Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾವೇರಿ ಪ್ರತಿಭಟನೆ, ತಮಿಳು ಚಿತ್ರಗಳು ಎತ್ತಂಗಡಿ
ಅಕ್ಟೋಬರ್ 6ರ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಚಿತ್ರೋದ್ಯಮ ಸಂಪೂರ್ಣ ಬಂದ್ ಆಗಿದೆ. ಕಾವೇರಿ ಹೋರಾಟ ತಣ್ಣಗಾಗುವವರೆಗೂ ಬೆಂಗಳೂರು ಮತ್ತು ಮೈಸೂರಿನ ಚಿತ್ರಮಂದಿರಗಳು ಸೇರಿದಂತೆ ರಾಜ್ಯದ ಬಹುತೇಕ ಕಡೆ ತಮಿಳು ಚಿತ್ರಗಳು ಇರುವುದಿಲ್ಲ.
ತಮಿಳು ಚಿತ್ರಗಳಿಲ್ಲದೆ ಖಾಲಿಯಾಗಿರುವ ಚಿತ್ರಮಂದಿರಗಳಲ್ಲಿ ಹಳೆಯ ಕನ್ನಡ ಚಿತ್ರಗಳು ತೆರೆಕಂಡಿವೆ. ಬೆಂಗಳೂರಿನಲ್ಲಿ ತಮಿಳರ ಪ್ರಾಬಲ್ಯವಿರುವ ವಿವೇಕನಗರ ಹಾಗೂ ಹಲಸೂರಿನ ಚಿತ್ರಮಂದಿರಗಳಲ್ಲೂ ತಮಿಳು ಚಿತ್ರಗಳು ಎತ್ತಂಗಡಿಯಾಗಿವೆ.
ತಮಿಳು ಚಿತ್ರಗಳು ಎತ್ತಂಗಡಿಯಾಗಿರುವ ಚಿತ್ರಮಂದಿರಗಳಲ್ಲಿ ಕನ್ನಡದ ಅದ್ದೂರಿ, ದಂಡುಪಾಳ್ಯ (ಚಿತ್ರ ವಿಮರ್ಶೆ), ಗೋವಿಂದಾಯ ನಮಃ (ಚಿತ್ರ ವಿಮರ್ಶೆ), ಭದ್ರ, ಜರಾಸಂಧ (ಚಿತ್ರ ವಿಮರ್ಶೆ) ಹಾಗೂ ಪರಮಾತ್ಮ ಚಿತ್ರಗಳು ಪ್ರದರ್ಶನ ಕಾಣುತ್ತಿವೆ. ಇದೇ ಸಂದರ್ಭದಲ್ಲಿ ಹಳೆಯ ಕನ್ನಡ ಚಿತ್ರಗಳಿಗೂ ಬೇಡಿಕೆ ಬಂದಿದೆ.
ಆದರೆ ತೆಲುಗು, ಹಿಂದಿ ಹಾಗೂ ಮಲಯಾಳಂ ಚಿತ್ರಗಳಿಗೆ ಯಾವುದೇ ನಿಷೇಧವಿಲ್ಲದ ಕಾರಣ ನಿರಾತಂಕವಾಗಿ ಪ್ರದರ್ಶನ ಕಾಣುತ್ತಿವೆ. ಅದರಲ್ಲೂ ತೆಲುಗಿಗೆ ಡಬ್ ಆಗಿರುವ ತಮಿಳು ಚಿತ್ರಗಳಿಗೆ ಸಖತ್ ಡಿಮ್ಯಾಂಡ್ ಏರ್ಪಟ್ಟಿದೆ.
ತಾಂಡವಂ, ಮಾತ್ರಾನ್ ಚಿತ್ರಗಳು ತೆಲುಗಿಗೆ ಡಬ್ ಆಗಿದ್ದು ಅದರ ವಿತರಕರಿಗೆ ಸಂಕ್ರಾಂತಿಗೂ ಮೊದಲೇ ಸುಗ್ಗಿ ಬಂದಂತಾಗಿದೆ. ಈ ಚಿತ್ರಗಳನ್ನೂ ನಿಷೇಧಿಸಿದರೆ ಕನ್ನಡ ಚಿತ್ರಗಳಿಗೆ ಮತ್ತಷ್ಟು ಬೇಡಿಕೆ ಬರುತ್ತದೆ ಎಂದು ಹೆಸರು ಹೇಳಲು ಇಚ್ಛಿಸದ ಕನ್ನಡ ವಿತರಕರೊಬ್ಬರು ತಿಳಿಸಿದರು. (ಒನ್ಇಂಡಿಯಾ ಕನ್ನಡ)