Don't Miss!
- News
ಮಾನ್ವಿ: ಮಂಜೂರಾದ ಬಡವರ ಭೂಮಿಗೆ ಕಣ್ಣು ಹಾಕಿದ ಪ್ರಭಾವಿಗಳು, ಜನಾಕ್ರೋಶ
- Sports
LLC 2023: ಲೆಜೆಂಡ್ಸ್ ಲೀಗ್ನಲ್ಲಿ ಕೈಫ್, ಗೇಲ್, ಗಂಭೀರ್ ಸೇರಿದಂತೆ ಹಲವು ಸ್ಟಾರ್ಗಳು
- Lifestyle
ಆರೋಗ್ಯವಾಗಿರಬೇಕೆ? ಹಾಗಾದರೆ ನೀವು 3 ವಿಷಯಗಳಲ್ಲಿ ನಂಬಿಕೆ ಇಡಲೇಬೇಕು
- Finance
Jio 5G services: ಇಂದಿನಿಂದ ಮತ್ತೆ 34 ನಗರಗಳಲ್ಲಿ ಪ್ರಾರಂಭ- ಮಧ್ಯ ಕರ್ನಾಟಕದ ಯಾವ ನಗರಕ್ಕೆ ಕೊಡುಗೆ? ಮಾಹಿತಿ ಪಡೆಯಿರಿ
- Automobiles
ಪೆಟ್ರೋಲ್ ಬೆಲೆ ಏರಿಕೆ ಚಿಂತೆ ಬಿಡಿ: ರೂ.1 ಲಕ್ಷ ಇದ್ರೆ ಆಕ್ಟಿವಾವನ್ನು ಎಲೆಕ್ಟ್ರಿಕ್ ಸ್ಕೂಟರ್ ಆಗಿ ಪರಿವರ್ತಿಸಬ
- Technology
ಆಂಡ್ರಾಯ್ಡ್ ಬಳಕೆದಾರರಿಗಾಗಿ 'ಕಿಡ್ಸ್ ಮಿಸ್ಟರಿ ಬಾಕ್ಸ್' ಫೀಚರ್ಸ್ ಪರಿಚಯಿಸಿದ ನೆಟ್ಫ್ಲಿಕ್ಸ್!
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ದುನಿಯಾ ವಿಜಯ್, ಸಾಧು ಕೋಕಿಲ, ಉಮಾಶ್ರೀ ವಿರುದ್ಧ ಪ್ರಕರಣ ದಾಖಲು
ನಟ ದುನಿಯಾ ವಿಜಯ್, ಸಾಧು ಕೋಕಿಲ, ನಟಿ, ರಾಜಕಾರಣಿ ಉಮಾಶ್ರೀ ಹಾಗೂ ಜಯಮಾಲಾ ವಿರುದ್ಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೇಲ್ಕಂಡ ಈ ಮೂವರು ನಟರು ಕಾಂಗ್ರೆಸ್ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಉದ್ಘಾಟನೆಯಲ್ಲಿ ಭಾಗಿಯಾಗಿದ್ದರು. ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ ಕಾರ್ಯಕ್ರಮದಲ್ಲಿ ಹಾಜರಿದ್ದ ಹಲವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅದರಲ್ಲಿ ದುನಿಯಾ ವಿಜಯ್, ಸಾಧು ಕೋಕಿಲ, ಉಮಾಶ್ರೀ ಹಾಗೂ ನಟಿ ಜಯಮಾಲಾ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಒಟ್ಟು 31 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಅದರಲ್ಲಿ ಉಮಾಶ್ರೀ ಅವರನ್ನು ಆರೋಪಿ ನಂಬರ್ 8. ಸಾಧುಕೋಕಿಲ ಎ 27 , ಸಾ.ರಾ.ಗೋವಿಂದು ಎ 28 , ಜಯಮಾಲ ಎ29 , ದುನಿಯಾ ವಿಜಯ್ ಎ30 ಆಗಿದ್ದಾರೆ.
ಪ್ರಕರಣ ಕುರಿತಾಗಿ ಎಫ್ಐಆರ್ ದಾಖಲಾಗಿದ್ದು ಮೊದಲ ಆರೋಪಿ ಡಿ.ಕೆ.ಶಿವಕುಮಾರ್ ಹಾಗೂ ಎರಡನೇ ಆರೋಪಿ ಸಿದ್ದರಾಮಯ್ಯ ಆಗಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಹೆಚ್ಚಳ ಆಗುತ್ತಿದ್ದು, ಸರ್ಕಾರವು ವೀಕೆಂಡ್ ಕರ್ಪ್ಯೂ ಹಾಗೂ ನೈಟ್ ಕರ್ಪ್ಯೂ ಹೇರಿದೆ. ಹಾಗಿದ್ದರೂ ಕಾಂಗ್ರೆಸ್ ಪಕ್ಷವು ಇತರ ಕೆಲವು ಸಂಘಟನೆಗಳೊಟ್ಟಿಗೆ ಸೇರಿ ಮೇಕೆದಾಟು ಯೋಜನೆ ಅನುಷ್ಟಾನಕ್ಕೆ ಒತ್ತಾಯಿಸಿ ಪಾದಯಾತ್ರೆ ಮಾಡುತ್ತಿದ್ದು, ಸರ್ಕಾರವು ಈ ಪಾದಯಾತ್ರೆಗೆ ವಿರೋಧ ವ್ಯಕ್ತಪಡಿಸಿದೆ. ರಾಮನಗರ ಜಿಲ್ಲಾಧಿಕಾರಿಗಳು ಈಗಾಗಲೇ ತಿಳಿವಳಿಕೆ ಪತ್ರವನ್ನು ನೀಡಿದ್ದರಾದರೂ ಡಿ.ಕೆ.ಶಿವಕುಮಾರ್ ಅವರು ಯಾವುದೇ ಕಾರಣಕ್ಕೂ ನಾವು ಪಾದಯಾತ್ರೆ ನಿಲ್ಲಿಸುವುದಿಲ್ಲ ಎಂದಿದ್ದಾರೆ.
ಮೇಕೆದಾಟು ಪಾದಯಾತ್ರೆಗೆ ಚಲನಚಿತ್ರ ವಾಣಿಜ್ಯ ಮಂಡಳಿ ಪೂರ್ಣ ಬೆಂಬಲ ನೀಡಿದೆ. ಜೊತೆಗೆ ಹಲವು ನಟರು ವೈಯಕ್ತಿಕವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ ಹಾಗೂ ಹಲವರು ಪಾದಯಾತ್ರೆಯಲ್ಲಿ ಖುದ್ದಾಗಿ ಪಾಲ್ಗೊಂಡಿದ್ದಾರೆ.
ನಟ ಶಿವರಾಜ್ ಕುಮಾರ್ ಸಹ ಪಾದಯಾತ್ರೆಗೆ ಬೆಂಬಲ ನೀಡಿದ್ದಾರೆ ಎನ್ನಲಾಗಿದೆ. ಪಾದಯಾತ್ರೆ ಉದ್ಘಾಟನೆ ಸಮಾರಂಭದಲ್ಲಿ ಶಿವಣ್ಣ ಭಾಗಿಯಾಗಲಿದ್ದರು ಆದರೆ ಜನ ಹೆಚ್ಚಾದ ಕಾರಣ ಕನಕಪುರದ ವೆರಗೆ ಬಂದಿದ್ದ ಶಿವರಾಜ್ ಕುಮಾರ್ ಅಲ್ಲಿಂದ ವಾಪಸ್ಸಾದರು.