Don't Miss!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- News India weather: ಮಳೆಗಾಗಿ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಖ್ಯಾತ ಗಾಯಕಿ ವಸುಂಧರ ದಾಸ್ ಗೆ ಕ್ಯಾಬ್ ಚಾಲಕನಿಂದ ನಿಂದನೆ
ಬೆಂಗಳೂರಿನ ಹೃದಯ ಭಾಗದಲ್ಲಿ ಖ್ಯಾತ ಗಾಯಕಿ ವಸುಂಧರ ದಾಸ್ ಗೆ ಕ್ಯಾಬ್ ಚಾಲಕ ಅವಾಚ್ಯ ಶಬ್ದಗಳಿಂದ ನಿಂದಿಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಕ್ಟೋಬರ್ 29 ರಂದು ಸಂಜೆ 4.30 ರ ಸುಮಾರಿಗೆ ಗಾಯಕಿ ವಸುಂಧರ ದಾಸ್ ತಮ್ಮ ಕಾರಿನಲ್ಲಿ ಭಾಷ್ಯಂ ಸರ್ಕಲ್ ನಿಂದ ಮಲ್ಲೇಶ್ವರಂ ಕಡೆಗೆ ಬರುತ್ತಿದ್ದರು. ಈ ವೇಳೆ ಕ್ಯಾಬ್ ಚಾಲಕನೊಬ್ಬ ಹಿಂಬಾಲಿಸಿಕೊಂಡು ಬಂದು ವಸುಂಧರ ದಾಸ್ ಕಾರಿಗೆ ಅಡ್ಡ ಹಾಕಿ ಬಾಯಿಗೆ ಬಂದ ಹಾಗೆ ಮಾತನಾಡಿದ್ದಾನೆ.
ಈ ಬಗ್ಗೆ ಮಲ್ಲೇಶ್ವರಂ ಪೊಲೀಸರಿಗೆ ವಸುಂಧರ ದಾಸ್ ದೂರು ನೀಡಿದ್ದು, ಕ್ಯಾಬ್ ಚಾಲಕನ ವಿರುದ್ಧ ಎಫ್.ಐ.ಆರ್ ದಾಖಲಾಗಿದೆ. ಸದ್ಯ ಕಾರು ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ತನುಶ್ರೀ ದತ್ತಾ ವಿರುದ್ಧ ಕೇವಲ 25 ಪೈಸೆ ಮಾನನಷ್ಟ ಹೂಡಿದ ಖ್ಯಾತ ನಟಿ
ಅಷ್ಟಕ್ಕೂ ನಡೆದದ್ದು ಏನು ಅಂದ್ರೆ, ಭಾಷ್ಯಂ ಸರ್ಕಲ್ ಸಿಗ್ನಲ್ ಬಳಿ ಕ್ಯಾಬ್ ಚಾಲಕ ರೈಟ್ ಟರ್ನ್ ತೆಗೆದುಕೊಳ್ಳಬೇಕಿತ್ತು. ಆದ್ರೆ, ಅಷ್ಟರಲ್ಲಿ ವಸುಂಧರ ದಾಸ್ ಕಾರು ಆ ಕ್ಯಾಬ್ ಚಾಲಕನನ್ನು ಬ್ಲಾಕ್ ಮಾಡಿದೆ. ಇದರಿಂದ ಸಿಟ್ಟಿಗೆದ್ದ ಆ ಕ್ಯಾಬ್ ಚಾಲಕ ಮಲ್ಲೇಶ್ವರಂ ಮಾರ್ಗೋಸಾ ರಸ್ತೆವರೆಗೂ ಫಾಲೋ ಮಾಡಿಕೊಂಡು ಬಂದು ವಸುಂಧರ ದಾಸ್ ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ.
ಇದರಿಂದ ಬೇಸರಗೊಂಡ ವಸುಂಧರ ದಾಸ್ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.