ಅಕ್ಷರಗಳ ಮೂಲಕ ಸಂಚಾರಿ ವಿಜಯ್‌ ಅನ್ನು ಅನಂತವಾಗಿಸುವ ಯತ್ನ 'ಅನಂತವಾಗಿರು' ಪುಸ್ತಕ

''ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ಅವರು ಕನ್ನಡ ಸಿನಿಮಾ ರಂಗಕ್ಕೆ ಆಸ್ತಿಯಾಗಿದ್ದರು. ಇಂತಹ ಪ್ರತಿಭಾವಂತ ಕಲಾವಿದನನ್ನು ಕಳೆದುಕೊಂಡ ನಂತರ ಅವರ ಪರ್ಯಾಯ ನಟನನ್ನು ಹುಡುಕುವ ಕಷ್ಟ ನಮಗೆಲ್ಲ ಎದುರಾಗಲಿದೆ'' ಎಂದರು ನಿರ್ದೇಶಕ ಎಂ.ಎಸ್. ರಮೇಶ್.

ಡಾ.ಶರಣು ಹುಲ್ಲೂರು ಸಂಪಾದಿಸಿರುವ ಸಂಚಾರಿ ವಿಜಯ್ ಬದುಕಿನ ಕುರಿತಾದ ಅನಂತವಾಗಿರು ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡಿದರು.

''ಸಣ್ಣ ವಯಸ್ಸಿನಲ್ಲೇ ಅಪಾರ ಸಾಧನೆ ಮಾಡಿದವರು ವಿಜಯ್, ಹಾಗಾಗಿ ಅವರು ಪುಸ್ತಕದ ಶೀರ್ಷಿಕೆಯಂತೆ ಅನಂತವಾಗಿಯೇ ಇರುತ್ತಾರೆ'' ಎಂದರು. ಅತೀ ಕಡಿಮೆ ಅವಧಿ ಇಂಥದ್ದೊಂದು ಪುಸ್ತಕ ಸಾಧ್ಯವಾಗಿದ್ದಕ್ಕೆ ಪುಸ್ತಕದ ಸಂಪಾದಕ ಶರಣು ಹುಲ್ಲೂರು ಅವರಿಗೆ ಕೃತಜ್ಞತೆ ಸಲ್ಲಿಸಿದರು.

ಸಂಚಾರಿ ಥಿಯೇಟರ್ ಆಯೋಜನೆ ಮಾಡಲಾಗಿದ್ದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಲೇಖಕ ವಸುಧೇಂದ್ರ, ನಿರ್ದೇಶಕರಾದ ಬಿ.ಸುರೇಶ್, ಮಂಸೋರೆ, ರಂಗ ನಿರ್ದೇಶಕಿ ಎನ್‍. ಮಂಗಳಾ, ಸಂಚಾರಿ ವಿಜಯ್ ಅವರ ಸಹೋದರರಾರ ವಿರೂಪಾಕ್ಷ ಮತ್ತು ಸಿದ್ದೇಶ್ ಮತ್ತು ಸಂಚಾರಿ ವಿಜಯ್ ಅವರ ಸ್ನೇಹಿತರು ಹಾಗೂ ರಂಗ ಕರ್ಮಿಗಳು ಹಾಜರಿದ್ದರು.

ಸಂಚಾರಿ ಥಿಯೇಟರ್ ಸದಸ್ಯರು ಸಂಚಾರಿ ವಿಜಯ್ ಅವರ ನಾಟಕಗಳ ರಂಗಗೀತೆಗಳನ್ನು ಹಾಡಿದರೆ, ವಿಜಯ್ ಅವರ ಜೀವನದ ಸಂಕ್ಷಿಪ್ತ ರೂಪ ನಾಟಕ ಮತ್ತು ವಿಡಿಯೋ ದೃಶ್ಯ ಪ್ರದರ್ಶನವಾಯಿತು.

