Don't Miss!
- News ಡಿಕೆ ಸುರೇಶ್ ಆಪ್ತರಿಗೆ ಐಟಿ ಶಾಕ್; ಬಿಜೆಪಿ ದುಡ್ಡು ಹಂಚುತ್ತಿರುವುದು ಗೊತ್ತಿಲ್ಲವೆ? : ಡಿ ಕೆ ಶಿವಕುಮಾರ್ ಹೇಳಿದ್ದೇನು?
- Automobiles ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- Finance Bengaluru Suburban Rail Project: ದೊಡ್ಡಜಾಲದಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ರೈಲು ಸಂಪರ್ಕ, ವಿವರ
- Technology Jio: ಅಗ್ಗದ ಜಿಯೋ ಸಿನಿಮಾ ಪ್ರೀಮಿಯಂ ಚಂದಾದಾರಿಕೆ ಘೋಷಣೆ! 29 ರೂ.ಗಳಿಂದ ಪ್ರಾರಂಭ..
- Lifestyle ಖುಲಾಯಿಸಿತು ಅದೃಷ್ಟ: ಫ್ಯಾಂಟಸಿ ಗೇಮ್ನಲ್ಲಿ ₹1.5 ಕೋಟಿ ಗೆದ್ದ ಮೆಕ್ಯಾನಿಕ್..!
- Sports IPL 2024: ಸಿಕ್ಸ್ ಹೊಡೆದು ತಪ್ಪಾಯ್ತು ಎಂದಿದ್ದೇಕೆ ರಿಷಬ್ ಪಂತ್ ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸರಳವಾಗಿ ದೇವಾಲಯದಲ್ಲಿ ವಿವಾಹವಾದ ಬಿಗ್ಬಾಸ್ ಸ್ಪರ್ಧಿ
ಬಿಗ್ಬಾಸ್ ಮಾಜಿ ಸ್ಪರ್ಧಿ, ನಟಿ ಚೈತ್ರಾ ಕೊಟ್ಟೂರು ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಬೆಂಗಳೂರಿನ ದೇವಾಲಯವೊಂದರಲ್ಲಿ ಕುಟುಂಬದವರ ಮುಂದೆ ಸರಳವಾಗಿ ಮದುವೆಯಾಗಿದ್ದಾರೆ ಚೈತ್ರಾ.
ಉದ್ಯಮಿ ನಾಗಾರ್ಜುನ್ ಎಂಬುವರೊಟ್ಟಿಗೆ ಬೆಂಗಳೂರಿನ ದೇವಸ್ಥಾನವೊಂದರಲ್ಲಿ ಸರಳವಾಗಿ ಸಪ್ತಪದಿ ತುಳಿದಿದ್ದಾರೆ ಚೈತ್ರಾ. ಕೊರೊನಾ ಹೆಚ್ಚಾಗುತ್ತಿರುವ ಕಾರಣದಿಂದ ಸರಳ ವಿವಾಹವಾಗಲು ಈ ಜೋಡಿ ನಿಶ್ಚಯಿಸಿತ್ತು.
ನಾಗಾರ್ಜುನ್ ಹಾಗೂ ಚೈತ್ರಾ ಕೊಟ್ಟೂರು ಹಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದು, ನಾಗಾರ್ಜುನ್ ಅವರು ರಿಯಲ್ ಎಸ್ಟೇಟ್ ಹಾಗೂ ಕನ್ಸ್ಟ್ರಕ್ಷನ್ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದಾರೆ.
ಬಿಗ್ಬಾಸ್ ಸೀಸನ್ 7 ರಲ್ಲಿ ಭಾಗವಹಿಸಿದ್ದ ಚೈತ್ರಾ ಕೊಟ್ಟೂರು ಇತ್ತೀಚೆಗೆ ಧಾರಾವಾಹಿ ಹಾಗೂ ಆಲ್ಬಂ ಹಾಡಿನಲ್ಲಿ ಸಹ ನಟಿಸಿದ್ದರು. ಚೈತ್ರಾ ಅವರು ಕತೆ, ಚಿತ್ರಕತೆ ಬರೆಯುವುದರ ಮೂಲಕವೂ ಗುರುತಿಸಿಕೊಂಡಿದ್ದಾರೆ.
ಇತ್ತೀಚೆಗೆ 'ಹುಡುಗರು ತುಂಬಾ ಒಳ್ಳೆಯವರು' ಎಂಬ ಆಲ್ಬಂ ಹಾಡಿನಲ್ಲಿ ಗ್ಲಾಮರಸ್ ಆಗಿ ಕಾಣಿಸಿಕೊಂಡು ಆಶ್ಚರ್ಯ ಮೂಡಿಸಿದ್ದರು ಚೈತ್ರಾ ಕೊಟ್ಟೂರು.