Don't Miss!
- Technology Google Maps: ಗೂಗಲ್ ಮ್ಯಾಪ್ಸ್ ನಲ್ಲಿ ಹೊಸ ಸೌಲಭ್ಯ! ಹತ್ತಿರದ EV ಚಾರ್ಜಿಂಗ್ ಸ್ಟೇಷನ್ ಸರ್ಚ್ ಬಲು ಸುಲಭ
- News BMRCL: ಚಲ್ಲಘಟ್ಟ ಮೆಟ್ರೋ ನಿಲ್ದಾಣದ ಬಳಿ ಪಾದಚಾರಿ ಸೇತುವೆ ನಿರ್ಮಾಣ-ಪ್ರಯೋಜನೆಗಳೇನು ಹಾಗೂ ವೆಚ್ಚ ಎಷ್ಟು?
- Lifestyle ಶಾಲೆಯನ್ನೇ ಬ್ಯೂಟಿ ಪಾರ್ಲರ್ ಮಾಡಿಕೊಂಡ ಪ್ರಿನ್ಸಿಪಾಲ್..! ಕೇಳಿದ ಶಿಕ್ಷಕಿ ಕೈ ಕಚ್ಚಿ ಹಲ್ಲೆ..!
- Automobiles ಜಾವಾ ಮೋಟಾರ್ಸೈಕಲ್ ಮಾಲೀಕರಿಗೆ ಸಿಹಿಸುದ್ದಿ: ಈ ಅವಕಾಶ ಕಳೆದುಕೊಳ್ಳಬೇಡಿ!
- Finance ಎಮರ್ಜೆನ್ಸಿ ಲೋನ್ ಅಂದ್ರೆ ಏನು, ಇದನ್ನು ಪಡೆದುಕೊಳ್ಳುವುದು ಹೇಗೆ ? ಇಲ್ಲಿದೆ ನೋಡಿ ಸುಲಭ ಉಪಾಯ
- Sports ಜೈಪುರ ವ್ಯಾಕ್ಸ್ ಮ್ಯೂಸಿಯಂನಲ್ಲಿ ವಿರಾಟ್ ಕೊಹ್ಲಿ ಮೇಣದ ಪ್ರತಿಮೆ; ದಿಗ್ಗಜರ ಸಾಲಿಗೆ ಸೇರಿದ ಶ್ರೇಷ್ಠ ಬ್ಯಾಟರ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಿಚ್ಚ ಸುದೀಪ್ ರನ್ನು ಶ್ರೀರಾಮುಲು ಭೇಟಿ ಮಾಡಿದ್ದು ಯಾಕೆ?
Recommended Video
ಬೆಂಗಳೂರು, ಜುಲೈ 23: ಬಿಜೆಪಿಯ 'ಸಮರ್ಥನೆಗಾಗಿ ಸಂಪರ್ಕ' ಅಭಿಯಾನದಡಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಶ್ರೀರಾಮುಲು ಅವರು ಖ್ಯಾತ ನಟ ಸುದೀಪ್ ಅವರನ್ನು ಇಂದು ಭೇಟಿ ಮಾಡಿದರು.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ನಾಲ್ಕು ವರ್ಷಗಳ ಸಾಧನೆಗಳನ್ನೊಳಗೊಂಡ 'ಸಮರ್ಥನೆಗಾಗಿ ಸಂಪರ್ಕ' ಪುಸ್ತಕವನ್ನು ಸುದೀಪ್ ಅವರಿಗೆ ಮೊಳಕಾಲ್ಮೂರು ಶಾಸಕ ಶ್ರೀರಾಮುಲು ನೀಡಿದರು.
ನರೇಂದ್ರ ಮೋದಿ ಸರ್ಕಾರದ ಕಳೆದ ಮೇ ತಿಂಗಳಿಗೆ ನಾಲ್ಕು ವರ್ಷ ಪೂರೈಸಿದ ನಿಮಿತ್ತ, ನಾಲ್ಕು ವರ್ಷಗಳ ಸರ್ಕಾರದ ಸಾಧನೆಗಳನ್ನು ಒಳಗೊಂಡ ಪುಸ್ತಕವನ್ನು ದೇಶದ ಪ್ರಮುಖ ಸೆಲೆಬ್ರಿಟಿಗಳಿಗೆ ನೀಡುವುದು ಈ ಅಭಿಯಾನದ ಉದ್ದೇಶವಾಗಿದೆ.
ಇದು ಬಿಜೆಪಿಯ 2019 ರ ಲೋಕಸಭಾ ಚುನಾವಣೆಯ ಪ್ರಚಾರದ ಭಾಗವೂ ಹೌದು.
ಶ್ರೀರಾಮುಲು ಮತ್ತು ಸುದೀಪ್ ಇಬ್ಬರೂ ಬಹುಕಾಲದ ಸ್ನೇಹಿತರಾಗಿದ್ದು, ಕಳೆದ ವಿಧಾನಸಭೆ ಚುನಾವಣೆಯ ಸಮಯದಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸಿದ್ದ ಶ್ರೀರಾಮುಲು ಅವರ ಪರವಾಗಿ ಸುದೀಪ್ ಪ್ರಚಾರ ನಡೆಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.
'ನಾನು ಯಾವುದೇ ಪಕ್ಷದ ಪರವಲ್ಲ. ನಾನು ನನ್ನ ಸ್ನೇಹಿತರಿಗಾಗಿ ಪ್ರಚಾರ ನಡೆಸುತ್ತೇನೆ' ಎಂದು ಸುದೀಪ್ ಚುನಾವಣೆಯ ಸಮಯದಲ್ಲೇ ಹೇಳಿದ್ದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ಮುಖಂಡರಾದ ಸೋಮಶೇಖರ ರೆಡ್ಡಿ, ಸಣ್ಣ ಪಕೀರಪ್ಪ ಅವರ ಪರವಾಗಿಯೂ ಸುದೀಪ್ ಪ್ರಚಾರ ನಡೆಸಿದ್ದರು.