Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಂಚಭೂತಗಳಲ್ಲಿ ನಟ ಸಿ.ಆರ್. ಸಿಂಹ ಲೀನ
ನಟ, ಹಿರಿಯ ರಂಗಕರ್ಮಿ ಸಿ.ಆರ್.ಸಿಂಹ ಅವರ ಅಂತಿಮ ಯಾತ್ರೆ ಸಹಸ್ರ ಅಭಿಮಾನಿಗಳ ಕಣ್ಣೀರ ಧಾರೆಯೊಂದಿಗೆ ಸಾಗಿತು. ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸುವ ಮೂಲಕ ಪಂಚಭೂತಗಳಲ್ಲಿ ಲೀನವಾದರು. ಅವರ ಪುತ್ರ ಋತ್ವಿಕ್ ಅವರು ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸಿದರು.
ಅದ್ವೈತ
ಪದ್ಧತಿಯಂತೆ
ವಿಧಿವಿಧಾನಗಳಂತೆ
ಅವರ
ಅಂತ್ಯಕ್ರಿಯೆ
ಮಾಡಲಾಯಿತು.
ಶನಿವಾರ
ಬೆಳಗ್ಗೆ
ಸುಮಾರು
9
ಗಂಟೆಗೆ
ಬನಶಂಕರಿಯಿಂದ
ರವೀಂದ್ರ
ಕಲಾಕ್ಷೇತ್ರಕ್ಕೆ
ಅವರ
ಪಾರ್ಥೀವ
ಶರೀರವನ್ನು
ತಂದು
ಸಾರ್ವಜನಿಕ
ದರ್ಶನಕ್ಕೆ
ಇಡಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅವರ ಸಚಿವ ಸಂಪುಟದ ಅನೇಕ ಸಹೋದ್ಯೋಗಿಗಳು ಅವರಿಗೆ ಅಂತಿಮ ಶ್ರದ್ಧಾಂಜಲಿ ಸಲ್ಲಿಸಿದರು.
ಜ್ಞಾನಪೀಠ ಪುರಸ್ಕೃತ ಸಾಹಿತಿ ಡಾ.ಯು.ಆರ್.ಅನಂತಮೂರ್ತಿ ಸೇರಿದಂತೆ ಅನೇಕ ಸಿನಿಮಾ ನಟ ನಟಿಯರು, ರಂಗಭೂಮಿ ಕಲಾವಿದರು ರವೀಂದ್ರ ಕಲಾಕ್ಷೇತ್ರಕ್ಕೆ ಆಗಮಿಸಿ ಅಂತಿಮ ದರ್ಶನ ಪಡೆದರು.
ಮೂರು ಗಂಟೆಗೂ ಹೆಚ್ಚು ಕಾಲ ಸಾರ್ವಜನಿಕ ದರ್ಶನಕ್ಕೆ ಅವರ ಪಾರ್ಥೀವ ಶರೀರವನ್ನು ಇಡಲಾಗಿತ್ತು. ಬಳಿಕ ಬನಶಂಕರಿಯ ವಿದ್ಯುತ್ ಚಿತಾಗಾರದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು. (ಏನೆನ್ಸೀಸ್)