ಜೀವನ ಚರಿತ್ರೆ ಮಾದರಿಯಲ್ಲಿ ರೂಪಗೊಂಡ ಪುಸ್ತಕ

ಜೀವನ ಚರಿತ್ರೆ ಮಾದರಿಯಲ್ಲಿ ರೂಪಗೊಂಡ ಪುಸ್ತಕ

ಇದೊಂದು ರೀತಿಯಲ್ಲಿ ಜೀವನ ಚರಿತ್ರೆ ಮಾದರಿಯಲ್ಲೇ ರೂಪುಗೊಂಡಿರುವ ಪುಸ್ತಕ. ಬಾಲ್ಯವನ್ನು ವಿಜಯ್ ಅವರ ಇಬ್ಬರು ಸಹೋದರರು ಕಟ್ಟಿಕೊಟ್ಟರೆ, ಸ್ಕೂಲ್, ಕಾಲೇಜು ದಿನಗಳ ನೆನಪುಗಳನ್ನು ಗೆಳೆಯರು ಹೇಳಿಕೊಂಡಿದ್ದಾರೆ. ಕಷ್ಟದ ದಿನಗಳನ್ನು ಮತ್ತು ತಾನು ನಡೆದು ಬಂದ ಹಾದಿಯನ್ನು ಸ್ವತಃ ವಿಜಯ್ ಅವರೇ ಹಲವು ಸಂದರ್ಶನಗಳಲ್ಲಿ ಹೇಳಿಕೊಂಡಿದ್ದನ್ನು ದಾಖಲಿಸಲಾಗಿದೆ.

ರಂಗಭೂಮಿ ನಂಟಿನ ಬಗ್ಗೆ ಮಂಗಳಾ ಬರೆದಿದ್ದಾರೆ

ರಂಗಭೂಮಿ ನಂಟಿನ ಬಗ್ಗೆ ಮಂಗಳಾ ಬರೆದಿದ್ದಾರೆ

ಬೆಂಗಳೂರಿಗೆ ಬಂದಾಗಿನ ಕೆಲವು ದಿನಗಳ ನೆನಪುಗಳನ್ನು ವಿಜಯ್‍ ಹೇಳಿಕೊಂಡಿದ್ದಾರೆ. ಅದು ದಾಖಲಾಗಿದೆ. ಅಲ್ಲಿಂದ ರಂಗಭೂಮಿಗೆ ಬಂದ ಮೊದಲ ದಿನಗಳನ್ನು ಖ್ಯಾತ ಯುವ ರಂಗ ನಿರ್ದೇಶಕ ಕೆ.ಶ್ರೀನಿವಾಸ್‍ ದಾಖಲಿಸಿದ್ದಾರೆ. ಇವರ ನಿರ್ದೇಶನದ ಮೊದಲ ನಾಟಕದ ಮೂಲಕ ವಿಜಿ ನಟನೆಗೆ ಬಂದವರು. ಆನಂತರ ಹಲವು ನಾಟಕ ತಂಡಗಳಲ್ಲಿ ಕೆಲಸ ಮಾಡಿದ್ದು ದಾಖಲಾಗಿದೆ. ಸಂಚಾರಿ ತಂಡಕ್ಕೆ ಬಂದ ನಂತರದ ರಂಗ ಒಡನಾಟವನ್ನು ಮಂಗಳಾ ಅವರು ಬರೆದಿದ್ದಾರೆ.

'ಹರಿವು' ಸಿನಿಮಾ ಬಗ್ಗೆ ಮಂಸೋರೆ ಲೇಖನ

'ಹರಿವು' ಸಿನಿಮಾ ಬಗ್ಗೆ ಮಂಸೋರೆ ಲೇಖನ

ವಿಜಿ ನಟನೆಯ ಮೊದಲ ಸಿನಿಮಾ 'ರಂಗಪ್ಪ ಹೋಗ್ಬಿಟ್ನ'. ಈ ಸಿನಿಮಾದ ನಿರ್ದೇಶಕ ಎಂ.ಎಲ್ ಪ್ರಸನ್ನ ಆ ಕುರಿತಾಗಿ ಬರೆದಿದ್ದಾರೆ. ವಿಜಯ್ ಅವರ ಸಿನಿಮಾ ಜರ್ನಿಯಲ್ಲಿಯ ಉತ್ತಮ ಸಿನಿಮಾಗಳಾದ 'ಹರಿವು' ಕುರಿತು ಮಂಸೋರೆ, 'ನಾತಿಚರಾಮಿ' ಕುರಿತು ಸಂಧ್ಯಾರಾಣಿ, 'ಮೇಲೊಬ್ಬ ಮಾಯಾವಿ' ಕುರಿತು ನಿರ್ದೇಶಕ ನವೀನ್, 'ಕೃಷ್ಣ ತುಳಸಿ' ಚಿತ್ರದ ಬಗ್ಗೆ ನಿರ್ದೇಶಕರು, 'ತಲೆದಂಡ 'ಚಿತ್ರದ ಕುರಿತು ನಿರ್ದೇಶಕರು, 'ದಾಸ್ವಾಳ' ಸಿನಿಮಾದ ಬಗ್ಗೆ ನಿರ್ದೇಶಕ ಎಂ.ಎಸ್ ರಮೇಶ್, 'ನಾನು ಅವನಲ್ಲ ಅವಳು' ಚಿತ್ರದ ಬಗ್ಗೆ ಲಿಂಗದೇವರು, 'ಪುಗ್ಸಟ್ಟೆ ಲೈಫ್‍' ಬಗ್ಗೆ ಅರವಿಂದ್ ಕುಪ್ಳಿಕರ್ ಬರೆದಿದ್ದಾರೆ.

