Don't Miss!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜೊಮ್ಯಾಟೊ ಡೆಲಿವರಿ ಬಾಯ್ ಪರ ನಿಂತ ನಟಿ ಪ್ರಣಿತಾ ಮತ್ತು ಪರಿಣೀತಿ
ಯುವತಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಕೆಲಸ ಕಳೆದುಕೊಂಡಿರುವ ಜೊಮ್ಯಾಟೊ ಡೆಲಿವರಿ ಬಾಯ್ ಕಾಮರಾಜ್ ಪರ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ.
Recommended Video
ಕಾಮರಾಜ್ ಯಾವುದೇ ತಪ್ಪು ಮಾಡಿಲ್ಲ ಎಂದು ಕಣ್ಣೀರು ಹಾಕುತ್ತ ವಿಡಿಯೋ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಅಳಲು ತೋಡಿಕೊಳ್ಳುತ್ತಿದ್ದಂತೆ ಅನೇಕರು ಜೊಮ್ಯಾಟೊ ಬಾಯ್ ಪರ ನಿಂತಿದ್ದಾರೆ. 15 ನಿಮಿಷ ತಡವಾಗಿ ಆಹಾರ ತಲುಪಿಸಿದ್ದ ಕಾರಣಕ್ಕೆ ಯುವತಿಯೇ ಚಪ್ಪಲಿಯಿಂದ ಹೊಡೆದಿದ್ದಾರೆ, ಅಲ್ಲದೆ ಸುಳ್ಳು ದೂರು ದಾಖಲಿಸಿದ್ದಾರೆ ಎಂದು ಕಾಮರಾಜ್ ವಿಡಿಯೋ ಮೂಲಕ ಹೇಳಿಕೊಂಡಿದ್ದಾರೆ.
ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹಕ್ಕೆ 1 ಲಕ್ಷ ನೆರವು ನೀಡಿದ ಪ್ರಣಿತಾ ಸುಭಾಷ್
ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಅನೇಕರು ಜೊಮ್ಯಾಟೊ ಬಾಯ್ ಬೆಂಬಲಕ್ಕೆ ನಿಂತಿದ್ದಾರೆ. ಟ್ವಿಟ್ಟರ್ ನಲ್ಲಿ #Mentoo ಅಭಿಯಾನ ಪ್ರಾರಂಭವಾಗಿದೆ. ಟ್ವಿಟ್ಟರ್ನಲ್ಲಿ ಕಾಮರಾಜ್ ಟ್ರೆಂಡಿಂಗ್ ನಲ್ಲಿದ್ದಾರೆ. ಆಮಾಯಕನ ಮೇಲೆ ಹಲ್ಲೆ ಮಾಡಿದ್ದಲ್ಲದೆ, ಹೊಟ್ಟೆಪಾಡಿಗಾಗಿ ದುಡಿಯುತ್ತಿದ್ದ ಕಾಮರಾಜ್ ಕೆಲಸ ಕಿತ್ತುಕೊಂಡಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಜೊಮ್ಯಾಟೊ ಬಾಯ್ ಬೆಂಬಲಕ್ಕೆ ನಟಿಯರು ಸಹ ನಿಂತಿದ್ದಾರೆ.
ಪರಿಣೀತಿ ಚೋಪ್ರಾ ಹೇಳಿದ್ದೇನು?
ಬಾಲಿವುಡ್ ನಟಿ ಪರಿಣೀತಿ ಚೋಪ್ರಾ ಟ್ವೀಟ್ ಮಾಡಿ, ಜೊಮ್ಯಾಟೊ ಇಂಡಿಯಾ ದಯವಿಟ್ಟು ಸತ್ಯವನ್ನು ಹುಡುಕಿ ಸಾರ್ವಜನಿಕವಾಗಿ ವರದಿ ಮಾಡಿ. ವ್ಯಕ್ತಿ ನಿರಪರಾಧಿಯಾಗಿದ್ದರೆ (ನಾನು ಆತನನ್ನು ನಂಬುತ್ತೇನೆ) ಹಲ್ಲೆ ಮಾಡಿದ ಮಹಿಳೆಗೆ ದಂಡ ವಿಧಿಸಿ. ಇದು ಅಮಾನವೀಯ, ನಾಚಿಕೆಗೇಡು ಮತ್ತು ಹೃದಯ ವಿದ್ರಾವಕವಾಗಿದೆ. ದಯವಿಟ್ಟು ನಾನು ಹೇಗೆ ಸಹಾಯ ಮಾಡಬಹುದು ಎಂದು ತಿಳಿಸಿ' ಎಂದು ಬರೆದುಕೊಂಡಿದ್ದಾರೆ.
