Miss!
- Automobiles Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- Finance ಒಂದೇ ವರ್ಷದಲ್ಲಿ 210 ಕೋಟಿ ರೂ. ಆದಾಯ ಗಳಿಸಿದ ಭಾರತದಲ್ಲಿನ ಆಪಲ್ ಸ್ಟೋರ್ಗಳು
- News Subrahmanya Dhareshwara: ಖ್ಯಾತ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ವಿಧಿವಶ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Sports 'ಟಿ20 ವಿಶ್ವಕಪ್ಗೆ ಈತನನ್ನು ಆಯ್ಕೆ ಮಾಡಿ'; ಅಜಿತ್ ಅಗರ್ಕರ್ಗೆ ಬಂತು ದೊಡ್ಡ ಮನವಿ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಭಿಷೇಕ್ ಅಂಬರೀಶ್ ಜೊತೆ ಬಿಜೆಪಿ ಸಚಿವ ಮಾತುಕತೆ: ರಾಜಕೀಯಕ್ಕೆ ಧುಮುಕುತ್ತಾರ ಯುವನಟ?
ಅಂಬರೀಶ್-ಸಮಲತಾ ಪುತ್ರ, ಸ್ಯಾಂಡಲ್ವುಡ್ನ ಯುವನಟ ಅಭಿಷೇಕ್ ಅಂಬರೀಶ್ ಇತ್ತೀಚೆಗಷ್ಟೆ ಎಂಗೇಜ್ಮೆಂಟ್ ಮಾಡಿಕೊಂಡು ಕೆಲವೇ ದಿನಗಳಲ್ಲಿ ಗೃಹಸ್ಥಾಶ್ರಮ ಪ್ರವೇಶಿಸಲು ಸಜ್ಜಾಗಿದ್ದಾರೆ.
ಆದರೆ ಈ ನಡುವೆ ಮತ್ತೊಂದು ಸುದ್ದಿ ಅಭಿಷೇಕ್ ಅಂಬರೀಶ್ ಬಗ್ಗೆ ಹರಿದಾಡುತ್ತಿದೆ. ಅದುವೆ ರಾಜಕೀಯ ಪ್ರವೇಶದ ಸುದ್ದಿ!
ಹೌದು, ಅಭಿಷೇಕ್ ಅಂಬರೀಶ್ ಅವರು ರಾಜಕೀಯ ಪ್ರವೇಶ ಮಾಡಲಿದ್ದಾರೆ. ಈ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಜೋರಾಗಿ ಕೇಳಿ ಬರುತ್ತಿದ್ದವು. ಆದರೆ ಈ ಮಾತುಗಳನ್ನು ಅಭಿಷೇಕ್ರ ತಾಯಿ, ಸ್ವತಃ ಸಂಸದೆ ಸುಮಲತಾ ಅಂಬರೀಶ್ ನಿರಾಕರಿಸಿದ್ದರು. ಆದರೆ ಈಗ ಸ್ವತಃ ಹಾಲಿ ಸಚಿವರೊಬ್ಬರು ಈ ಬಗ್ಗೆ ಬಹಿರಂಗವಾಗಿ ಮಾತನಾಡಿದ್ದಾರೆ.
ಸಚಿವ ನಾರಾಯಣ ಗೌಡ, ಅಭಿಷೇಕ್ ಅಂಬರೀಶ್ ಅವರ ರಾಜಕೀಯ ಪ್ರವೇಶದ ಕುರಿತಾಗಿ ಮಾತನಾಡಿದ್ದು, ''ನಾವು ಮಂಡ್ಯದಲ್ಲಿ ಅಭಿಷೇಕ್ ಅಂಬರೀಶ್ ಜೊತೆ ಮಾತುಕತೆ ನಡೆಸಿದ್ದು, ಅವರು ಬಿಜೆಪಿ ಪಕ್ಷ ಸೇರುವ ಮೂಲಕ ರಾಜಕೀಯ ಪ್ರವೇಶ ಮಾಡಬೇಕೆಂದು ಕೋರಿದ್ದೇವೆ. ಮಾತುಕತೆಯ ಫಲಿತಾಂಶವನ್ನು ಇನ್ನೆರಡು ದಿನಗಳಲ್ಲಿ ತಿಳಿಸಲಿದ್ದೇವೆ'' ಎಂದಿದ್ದಾರೆ.