ನೀನಾಸಂ ಸತೀಶ್ ಬರೆದಿದ್ದಾರೆ

ನೀನಾಸಂ ಸತೀಶ್ ಬರೆದಿದ್ದಾರೆ

ಗೆಳೆಯನ ಒಡನಾಟದ ಕುರಿತು ನಟ ನೀನಾಸಂ ಸತೀಶ್, ಗೆಳೆಯರಾದ ವೀರು ಮಲ್ಲಣ್ಣನವರ, ಪತ್ರಕರ್ತರಾದ ಪದ್ಮಾ ಶಿವಮೊಗ್ಗ ಮತ್ತು ಶೇಶಾದ್ರಿ ಅವರು ವಿಜಿಯ ಸಾಮಾಜಿಕ ಕಾರ್ಯದ ಬಗ್ಗೆ ಬರೆದರೆ, ಮಾಧ್ಯಮಗಳ ಜತೆಗಿನ ಸಂಬಂಧವನ್ನು ಪತ್ರಕರ್ತರಾದ ಹರೀಶ್ ಸೀನಪ್ಪ, ವಿಜಯ್ ಭರಮಸಾಗರ್ ದಾಖಲಿಸಿದ್ದಾರೆ. ಶ್ರೀದೇವಿ ಮಹಾತ್ಮೆ ಮತ್ತು ವಿಜಯ್ ಕುರಿತಾಗಿ ವಸುಧೇಂದ್ರ ಅವರು ಬರೆದಿದ್ದರೆ, ಉಸಿರು ತಂಡದೊಂದಿಗಿನ ಸಮಾಜಮುಖಿ ಕಾರ್ಯದ ಬಗ್ಗೆ ಕವಿರಾಜ್, 'ಹರಿವು' ಚಿತ್ರದ ಮತ್ತೊಂದು ಅಧ್ಯಾಯವನ್ನು ಆಶಾ ಬೆನಕೊಪ್ಪ ಬರೆದಿದಿದ್ದಾರೆ.

ಟ್ರಾನ್ಸಜಂಡರ್ ಜತೆಗಿನ ಒಡನಾಟವನ್ನು ಅಕ್ಕೈ ಪದ್ಮಶಾಲಿ ಬರೆದಿದ್ದಾರೆ

ಟ್ರಾನ್ಸಜಂಡರ್ ಜತೆಗಿನ ಒಡನಾಟವನ್ನು ಅಕ್ಕೈ ಪದ್ಮಶಾಲಿ ಬರೆದಿದ್ದಾರೆ

ರಾಷ್ಟ್ರ ಪ್ರಶಸ್ತಿ ಮತ್ತು ವಿಜಿಯ್ ಕುರಿತು ಪುಟ್ಟಸ್ವಾಮಿ ಅವರು, ಟ್ರಾನ್ಸಜಂಡರ್ ಜತೆಗಿನ ಒಡನಾಟವನ್ನು ಅಕ್ಕೈ ಪದ್ಮಶಾಲಿ, ಸ್ನೇಹಜೀವಿಯ ಕುರಿತಾದ ಶಿವು ಮಾಕಳ್ಳಿ ಹೀಗೆ ಅನೇಕ ಹಿರಿಯ ಬರಹಗಾರರ ಲೇಖನಗಳನ್ನು ಒಳಗೊಂಡಿರುವ ಕೃತಿ ಇದಾಗಿದೆ. ರಾಜ್ಯ ಪ್ರಶಸ್ತಿ ವಿಜೇತ ಲೇಖಕ, ಪತ್ರಕರ್ತ ಡಾ.ಶರಣು ಹುಲ್ಲೂರು ಸಂಪಾದಕತ್ವದಲ್ಲಿ ಈ ಪುಸ್ತಕ ಬಂದಿದೆ. ಬೆಂಗಳೂರಿನ ಕಾಯಕ ಪ್ರಕಾಶನದ ಮೂರನೇ ಕೃತಿ ಇದಾಗಿದೆ.

More from Filmibeat

English summary
Book about Sanchari Vijay 'Ananthavagiru' by Sharanu Hulluru released. Sanchari Vijay's friends, directors written about Sanchari Vijay.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X