Don't Miss!
- News ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದ ಡಾ. ಕೆ. ಸುಧಾಕರ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿಂಸಾತ್ಮಕ, ರಿಮೇಕ್ ಚಿತ್ರಗಳಿಗೆ ತೆರಿಗೆ ವಿನಾಯ್ತಿ ರದ್ದು
ಬೆಂಗಳೂರು: ಮಾಯಾಮೃಗ ಹಾಗೂ ಸಾಧನೆ ಧಾರಾವಾಹಿಗಳಿಗೆ ರಾಜ್ಯ ಸರ್ಕಾರ ನೀಡಿದ್ದ ಅತ್ಯುತ್ತಮ ಧಾರಾವಾಹಿ ಪ್ರಶಸ್ತಿಗಳನ್ನು ವಾಪಸ್ಸು ಪಡೆಯಲಾಗಿದೆ ಎಂದು ವಾರ್ತಾ ಸಚಿವ ಪ್ರೊ.ಬಿ.ಕೆ.ಚಂದ್ರಶೇಖರ್ ಪ್ರಕಟಿಸಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಈ ವರ್ಷದ ಮಾರ್ಚಿವರೆಗಿನ ಧಾರಾವಾಹಿಗಳನ್ನು ವೀಕ್ಷಿಸಿ ಪ್ರಶಸ್ತಿಗೆ ಆಯ್ಕೆ ಮಾಡಲು ಸಮಿತಿಯಾಂದನ್ನು ಸದ್ಯದಲ್ಲಿಯೇ ರಚಿಸಲಾಗುವುದು. ಈ ಸಂಬಂಧ ತಾವು ಹಾಗೂ ಮುಖ್ಯಮಂತ್ರಿಗಳು ಚರ್ಚಿಸುವುದಾಗಿ ತಿಳಿಸಿದರು. ಪ್ರಶಸ್ತಿಗಳ ಸಂಖ್ಯೆಗೆ ಮಿತಿ ಹೇರುವುದಾಗಿ ಸ್ಪಷ್ಟವಾಗಿ ಹೇಳಿದ ಸಚಿವರು, ಖಾಸಗಿ ವಾಹಿನಿಗಳಲ್ಲಿ ಪ್ರಸಾರವಾಗುವ ಧಾರಾವಾಹಿಗಳಿಗೆ ಪ್ರಶಸ್ತಿ ನೀಡುವ ವಿಷಯದಲ್ಲಿ ತಮಗೇನೂ ಅಭ್ಯತರವಿಲ್ಲವೆಂದು ಹೇಳಿದರು.
ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಚಿತ್ರೋತ್ಸವ ನಡೆಯುವ ಸಂದರ್ಭದಲ್ಲಿ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ವಿತರಿಸುವುದಾಗಿ ತಿಳಿಸಿದ ಅವರು, ರಿಮೇಕ್ ಹಾಗೂ ಹಿಂಸಾ ಪ್ರಧಾನ ಚಿತ್ರಗಳಿಗೆ ತೆರಿಗೆ ವಿನಾಯ್ತಿ ನೀಡದಿರುವ ಇಂಗಿತ ವ್ಯಕ್ತಪಡಿಸಿದರು. ರಿಮೇಕ್ ಚಿತ್ರಗಳಿಂದ ಸರ್ಕಾರಕ್ಕೆ ಬರಬೇಕಾಗಿರುವ 12 ಕೋಟಿ ರುಪಾಯಿಗಳ ಬಾಕಿಯನ್ನು ಮನ್ನಾಗೊಳಿಸಿರುವುದಾಗಿ ಅವರು ತಿಳಿಸಿದರು.
(ಇನ್ಫೋ
ವಾರ್ತೆ)
ಮುಖಪುಟ
/
ಸ್ಯಾಂಡಲ್ವುಡ್