ಮುಂದುವರೆದು ಮಾತನಾಡಿರುವ ನಾರಾಯಣ ಗೌಡ, ''ಅಭಿಷೇಕ್ ಅಂಬರೀಶ್ ರಾಜಕೀಯ ಪ್ರವೇಶ ಮಾಡುವ ಯೋಚನೆಯಲ್ಲಿದ್ದಾರೆ ಎಂದು ಅರಿತು ನಾವು ಅವರನ್ನು ಭೇಟಿಯಾಗಿ ಬಿಜೆಪಿ ಸೇರುವಂತೆ ಕೇಳಿದ್ದೇವೆ. ಅಲ್ಲದೆ ಅವರ ತಾಯಿ, ಸಂಸದೆ ಸುಮಲತಾ ಅವರೊಟ್ಟಿಗೂ ಮಾತುಕತೆ ನಡೆಸಿದ್ದೇವೆ. ಅಭಿಷೇಕ್ ಅಂಬರೀಶ್ ಅವರು ಮಂಡ್ಯದಿಂದ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಿಲ್ಲಬೇಕೆನ್ನುವುದು ನಮ್ಮ ಇಚ್ಛೆ'' ಎಂದಿದ್ದಾರೆ.
ಅಭಿಷೇಕ್ ಅಂಬರೀಶ್ ಅವರದ್ದು ನಟನಾ ಕುಟುಂಬವಾಗಿರುವ ಜೊತೆಗೆ ರಾಜಕೀಯದ ಕುಟುಂಬವೂ ಹೌದು. ಅಭಿಷೇಕ್ರ ತಂದೆ ದಿವಂಗತ ಅಂಬರೀಶ್, ಶಾಸಕರಾಗಿ, ಸಂಸದರಾಗಿ, ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅಂಬರೀಶ್ರ ನಿಧನದ ಬಳಿಕ ಮಂಡ್ಯದಿಂದ ಬಿಜೆಪಿ ಬೆಂಬಲದೊಂದಿಗೆ ಪಕ್ಷೇತರವಾಗಿ ಚುನಾವಣೆಗೆ ಸ್ಪರ್ಧಿಸಿದ ಅಂಬರೀಶ್ ಪತ್ನಿ, ಅಭಿಷೇಕ್ ತಾಯಿ ಸುಮಲತಾ ಅವರು ಗೆದ್ದು ಸಂಸದೆಯಾಗಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಅವರು ನೇರವಾಗಿ ಬಿಜೆಪಿ ಟಿಕೆಟ್ ಮೂಲಕವೇ ಚುನಾವಣೆಗೆ ಸ್ಪರ್ಧಿಸುವ ಸಾಧ್ಯತೆ ಇದೆ.
ಜೆಡಿಎಸ್ನಿಂದ ಯುವ ನಟ, ರಾಜಕಾರಣಿ, ನಿಖಿಲ್ ಕುಮಾರಸ್ವಾಮಿ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಅವರಿಗೆ ಎದುರಾಳಿಯಾಗಿ ಬಿಜೆಪಿಯು ಅಭಿಷೇಕ್ ಅಂಬರೀಶ್ ಅವರನ್ನು ಬಳಸಿಕೊಳ್ಳುವ ಯೋಜನೆಯೊಟ್ಟಿಗೆ ಅವರನ್ನು ಪಕ್ಷಕ್ಕೆ ಸೆಳೆಯುವ ತಂತ್ರ ಮಾಡಿರುವ ಸಾಧ್ಯತೆ ಇದೆ.
ಅಭಿಷೇಕ್ ಅಂಬರೀಶ್ ಅವರು ಪ್ರಸ್ತುತ ಕೆಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ದುನಿಯಾ ಸೂರಿ ನಿರ್ದೇಶನದ 'ಬ್ಯಾಡ್ ಮ್ಯಾನರ್ಸ್' ಸಿನಿಮಾದಲ್ಲಿ ಅಭಿಷೇಕ್ ನಟಿಸುತ್ತಿದ್ದಾರೆ. ಇದರ ಜೊತೆಗೆ ಮತ್ತೊಂದು ಸಿನಿಮಾಕ್ಕೂ ಸಹಿ ಹಾಕಿದ್ದು, ಹೆಸರಿಡದ ಈ ಸಿನಿಮಾದಲ್ಲಿ 'ಕಾಂತಾರ' ನಟಿ ಸಪ್ತಮಿ ಗೌಡ ಸಹ ನಟಿಸುತ್ತಿದ್ದಾರೆ.