Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ತಿಥಿ' ಖ್ಯಾತಿಯ ಸೆಂಚುರಿ ಗೌಡ ಕೂಡ ಚುನಾವಣಾ ಪ್ರಚಾರ ಮಾಡ್ತಿದ್ದಾರೆ
ಕನ್ನಡ ಚಿತ್ರರಂಗದ ಅನೇಕ ನಟ, ನಟಿಯರು ಈಗ ತಮ್ಮ ಸಿನಿಮಾ ಕೆಲಸದಿಂದ ದೂರವಾಗಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ. ತಮ್ಮ ಮೆಚ್ಚಿನ ಪಕ್ಷ, ಅಭ್ಯರ್ಥಿಗಳ ಪರವಾಗಿ ಮತ ಯಾಚನೆ ಮಾಡುತ್ತಿದ್ದಾರೆ. ಈಗ 'ತಿಥಿ' ಖ್ಯಾತಿಯ ಸೆಂಚುರಿ ಗೌಡ ಅವರು ಕೂಡ ಚುನಾವಣಾ ಪ್ರಚಾರಕ್ಕೆ ಮುಂದಾಗಿರುವುದು ವಿಶೇಷವಾಗಿದೆ.
ದರ್ಶನ್ ಪುಟ್ಟಣ್ಣಯ್ಯ ಅವರ ಪರವಾಗಿ ಸೆಂಚುರಿ ಗೌಡ ಚುನಾವಣಾ ಪ್ರಚಾರ ಮಾಡ್ತಿದ್ದಾರೆ. ಹಸಿರು ಟವೆಲ್ ಹಾಕಿ ಸೆಂಚುರಿ ಗೌಡ ದರ್ಶನ್ ಪುಟ್ಟಣ್ಣಯ್ಯ ಅವರಿಗೆ ತಮ್ಮ ಬೆಂಬಲ ನೀಡಿದ್ದಾರೆ. ಅಂದಹಾಗೆ, ದರ್ಶನ್ ಪುಟ್ಟಣ್ಣಯ್ಯ ದಿವಂಗತ ರೈತ ನಾಯಕ ಕೆ.ಎಸ್.ಪುಟ್ಟಣ್ಣಯ್ಯನವರ ಪುತ್ರನಾಗಿದ್ದು, ಈ ಬಾರಿ ಅವರು ಮೇಲುಕೋಟೆ ಕ್ಷೇತ್ರದ ಸ್ವರಾಜ್ ಇಂಡಿಯಾ ಪಕ್ಷದ ಅಭ್ಯರ್ಥಿ ಆಗಿದ್ದಾರೆ.
ಚುನಾವಣಾ ಪ್ರಚಾರಕ್ಕೆ ಬರಲು ಯಶ್ ಹಾಕಿರುವ ಷರತ್ತುಗಳಿವು !
ಮೇಲುಕೋಟೆಯ ವದೆ ಸಮುದ್ರ ಗ್ರಾಮದಲ್ಲಿ ಸೆಂಚುರಿ ಗೌಡ ''ಪುಟ್ಟಣ್ಣಯ್ಯನ ಮಗನನ್ನು ಗೆಲ್ಲಿಸಿ, ಮರಿ ಹುಲಿಯ ಗೆಲುವಿಗೆ ಸಹಕರಿಸಿ'' ಎಂದು ಮತದಾರರಲ್ಲಿ ಮನವಿ ಮಾಡಿದ್ದಾರೆ. ಅಂದಹಾಗೆ, 'ತಿಥಿ' ಸಿನಿಮಾ ಮೂಲಕ ತಮ್ಮ ಇಳಿ ವಯಸ್ಸಿನಲ್ಲಿ ಚಿತ್ರರಂಗಕ್ಕೆ ಬಂದ ಸೆಂಚುರಿ ಗೌಡ ಸಿಕ್ಕಾಪಟ್ಟೆ ಫೇಮಸ್ ಆದರು. ಆ ಚಿತ್ರದ ನಂತರ 'ತರ್ಲೆ ವಿಲೇಜ್', 'ಹಾಲು ತುಪ್ಪ', 'ಹಳ್ಳಿ ಪಂಚಾಯತಿ' ಸೇರಿದಂತೆ ಅನೇಕ ಸಿನಿಮಾಗಳಲ್ಲಿ ಅವರು ಕಾಣಿಸಿಕೊಂಡಿದ್ದಾರೆ.