Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿನಿಮಾ ಆಗಲಿದೆ 'ಸಿಡಿ ಯುವತಿ'ಯ ಕತೆ, ಹೆಸರು ನೊಂದಾಯಿಸಿದ ನಿರ್ಮಾಪಕ
ಪ್ರಸ್ತುತ ರಾಜಕೀಯದಲ್ಲಿ ಸಖತ್ ಸದ್ದು ಮಾಡುತ್ತಿರುವ 'ಸಿಡಿ ಕಾಮಕಾಂಡ' ಸಿನಿಮಾ ಆಗಿ ತೆರೆಗೆ ಬರುವ ಸಂಭವ ಇದೆ. ಅದೂ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆಯೊಂದು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಸರು ನೊಂದಾವಣೆ ಮಾಡಿಸಿದೆ.
Recommended Video
ಯಾವುದೇ ವಿಷಯ ಅಥವಾ ವ್ಯಕ್ತಿ ವೈರಲ್ ಆದರೆ ಅದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆಸರು ನೊಂದಾವಣಿ ಆಗುವುದು ಸಾಮಾನ್ಯ ಹಾಗೆಯೇ ಈಗಲೂ ಸಹ ಸಿಡಿ ವಿಷಯಕ್ಕೆ ಸಂಬಂಧಿಸಿದಂತೆ ಹೆಸರು ನೊಂದಾವಣೆ ಆಗಿದೆ.
'ಸಿಡಿ ಲೇಡಿ' ಎಂಬ ಹೆಸರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೊಂದಾವಣೆ ಆಗಿದೆ. ಈ ಹೆಸರು ನೊಂದಾವಣೆ ಮಾಡಿಸಿರುವುದು ಸಂದೇಶ್ ನಾಗರಾಜ್ ನಿರ್ಮಾಣ ಸಂಸ್ಥೆಯವರು.
ಹೆಸರಾಂತ ನಿರ್ಮಾಣ ಸಂಸ್ಥೆಯಾದ ಸಂದೇಶ್ ನಾಗರಾಜ್ ಸಂಸ್ಥೆಯು ಸಿಡಿ ಪ್ರಕರಣಕ್ಕೆ ಸಂಬಂಧಿಸಿದ ಹೆಸರು ನೊಂದಾವಣಿ ಮಾಡಿದ್ದಾರೆಂದರೆ ಸಿನಿಮಾ ನಿರ್ಮಾಣವಾಗುವುದು ಪಕ್ಕಾ ಎನ್ನಲಾಗುತ್ತಿದೆ.
ಸಿಡಿ ಕಾಮಕಾಂಡವು ಪ್ರಸ್ತುತ ರಾಜ್ಯ ರಾಜಕಾರಣದಲ್ಲಿ ಭಾರಿ ಕೋಲಾಹಲ ಎಬ್ಬಿಸಿದೆ. ಪ್ರಕರಣ ಕೇಂದ್ರ ಬಿಂದು ಎನಿಸಿಕೊಂಡಿರುವ ರಮೇಶ್ ಜಾರಕಿಹೊಳಿ ಅವರು ತಮ್ಮ್ ಸಚಿವ ಸ್ಥಾನಕ್ಕೆ ಈಗಾಗಲೇ ರಾಜೀನಾಮೆ ನೀಡಿದ್ದಾರೆ.
'ನನ್ನ ವಿರುದ್ಧ ಷಡ್ಯಂತ್ರ ಮಾಡಲಾಗಿದೆ. ಈ 'ಸಿಡಿ ಗೇಟ್'ನ ಹಿಂದೆ 'ಮಹಾನ್ ನಾಯಕ' ಒಬ್ಬರಿದ್ದಾರೆ ಅವರನ್ನು ಜೈಲಿಗೆ ಕಳಿಸದೇ ಬಿಡುವುದಿಲ್ಲ' ಎಂದು ಗುಟುರು ಹಾಕಿದ್ದಾರೆ.
ಸಿಡಿ ಪ್ರಕರಣವು 'ಹನಿಟ್ರ್ಯಾಪ್' ಎಂದು ಸಹ ಆರೋಪಿಸಲಾಗಿದ್ದು. ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಆರೋಪಿತರನ್ನು ಕೆಲವರನ್ನು ವಿಚಾರಣೆಗೆ ಒಳಪಡಿಸಿ ನಂತರ ಬಿಡುಗಡೆಯನ್ನೂ ಮಾಡಿದೆ ಎಸ್ಐಟಿ.
ಸಿಡಿಯಲ್ಲಿರುವ ಯುವತಿ ಎಂದು ಹೇಳಲಾದ ಯುವತಿಯು ಹೊಸದೊಂದು ವಿಡಿಯೋವನ್ನು ಬಿಡುಗಡೆ ಮಾಡಿದ್ದು, 'ರಮೇಶ್ ಜಾರಕಿಹೊಳಿ ಅವರೇ ನನಗೆ ಉದ್ಯೋಗ ಕೊಡಿಸುತ್ತೀನಿ ಎಂದು ಹೇಳಿ ಮೋಸ ಮಾಡಿದ್ದಾರೆ' ಎಂದು ಆರೋಪಿಸಿದ್ದಾಳೆ.
ಪ್ರಕರಣದ ತನಿಖೆಯನ್ನು ಎಸ್ಐಟಿಯು ನಡೆಸುತ್ತಿದ್ದು ಯುವತಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಯುವತಿ ಅಜ್ಞಾತ ಸ್ಥಳದಲ್ಲಿದ್ದಾಳೆ.