Don't Miss!
- News Bengaluru-Tumkur Metro: 52.41 ಕಿ.ಮೀ. ಮಾರ್ಗ, 19 ನಿಲ್ದಾಣಗಳು; ತುಮಕೂರು-ಬೆಂಗಳೂರು ಮೆಟ್ರೋ ಅಪ್ಡೇಟ್
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮೈಸೂರು: ಪೊಗರು ಸಿನಿಮಾ ವಿರುದ್ಧ ಬ್ರಾಹ್ಮಣ ಸಮುದಾಯ ಪ್ರತಿಭಟನೆ
ಮೈಸೂರಿನ ವಿವಿಧ ಬ್ರಾಹ್ಮಣ ಸಂಘಟನೆಗಳ ನೇತೃತ್ವದಲ್ಲಿ ಸೆನ್ಸಾರ್ ಮಂಡಳಿ ವಿರುದ್ಧ ಪ್ರತಿಭಟನೆ ನಡೆಸಲಾಯಿತು.
ದೃವಸರ್ಜಾ ಅಭಿನಯದ ಪೊಗರು ಸಿನಿಮಾದಲ್ಲಿ ಬ್ರಾಹ್ಮಣರಿಗೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಸೆನ್ಸಾರ್ ಮಂಡಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಆಗ್ರಹಿಸಿದರು.
ಡಿಸಿ ಕಚೇರಿ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ವಿವಧ ಘೋಷಣೆಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸಿನಿಮಾದಲ್ಲಿ ಬ್ರಾಹ್ಮಣ ಸಮುದಾಯವನ್ನ ಟಾರ್ಗೆಟ್ ಮಾಡಲಾಗ್ತಿದೆ . ಪೊಗರು ಸಿನಿಮಾದಲ್ಲಂತೂ ಬ್ರಾಹ್ಮಣ ಸಮುದಾಯಕ್ಕೆ ತೀರ ಅವಮಾನ ಮಾಡಲಾಗಿದೆ. ಬ್ರಾಹ್ಮಣರ ಸ್ವಾಭಿಮಾನವನ್ನ ಕೆಣಕಲಾಗುತ್ತಿದೆ. ಸೆನ್ಸಾರ್ ಮಂಡಳಿ ಚಿತ್ರವನ್ನ ಸೆನ್ಸಾರ್ ಮಾಡುವಾಗ ಈ ಎಲ್ಲ ಅಂಶಗಳನ್ನ ಗಮನಿಸಬೇಕು . ಯಾವುದೇ ಒಂದು ಸಮಾಜದ ಭಾವನೆಗೆ ಧಕ್ಕೆಯಾಗುವಂತ ಸೀನ್ ಗಳಿಗೆ ಕತ್ತರಿ ಹಾಕಬೇಕು ಅಂಟ್ ಪ್ರತಿಭಟನಾಕಾರರು ಒತ್ತಾಯಿಸಿದರು.
ಸಿನಿಮಾದಲ್ಲಿ ಪುರೋಹಿತಶಾಹಿ ವರ್ಗಕ್ಕೆ ತುಂಬಾ ಅವಮಾನಿಸಲಾಗಿದೆ. ಈ ಹಿಂದೆಯೂ ಸಹ ಅನೇಕ ಚಿತ್ರಗಳಲ್ಲಿ ಬ್ರಾಹ್ಮಣರಿಗೆ ಅವಮಾನ ಮಾಡೋ ದೃಶ್ಯಗಳನ್ನ ಬಲವಂತವಾಗಿ ಸೃಷ್ಟಿಸಲಾಗಿದೆ . ಕಥೆಗೆ ಬೇಡದೇ ಇದ್ರೂ ಹ ಸಮುದಾಯದ ಅನಗತ್ಯ ಟೀಕೆಗಳನ್ನ ಮಾಡಲಾಗುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.
ಪೊಗರು ಸಿನಿಮಾ ದೃಶ್ಯದಲ್ಲಿ ಬ್ರಾಹ್ಮಣ ರಿಗೆ ಅವಮಾನ ಮಾಡೋ ಸೀನ್ ಬಗ್ಗೆ ಹಲವರು ಆಕ್ಷೇಪ ವ್ಯಕ್ತಪಡಿಸಿದರು. ಈ ಬಗ್ಗೆ ನಿರ್ದೇಶಕ ನಂದಕಿಶೋರ್ ಕೂಡ ವಿಡಿಯೋ ಮೂಲಕ ಕ್ಷಮೆ ಕೇಳಿದ್ದಾರೆ. ಅಲ್ಲದೆ ಆಕ್ರೋಶಕ್ಕೆ ಗುರಿಯಾಗಿರುವ ಆ ದೃಶ್ಯಕ್ಕೆ ಕತ್ತರಿ ಹಾಕುವ ಭರವಸೆ ನೀಡಿದ್ದಾರೆ.
Recommended Video
ಪದೇಪದೇ ಈ ರೀತಿಯ ಘಟನೆಗಳು ಮರುಕಳಿಸುತ್ತಿವೆ. ಇದಕ್ಕೆ ಸೆನ್ಸಾರ್ ಮಂಡಳಿ ಅಧಿಕಾರಿಗಳೇ ನೇರ ಹೊಣೆ ಹೀಗಾಗಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಾಗಲಿ ಅಂತ ಪ್ರತಿಭಟನಾಕಾರರು ಅಗ್ರಹಿಸಿದರು.