ವಿಶ್ವ ಪರಿಸರ ದಿನ: ಗಿಡ ನೆಟ್ಟು ಮಾದರಿಯಾದ ಸಿನಿಮಾ ಸ್ಟಾರ್ಸ್
ವಿಶ್ವ ಪರಿಸರ ದಿನದ ವಿಶೇಷವಾಗಿ ಹಲವು ಸೆಲೆಬ್ರಿಟಿಗಳು ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಶುಭಕೋರಿದರು. ಮನುಷ್ಯದ ಜೀವನದಲ್ಲಿ ಪ್ರಕೃತಿ ಬಹಳ ಮುಖ್ಯ, ಪರಿಸರ ಆರೋಗ್ಯವಾಗಿದ್ದರೆ ಮಾನವರ ಮುಂದಿನ ಪೀಳಿಗೆ ಆರೋಗ್ಯವಾಗಿರಲು ಸಾಧ್ಯ ಎಂಬ ಸಂದೇಶ ಸಾರಿದ್ದಾರೆ.
ಕಿಚ್ಚ ಸುದೀಪ್ ಟ್ವಿಟ್ಟರ್ ಮೂಲಕ ವಿಶ್ವ ಪರಿಸರ ದಿನಕ್ಕೆ ವಿಶ್ ಮಾಡಿದ್ದು, ''ನಮ್ಮ ಜೀವನ ಪರಿಸರ ಇರುವವರೆಗೆ ಮಾತ್ರ ಎಂಬುದನ್ನು ಮರೆಯದಿರಿ, ನಮಗೆ ಬೇಕಾದಂತೆ ಪರಿಸರ ಬದಲಾಯಿಸುವ ಬದಲು, ಪರಿಸರಕ್ಕೆ ತಕ್ಕಂತೆ ನಾವು ಬದಲಾಗೋಣ'' ಎಂಬ ಸಂದೇಶ ರವಾನಿಸಿದರು.
ನಟ ಶರಣ್ ಸಹ ಟ್ವಿಟ್ಟರ್ನಲ್ಲಿ ಪರಿಸರ ದಿನಕ್ಕೆ ಶುಭಕೋರಿದರು. ಗುರುಶಿಷ್ಯರು ಚಿತ್ರದ ಸೆಟ್ನಲ್ಲಿ ಗಿಡ ನೆಡಲಾಗಿತ್ತು. ಆ ಫೋಟೋ ಶೇರ್ ಮಾಡಿ ''ಮನೆಗೊಂದು ಮರ, ಮನಸ್ಸಿಗೊಂದು ನೆಮ್ಮದಿ. ಗುರುಶಿಷ್ಯರು ಚಿತ್ರದ ಶೂಟಿಂಗ್ ದಿನಗಳಲ್ಲಿ ಒಂದು ಪುಟ್ಟ ತೆಂಗಿನ ಸಸಿ ನೆಟ್ಟಿದ್ದ ನೆನಪುಗಳು..'' ಎಂದು ಮೆಲುಕು ಹಾಕಿದರು.

'ಹೆಚ್ಚಿನ ಮರಗಳನ್ನು ನೆಡೋಣ, ಪರಿಸರ ಸ್ನೇಹಿ ಕೆಲಸಗಳಿಗೆ ಹೊಂದಿಕೊಳ್ಳೋಣ' ಎಂದು ತೆಲುಗು ನಟ ಅಲ್ಲು ಅರ್ಜುನ್ ಗಿಡವೊಂದು ನೆಡುವ ಮೂಲಕ ಪರಿಸರ ದಿನಕ್ಕೆ ಶುಭಕೋರಿದರು.
ಸುಮಾರು 150 ಗಿಡಗಳನ್ನು ನೆಡುವ ಮೂಲಕ ನಟಿ ರಾಗಿಣಿ ಪರಿಸರ ದಿನವನ್ನು ಆಚರಿಸಿದ್ದಾರೆ.

Recommended Video
ಬಾಲಿವುಡ್ನಲ್ಲಿ ಕರೀನಾ ಕಪೂರ್, ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ, ವರುಣ್ ಧವನ್, ಸೋನಾಲಿ ಬೇಂದ್ರೆ, ಶಿಲ್ಪಾ ಶೆಟ್ಟಿ ಸೇರಿದಂತೆ ಹಲವರು ಪರಿಸರ ದಿನಕ್ಕೆ ವಿಶ್ ಮಾಡಿದ್ದಾರೆ.


Click it and Unblock the Notifications











