Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿ ಎಂ ಕನಸಿನ ಸಿನಿಮಾ ಇನ್ನೂ ನನಸಾಗಿಲ್ಲ
ಹೆಚ್ ಡಿ ಕುಮಾರಸ್ವಾಮಿ ರಾಜಕೀಯದಲ್ಲಿ ಹೆಸರು ಮಾಡಿರುವಂತೆಯೇ ಕನ್ನಡ ಸಿನಿಮಾರಂಗದಲ್ಲಿಯೂ ಸಾಕಷ್ಟು ಹೆಸರು ಗಳಿಸಿದ್ದಾರೆ. ಸುಮಾರು 9 ಸಿನಿಮಾಗಳನ್ನು ನಿರ್ಮಾಣ ಮಾಡಿದ್ದು 200ಕ್ಕೂ ಹೆಚ್ಚು ಚಿತ್ರಗಳನ್ನು ವಿತರಣೆ ಮಾಡಿದ್ದಾರೆ.
ಇಷ್ಟೆಲ್ಲಾ ಚಿತ್ರರಂಗದಲ್ಲಿ ತೊಡಗಿಸಿಕೊಂಡಿರುವ ಮುಖ್ಯಮಂತ್ರಿಗಳಿಗೆ ಕನಸಿನ ಸಿನಿಮಾವೊಂದು ಇದ್ಯಂತೆ. ಆ ಚಿತ್ರಕ್ಕೆ ನಿರ್ಮಾಪಕನಾಗಬೇಕು ಎನ್ನುವ ಹಂಬಲವನ್ನು ಇಟ್ಟುಕೊಂಡಿದ್ದಾರಂತೆ ಕುಮಾರಸ್ವಾಮಿ ಅವರು.
'ದರ್ಶನ್' ಜೊತೆಗಿನ ಆಂತರಿಕ ಕದನಕ್ಕೆ ಬ್ರೇಕ್ ಹಾಕಿದ 'ಅಭಿಮನ್ಯು'
ಹೌದು ವ್ಯಾಸರಾಯ ಬಲ್ಲಾಳ್ ಅವರ 'ಹೆಜ್ಜೆ' ಕಾದಂಬರಿಯನ್ನು ಚಿತ್ರವನ್ನಾಗಿ ತೆರೆ ಮೇಲೆ ತರಲು ಕುಮಾರಸ್ವಾಮಿ ಅವರು ಪ್ರಯತ್ನ ಪಡುತ್ತಿದ್ದಾರೆ. ಐದು ಭಾಷೆಯಲ್ಲಿ ಚಿತ್ರವನ್ನು ನಿರ್ಮಾಣ ಮಾಡಬೇಕು ಎನ್ನು ಆಸೆಯನ್ನು ಹೊಂದಿದ್ದಾರೆ.
ಈ ಹಿಂದೆಯೇ 'ಹೆಜ್ಜೆ' ಕಾದಂಬರಿ ಆಧಾರಿತ ಚಿತ್ರವನ್ನು ಎಸ್ ನಾರಾಯಣ್ ನಿರ್ದೇಶನ ಮಾಡುತ್ತಾರೆ ಎನ್ನುವ ಸುದ್ದಿ ಇತ್ತು. ಆದರೆ ಇದರ ಬಗ್ಗೆ ಇತ್ತೀಚಿಗಷ್ಟೆ ಮಾತನಾಡಿದ ಸಿ ಎಂ ಕುಮಾರಸ್ವಾಮಿ 'ಹೆಜ್ಜೆ' ಕಾದಂಬರಿ ಮೇಲೆ ಚಿತ್ರ ಮಾಡುವ ಆಸೆ ಇದೆ ಅದಕ್ಕೆ ಸಾಕಷ್ಟು ತಯಾರಿ ಮಾಡಿಕೊಳ್ಳಬೇಕಿದೆ. ಆದರೆ ಖಂಡಿತವಾಗಿಯೂ ಮಾಡಿಯೇ ಮಾಡುತ್ತೇನೆ ಎಂದಿದ್ದಾರೆ.