Don't Miss!
- News ನೇಹಾ ಕೊಲೆ: ಫಯಾಜ್ ಜೈಲಲ್ಲಿದ್ದರೂ ಆತನ ಮೊಬೈಲ್ನಲ್ಲಿದ್ದ ಫೋಟೋ ಲೀಕ್ ಆಗಿದ್ದೇಗೆ?: ಪ್ರಹ್ಲಾದ್ ಜೋಶಿ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Lifestyle ಚಪಾತಿ, ಅನ್ನಕ್ಕೆ ಟೊಮೆಟೋ ಬೇಳೆ ಸಾರು ಸಖತ್ ರುಚಿ..! ಮಾಡೋದು ಸುಲಭ..!
- Automobiles ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೆ ಕನ್ನಡಕ್ಕೆ ಬಂದ ಹಾಸ್ಯ ನಟ ಬ್ರಹ್ಮಾನಂದಂ
ಟಾಲಿವುಡ್ ಚಿತ್ರರಂಗದ ಹೆಸರಾಂತ ಹಾಸ್ಯ ನಟ ಬ್ರಹ್ಮಾನಂದಂ ಈಗ ಮತ್ತೆ ಕನ್ನಡಕ್ಕೆ ಬಂದಿದ್ದಾರೆ. ಉಪೇಂದ್ರ ನಟನೆಯ ಸಿನಿಮಾಗಾಗಿ ಅವರು ಸ್ಯಾಂಡಲ್ ವುಡ್ ಗೆ ಮರಳಿದ್ದಾರೆ.
ಈ ಹಿಂದೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಟನೆಯ 'ನಿನ್ನಿಂದಲೆ' ಸಿನಿಮಾ ಮೂಲಕ ಮೊದಲ ಬಾರಿಗೆ ಕನ್ನಡ ಚಿತ್ರರಂಗಕ್ಕೆ ಬ್ರಹ್ಮಾನಂದಂ ಪ್ರವೇಶ ಪಡೆದಿದ್ದರು. ಆ ಬಳಿಕ ನಿಖಿಲ್ ಕುಮಾರ್ ನಟನೆಯ 'ಜಾಗ್ವರ್' ಸಿನಿಮಾದಲ್ಲಿಯೂ ಕಾಣಿಸಿಕೊಂಡರು.
ಮುಕುಂದನ ಸಿನಿಮಾಗೆ ಸಾಥ್ ಕೊಡ್ತಿದ್ದಾರೆ ಮುರಾರಿ
ಇದೀಗ 'ಐ ಲವ್ ಯೂ' ಚಿತ್ರದಲ್ಲಿ ಬ್ರಹ್ಮಾನಂದಂ ನಟಿಸಿದ್ದಾರೆ. ಕನ್ನಡ ಹಾಗೂ ತೆಲುಗಿನಲ್ಲಿ ಈ ಸಿನಿಮಾ ನಿರ್ಮಾಣ ಆಗಿದ್ದು, ಬ್ರಹ್ಮಾನಂದಂ ಎರಡೂ ಭಾಷೆಗಳಲ್ಲಿ ನಟಿಸಿದ್ದಾರೆ. ಬ್ರಹ್ಮಾನಂದಂ ರನ್ನು ಆರ್ ಚಂದ್ರು ತಮ್ಮ ಚಿತ್ರಕ್ಕಾಗಿ ಕರೆ ತಂದಿದ್ದಾರೆ.
ಮತ್ತೊಂದು ವಿಶೇಷ ಅಂದರೆ, ಈ ಹಿಂದೆ 'ಸನ್ ಆಫ್ ಸತ್ಯಮೂರ್ತಿ' ತೆಲುಗು ಸಿನಿಮಾದಲ್ಲಿ ಉಪೇಂದ್ರ ಹಾಗೂ ಬ್ರಹ್ಮಾನಂದಂ ಒಟ್ಟಿಗೆ ನಟಿಸಿದ್ದರು. ಈಗ ಮತ್ತೆ ಈ ಕಾಂಬಿನೇಶನ್ ಒಂದಾಗಿದೆ.
ಆರ್ ಚಂದ್ರು ನಿರ್ದೇಶನ ಮತ್ತು ನಿರ್ಮಾಣದಲ್ಲಿ ಈ ಸಿನಿಮಾ ಮೂಡಿ ಬಂದಿದೆ. ರಚಿತಾ ರಾಮ್ ಸಿನಿಮಾದ ನಾಯಕಿಯಾಗಿದ್ದಾರೆ. ಜೂನ್ 14 ರಂದು 'ಐ ಲವ್ ಯೂ' ರಾಜ್ಯಾದಂತ್ಯ ಬಿಡುಗಡೆಯಾಗಲಿದೆ.