ಪ್ರಣಿತಾ ಸುಭಾಷ್ ಟ್ವೀಟ್
ಇನ್ನು ಕನ್ನಡದ ನಟಿ ಪ್ರಣಿತಾ ಟ್ವೀಟ್ ಮಾಡಿ, 'ಆಹಾರ ವಿತರಣೆಯು ಸಮಯಕ್ಕೆ ಅನುಗುಣವಾಗಿರುತ್ತದೆ. ಆದರೆ ನ್ಯಾಯ ಅಲ್ಲವೇ? ಡೆಲಿವರಿ ಬಾಯ್ ಹೇಳುತ್ತಿರುವುದು ನಿಜವೇ ಆಗಿದ್ದರೆ ತಪ್ಪು ಮಾಡಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನ್ಯಾಯ ಬೇಗ ಸಿಗಲಿದೆ ಎಂದು ನಾನು ಭಾವಿಸುತ್ತೇನೆ' ಎಂದು ಟ್ವೀಟ್ ಮಾಡಿದ್ದಾರೆ.
ಪ್ರಣಿತಾ ಸುಭಾಷ್ರ ಮೆಚ್ಚಿನ ನಟ ಹಾಗೂ ಮೆಚ್ಚಿನ ಕನ್ನಡದ ನಟ ಯಾರು?
ಕಾಮರಾಜ್ ವಿಡಿಯೋದಲ್ಲಿ ಹೇಳಿದ್ದೇನು?
ಘಟನೆ ಬಗ್ಗೆ ವಿಡಿಯೋ ಮೂಲಕ ಮಾತನಾಡಿರುವ ಕಾಮರಾಜ್, 'ಟ್ರಾಫಿಕ್ ದಾಟಿ ಹೋಗುವಾಗ ಸ್ವಲ್ಪ ತಡವಾಗಿತ್ತು. ಆ ಯುವತಿ ನಾಲ್ಕನೇ ಮಹಡಿ ಆಹಾರ ತಂದುಕೊಡುವಂತೆ ಕರೆದರು, ನಾನು ಹೋದೆ, ಇಂಗ್ಲೀಷ್ ಭಾಷೆಯಲ್ಲಿ ಮಾತನಾಡುತ್ತಿದ್ರು. ಐಟಂ ತಡವಾಗಿದೆ ಕ್ಷಮಿಸಿ ಎಂದು ಹೇಳಿದೆ. ಆದರೂ ಅವರು ಕೇಳಿಲ್ಲ. ಜೊಮ್ಯಾಟೊಗೆ ದೂರು ನೀಡಿದರು. ದೂರು ಕೊಡಬೇಡಿ ಎಂದು ನಾನು ಕೇಳಿಕೊಂಡೆ' ಎಂದಿದ್ದಾರೆ.
ಚಪ್ಪಲಿಯಲ್ಲಿ ಹೊಡೆದಿದ್ದಾರೆ
'15 ಲೇಟಾಗಿದ್ದಕ್ಕೆ ದುಡ್ಡು ಕೊಡಲ್ಲ ಎಂದು ಹೇಳಿದರು. ಊಟನೂ ಕೊಡಲ್ಲ ಏನ್ ಬೇಕಾದರು ಮಾಡಿಕೊ ಎಂದರು. ಊಟ ತೆಗೆದುಕೊಂಡು ನಾನು ಹೊರಡುವಾಗ ಚಪ್ಪಲಿಯಲ್ಲಿ ಹೊಡೆದರು. ಆಕೆಯಿಂದ ತಪ್ಪಿಸಿಕೊಳ್ಳುವಾಗ ಅವರ ಕೈಯಲ್ಲಿದ್ದ ಉಂಗುರ ಅವರ ಮೂಗಿಗೆ ತಾಗಿದೆ. ನಾನು ಹಲ್ಲೆ ಮಾಡಿಲ್ಲ' ಎಂದು ಹೇಳಿದ್ದಾರೆ.