Don't Miss!
- Automobiles ಹೊಸ ಸುಜುಕಿ V-Strom 800 DE ಬೈಕ್ ಬಿಡುಗಡೆ: ಬೆಲೆ ರೂ.10.30 ಲಕ್ಷ
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಧ್ಯಾತ್ಮದ ಹಾದಿ ಹಿಡಿದ ಚೈತ್ರಾ ಕೊಟೂರುಗೆ ಹೊಸ ಹೆಸರು
ನಟಿ, ಮಾಜಿ ಬಾಸ್ ಸ್ಪರ್ಧಿ ಚೈತ್ರ ಕೊಟೂರು ಹೆಸರು ಬದಲಾಗಿದೆ. ಓಶೊ ಧ್ಯಾನ ಮಂದಿರ ಸೇರಿರುವ ಚೈತ್ರಾ ಕೊಟೂರುಗೆ ಮಾ ಪ್ರಜ್ಞಾ ಭಾರತಿ ಎಂದು ಗುರುಗಳು ನಾಮಕರಣ ಮಾಡಿದ್ದಾರೆ.
ಓಶೊ ಧ್ಯಾನ ಮಂದಿರದ ಗುರುಗಳಾದ ಸ್ವಾಮಿ ಗೋಪಾಲ ಭಾರತಿ ಅವರು ಚೈತ್ರಾ ಕೊಟೂರುಗೆ ಮಾ ಪ್ರಜ್ಞಾ ಭಾರತಿ ಎಂದು ನಾಮಕರಣ ಮಾಡಿದ್ದಾರೆ. ಈ ವಿಚಾರವನ್ನು ಚೈತ್ರಾ ಕೊಟೂರು ಸಾಮಾಜಿಕ ಜಾಲತಾಣದಲ್ಲಿ ಚಿತ್ರಸಹಿತ ಹಂಚಿಕೊಂಡಿದ್ದಾರೆ.
ಬೆಳಗಾವಿಯ ಪಿಂಪಿಲಿಯಲ್ಲಿನ ಓಶೊ ಧ್ಯಾನ ಶಿಬಿರದಲ್ಲಿ ಚೈತ್ರಾ ಪಾಲ್ಗೊಂಡಿದ್ದಾರೆ. ಚೈತ್ರಾರ ಈ ಅಧ್ಯಾತ್ಮಿಕ ಪಯಣಕ್ಕೆ ಹಲವರು ಶುಭ ಕೋರಿದ್ದಾರೆ.
ಏಪ್ರಿಲ್ ತಿಂಗಳಲ್ಲಿ ಚೈತ್ರಾ ಕೊಟೂರು ಅವರು ನಾಗಾರ್ಜುನ ಎಂಬುವರೊಟ್ಟಿಗೆ ದೇವಸ್ಥಾನದಲ್ಲಿ ವಿವಾಹವಾಗಿದ್ದರು. ಆದರೆ ವಿವಾಹವಾದ ದಿನವೇ ಪೊಲೀಸ್ ಠಾಣೆ ಮೆಟ್ಟಿಲನ್ನೂ ಏರಿದ್ದರು. ಬಲವಂತದಿಂದ ಮದುವೆ ಮಾಡಲಾಗಿದೆ ಎಂದು ನಾಗಾರ್ಜು ದೂರು ನೀಡಿದ್ದರು.
ನಾಗಾರ್ಜುನ ಮನೆಯವರು ಸಹ ಚೈತ್ರಾ ವಿರುದ್ಧ ಆರೋಪಗಳನ್ನು ಮಾಡಿದ್ದರು. ಕೆಲವೇ ದಿನಗಳಲ್ಲಿ ಚೈತ್ರಾ ಕೊಟೂರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೆಲ್ಲ ವಿವಾದಗಳ ಬಳಿಕ ಈಗ ಅಧ್ಯಾತ್ಮಕ ಕಡೆಗೆ ವಾಲಿಕೊಂಡಿದ್ದಾರೆ ಚೈತ್ರಾ.