Don't Miss!
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೈ ಎಲೆಕ್ಷನ್ ಅಖಾಡಕ್ಕೆ ಧುಮುಕಿದ ಬ್ರಹ್ಮಾನಂದಂ ಮತ್ತು ಸಾಧುಕೋಕಿಲಾ
ಡಿಸೆಂಬರ್ 5 ರಂದು ಕರ್ನಾಟಕದಲ್ಲಿ ಉಪಚುನಾವಣೆ ನಡೆಯಲಿದೆ. ಅನರ್ಹರಾಗಿದ್ದ ಹದಿನೈದು ವಿಧಾನಸಭೆ ಕ್ಷೇತ್ರಗಳಿಗೆ ಬೈ ಎಲೆಕ್ಷನ್ ನಡೆಯುತ್ತಿದ್ದು, ಈಗಾಗಲೇ ಎಲ್ಲ ಕಡೆಯೂ ಅಬ್ಬರದ ಪ್ರಚಾರ ಸಾಗಿದೆ.
ಇದೀಗ ಬೈ ಎಲೆಕ್ಷನ್ ಗೆ ಸ್ಟಾರ್ ನಟರ ಎಂಟ್ರಿಯಾಗಿದೆ. ತೆಲುಗು ಹಾಸ್ಯ ನಟ ಬ್ರಹ್ಮಾನಂದಂ ಮತ್ತು ಕನ್ನಡ ಹಾಸ್ಯ ನಟ ಸಾಧುಕೋಕಿಲಾ ಉಪಚುನಾವಣೆ ಅಖಾಡಕ್ಕೆ ಧುಮುಕಿದ್ದಾರೆ.
ಚಿಕ್ಕಬಳ್ಳಾಪುರ: ಸುಧಾಕರ್ ಪರ ಖ್ಯಾತ ಹಾಸ್ಯನಟ ಬ್ರಹ್ಮಾನಂದಂ ಪ್ರಚಾರ
ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ ಸುಧಾಕರ್ ಅವರ ಪರ ಹಾಸ್ಯನಟ ಬ್ರಹ್ಮಾನಂದಂ ಪ್ರಚಾರ ಮಾಡಿದ್ದಾರೆ. ತೆಲುಗು ಭಾಷಿಗರು ಹೆಚ್ಚಿರುವ ಪ್ರದೇಶಗಳಿಗೆ ಬ್ರಹ್ಮಾನಂದಂ ಅವರನ್ನ ಕರೆಸಿ, ಮತಯಾಚನೆ ಮಾಡಿಸಿದ್ದಾರೆ.
"ಮಂತ್ರಿಗಿರಿಗಷ್ಟೇ ಈ ಉಪಚುನಾವಣೆ" ಎಂದು ಬಿಜೆಪಿ ಜರಿದ ಡಿ ಕೆ ಸುರೇಶ್
ಈ ಹಿಂದೆ ಹರ್ಷಿಕಾ ಪೂಣಚ್ಛ, ಹರಿಪ್ರಿಯಾ, ಭುವನ್, ದಿಗಂತ್ ಅವರು ಕೂಡ ಪ್ರಚಾರ ಮಾಡಿದ್ದರು. ಮತ್ತೊಂದೆಡೆ ಶಿವಾಜಿನಗರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷಾದ್ ಅವರ ಪರ ಕನ್ನಡ ಹಾಸ್ಯ ನಟ ಸಾಧುಕೋಕಿಲಾ ಮತಬೇಟೆ ಮಾಡಿದ್ದಾರೆ.
ರಿಜ್ವಾನ್ ಅರ್ಷಾದ್ ಅವರು ಅಭಿವೃದ್ದಿಗಾಗಿ ಕೆಲಸ ಮಾಡುವ ವ್ಯಕ್ತಿ. ಅವರ ಹಿಂದೆ ಡಿಕೆ ಶಿವಕುಮಾರ್ ಎಂಬ ಹುಲಿ ಇದೆ. ನಿಮ್ಮ ಮತ ಕಾಂಗ್ರೆಸ್ ಗೆ ಇರಲಿ'' ಎಂದು ಸಾಧು ಕೋಕಿಲಾ ಮತದಾರರಲ್ಲಿ ಮನವಿ ಮಾಡಿದ್ದಾರೆ.