ಮತ್ತೆ ಕನ್ನಡಕ್ಕೆ ಬಂದ ಹಾಸ್ಯ ನಟ ಬ್ರಹ್ಮಾನಂದಂ
ಟಾಲಿವುಡ್ ಚಿತ್ರರಂಗದ ಹೆಸರಾಂತ ಹಾಸ್ಯ ನಟ ಬ್ರಹ್ಮಾನಂದಂ ಈಗ ಮತ್ತೆ ಕನ್ನಡಕ್ಕೆ ಬಂದಿದ್ದಾರೆ. ಉಪೇಂದ್ರ ನಟನೆಯ ಸಿನಿಮಾಗಾಗಿ ಅವರು ಸ್ಯಾಂಡಲ್ ವುಡ್ ಗೆ ಮರಳಿದ್ದಾರೆ.
ಈ ಹಿಂದೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ 'ನಿನ್ನಿಂದಲೆ' ಸಿನಿಮಾ ಮೂಲಕ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಬ್ರಹ್ಮಾನಂದಂ ಪ್ರವೇಶ ಪಡೆದಿದ್ದರು. ಆ ಬಳಿಕ ನಿಖಿಲ್ ಕುಮಾರ್ ನಟನೆಯ 'ಜಾಗ್ವರ್' ಸಿನಿಮಾದಲ್ಲಿಯೂ ಕಾಣಿಸಿಕೊಂಡರು.
ಇದೀಗ 'ಐ ಲವ್ ಯೂ' ಚಿತ್ರದಲ್ಲಿ ಬ್ರಹ್ಮಾನಂದಂ ನಟಿಸಿದ್ದಾರೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಸಿನಿಮಾ ನಿರ್ಮಾಣ ಆಗಿದ್ದು, ಬ್ರಹ್ಮಾನಂದಂ ಎರಡೂ ಭಾಷೆಗಳಲ್ಲಿ ನಟಿಸಿದ್ದಾರೆ. ಬ್ರಹ್ಮಾನಂದಂ ರನ್ನು ಆರ್ ಚಂದ್ರು ತಮ್ಮ ಚಿತ್ರಕ್ಕಾಗಿ ಕರೆ ತಂದಿದ್ದಾರೆ.

ಮತ್ತೊಂದು ವಿಶೇಷ ಅಂದರೆ, ಈ ಹಿಂದೆ 'ಸನ್ ಆಫ್ ಸತ್ಯಮೂರ್ತಿ' ತೆಲುಗು ಸಿನಿಮಾದಲ್ಲಿ ಉಪೇಂದ್ರ ಹಾಗೂ ಬ್ರಹ್ಮಾನಂದಂ ಒಟ್ಟಿಗೆ ನಟಿಸಿದ್ದರು. ಈಗ ಮತ್ತೆ ಈ ಕಾಂಬಿನೇಶನ್ ಒಂದಾಗಿದೆ.
ಆರ್ ಚಂದ್ರು ನಿರ್ದೇಶನ ಮತ್ತು ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ರಚಿತಾ ರಾಮ್ ಸಿನಿಮಾದ ನಾಯಕಿಯಾಗಿದ್ದಾರೆ. ಜೂನ್ 14 ರಂದು 'ಐ ಲವ್ ಯೂ' ರಾಜ್ಯಾದಂತ್ಯ ಬಿಡುಗಡೆಯಾಗಲಿದೆ.


Click it and Unblock the Notifications











