Don't Miss!
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೈ ಎಲೆಕ್ಷನ್ ಅಖಾಡಕ್ಕೆ ಧುಮುಕಿದ ಬ್ರಹ್ಮಾನಂದಂ ಮತ್ತು ಸಾಧುಕೋಕಿಲಾ
ಡಿಸೆಂಬರ್ 5 ರಂದು ಕರ್ನಾಟಕದಲ್ಲಿ ಉಪಚುನಾವಣೆ ನಡೆಯಲಿದೆ. ಅನರ್ಹರಾಗಿದ್ದ ಹದಿನೈದು ವಿಧಾನಸಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆಯುತ್ತಿದ್ದು, ಈಗಾಗಲೇ ಎಲ್ಲ ಕಡೆಯೂ ಅಬ್ಬರದ ಪ್ರಚಾರ ಸಾಗಿದೆ.
ಇದೀಗ ಬೈ ಎಲೆಕ್ಷನ್ ಗೆ ಸ್ಟಾರ್ ನಟರ ಎಂಟ್ರಿಯಾಗಿದೆ. ತೆಲುಗು ಹಾಸ್ಯ ನಟ ಬ್ರಹ್ಮಾನಂದಂ ಮತ್ತು ಕನ್ನಡ ಹಾಸ್ಯ ನಟ ಸಾಧುಕೋಕಿಲಾ ಉಪಚುನಾವಣೆ ಅಖಾಡಕ್ಕೆ ಧುಮುಕಿದ್ದಾರೆ.
ಚಿಕ್ಕಬಳ್ಳಾಪುರ: ಸುಧಾಕರ್ ಪರ ಖ್ಯಾತ ಹಾಸ್ಯನಟ ಬ್ರಹ್ಮಾನಂದಂ ಪ್ರಚಾರ
ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಸುಧಾಕರ್ ಅವರ ಪರ ಹಾಸ್ಯನಟ ಬ್ರಹ್ಮಾನಂದಂ ಪ್ರಚಾರ ಮಾಡಿದ್ದಾರೆ. ತೆಲುಗು ಭಾಷಿಗರು ಹೆಚ್ಚಿರುವ ಪ್ರದೇಶಗಳಿಗೆ ಬ್ರಹ್ಮಾನಂದಂ ಅವರನ್ನ ಕರೆಸಿ, ಮತಯಾಚನೆ ಮಾಡಿಸಿದ್ದಾರೆ.
"ಮಂತ್ರಿಗಿರಿಗಷ್ಟೇ ಈ ಉಪಚುನಾವಣೆ" ಎಂದು ಬಿಜೆಪಿ ಜರಿದ ಡಿ ಕೆ ಸುರೇಶ್
ಈ ಹಿಂದೆ ಹರ್ಷಿಕಾ ಪೂಣಚ್ಛ, ಹರಿಪ್ರಿಯಾ, ಭುವನ್, ದಿಗಂತ್ ಅವರು ಕೂಡ ಪ್ರಚಾರ ಮಾಡಿದ್ದರು. ಮತ್ತೊಂದೆಡೆ ಶಿವಾಜಿನಗರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷಾದ್ ಅವರ ಪರ ಕನ್ನಡ ಹಾಸ್ಯ ನಟ ಸಾಧುಕೋಕಿಲಾ ಮತಬೇಟೆ ಮಾಡಿದ್ದಾರೆ.
ರಿಜ್ವಾನ್ ಅರ್ಷಾದ್ ಅವರು ಅಭಿವೃದ್ದಿಗಾಗಿ ಕೆಲಸ ಮಾಡುವ ವ್ಯಕ್ತಿ. ಅವರ ಹಿಂದೆ ಡಿಕೆ ಶಿವಕುಮಾರ್ ಎಂಬ ಹುಲಿ ಇದೆ. ನಿಮ್ಮ ಮತ ಕಾಂಗ್ರೆಸ್ ಗೆ ಇರಲಿ'' ಎಂದು ಸಾಧು ಕೋಕಿಲಾ ಮತದಾರರಲ್ಲಿ ಮನವಿ ಮಾಡಿದ್ದಾರೆ.