Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಾವೇರಿ ವಿವಾದ': ಶಿವಣ್ಣನ ಸಾರಥ್ಯದಲ್ಲಿ ಮೋದಿ ಭೇಟಿಗೆ ಚಿತ್ರರಂಗ?
ಕಾವೇರಿ ಜಲ ವಿವಾದದ ಕುರಿತು ಇಡೀ ಕರ್ನಾಟಕದಾದ್ಯಂತ ಸಾಮಾನ್ಯ ಜನರು ಹಾಗೂ ರೈತರು ಹೋರಾಟ-ಪ್ರತಿಭಟನೆ ಮಾಡಿದ್ದಾರೆ. ಎಲ್ಲಾ ಕನ್ನಡಿಗರ ಆಕ್ರೋಶ ಭುಗಿಲೆದ್ದಿದೆ. ಒಟ್ಟಾರೆ ಕಾವೇರಿ ಗಲಭೆಯಿಂದ ಸಾಕಷ್ಟು ನಷ್ಟದ ಜೊತೆಗೆ ಸಾವು-ನೋವು ಸಂಭವಿಸಿದೆ.
ಇದೀಗ 'ಕಾವೇರಿ ವಿವಾದ' ಕುರಿತು ವಿವರವಾಗಿ ಚರ್ಚಿಸಲು ಇಡೀ ಕನ್ನಡ ಚಿತ್ರರಂಗದ ಕಲಾವಿದರೆಲ್ಲರೂ ಒಟ್ಟು ಸೇರಿ, ನಮ್ಮ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ದೆಹಲಿಗೆ ಪ್ರಯಾಣಿಸಲು ನಿರ್ಧರಿಸಿದ್ದಾರೆ.['ಕಾವೇರಿ ಹಿಂಸಾಚಾರ'ದಲ್ಲಿ ಬಲಿಯಾದವರಿಗೆ ಅಣ್ಣಾವ್ರ ಮಕ್ಕಳ ಸಹಾಯ ಹಸ್ತ]
ಪ್ರಧಾನಿ ಮೋದಿ ಅವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಪ್ರಯಾಣಿಸುವ ವಿಚಾರವನ್ನು ಖುದ್ದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ತಿಳಿಸಿದ್ದಾರೆ. ಮುಂದೆ ಓದಿ...
ಶಾಂತಿಯುತ ಹೋರಾಟ
ಬೆಂಗಳೂರಿನ ಕಾವೇರಿ ಗಲಭೆ ಕುರಿತು ಮಾತನಾಡಿದ ಅವರು "ನಾವು ಶಾಂತಿಪ್ರಿಯರು, ಹಾಗಾಗಿ ಹೋರಾಟವನ್ನು ಶಾಂತಿಯುತವಾಗಿ ಮಾಡೋಣ. ಕಲಾವಿದರೆಲ್ಲ ಸೇರಿ ಒಟ್ಟಾಗಿ ದೆಹಲಿಗೆ ಹೋಗಿ ಪ್ರಧಾನಿ ಭೇಟಿ ಮಾಡಲು ನಿರ್ಧರಿಸಿದ್ದೇವೆ" ಎಂದರು.[ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ: ಉಪೇಂದ್ರ ಕೊಟ್ಟ ಸೂಪರ್ ಸುಪ್ರೀಂ ಐಡಿಯಾ!]
ವಾಣಿಜ್ಯ ಮಂಡಳಿಯಲ್ಲಿ ಸಭೆ
"ದೆಹಲಿ ಭೇಟಿ ಕುರಿತಾಗಿ ಇಂದು (ಸೆಪ್ಟೆಂಬರ್ 14, ಬುಧವಾರ) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಸಿ, ಆದಷ್ಟು ಬೇಗ ದೆಹಲಿಗೆ ಹೋಗಿ ಮೋದಿ ಅವರನ್ನು ಭೇಟಿ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗುವುದು" ಎಂದಿದ್ದಾರೆ.
ಕೆ.ಆರ್.ಎಸ್ ಭೇಟಿ
ಇನ್ನು ಇಡೀ ಚಿತ್ರರಂಗದವರು ಕೆ.ಆರ್.ಎಸ್ ಅಣೆಕಟ್ಟು ಪ್ರದೇಶಕ್ಕೆ ಕೂಡ ಭೇಟಿ ನೀಡುವ ಯೋಜನೆ ಹಾಕಿಕೊಂಡಿದ್ದಾರೆ. ಈ ಕುರಿತಂತೆ ಕೂಡ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಇಂದು ಮಹತ್ವದ ಸಭೆ ನಡೆಯಲಿದೆ.
ನ್ಯಾಯ ಕೊಡಿ ಸ್ವಾಮಿ
'ನಮಗಾಗಿರುವ ಅನ್ಯಾಯವನ್ನು ಸರಿಪಡಿಸೋಣ, ಎಲ್ಲರೂ ಶಾಂತ ರೀತಿಯಲ್ಲಿ ಪ್ರತಿಭಟಿಸುವ ಮೂಲಕ, ನ್ಯಾಯ ದೊರಕಿಸಿ ಕೊಡುವಂತೆ ಕೇಳಿಕೊಳ್ಳೋಣ' ಅಂತ ಶಿವಣ್ಣ ಮನವಿ ಮಾಡಿದ್ದಾರೆ.