Don't Miss!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯುಗ ಯುಗಗಳೇ ಸಾಗಲಿ ನಮ್ಮ ಪ್ರೀತಿ ಶಾಶ್ವತ' ಎಂದ ದರ್ಶನ್
Recommended Video
ಸಾಹಸಸಿಂಹ ವಿಷ್ಣುವರ್ಧನ್ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಯಜಮಾನನಿಲ್ಲದ ಹಬ್ಬವನ್ನು ಅವರ ನೆನಪಿನಲ್ಲಿಯೆ ಆಚರಿಸಲಾಗುತ್ತಿದೆ. ದಾದಾನಿಗೆ ನಾಡಿನಾದ್ಯಂತ ಶುಭಾಶಯಗಳ ಮಹಾಪೂರವೆ ಹರಿದು ಬರುತ್ತಿದೆ.
ಅಭಿಮಾನಿಗಳು ಮಾತ್ರವಲ್ಲದೆ ಸ್ಯಾಂಡಲ್ ವುಡ್ ಸ್ಟಾರ್ಸ್ ಸಹ ಶುಭಕೋರುತ್ತಿದ್ದಾರೆ. ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿಷ್ಣುದಾದಾನ ನೆನಪು ಮಾಡಿಕೊಂಡಿದ್ದಾರೆ. ವಿಷ್ಣುವರ್ಧನ್ ಸಿನಿಮಾದ ಹಾಡಿನ ಸಾಲನ್ನೆ ಹಾಕುವ ಮೂಲಕ 'ಯುಗ ಯುಗಗಳೇ ಸಾಗಲಿ ನಮ್ಮ ಪ್ರೀತಿ ಶಾಶ್ವತ' ಎಂದು ಹೇಳಿದ್ದಾರೆ.
ಸಾಹಸಸಿಂಹನ ನೆನೆದ ಸಿಎಂ ಮತ್ತು ಸ್ಯಾಂಡಲ್ ವುಡ್ ಸ್ಟಾರ್ಸ್
"ಕನ್ನಡಿಗರ ಯಜಮಾನ, ನಮ್ಮೆಲ್ಲರ ನಲ್ಮೆಯ 'ಅಭಿನಯ ಭಾರ್ಗವ' ಸಾಹಸ ಸಿಂಹ ಡಾ|| ವಿಷ್ಣುವರ್ಧನ್ ಸರ್ ರವರ ಜನ್ಮದಿನೋತ್ಸವ ಇಂದು. ಯುಗ ಯುಗಗಳೇ ಸಾಗಲಿ ನಮ್ಮ ಪ್ರೀತಿ ಶಾಶ್ವತ. ಹುಟ್ಟು ಹಬ್ಬದ ಶುಭಾಶಯಗಳು ವಿಷ್ಣುದಾದಾ" ಎಂದು ಟ್ವೀಟ್ ಮಾಡಿದ್ದಾರೆ.
ವಿಷ್ಣುವರ್ಧನ್ ಅಭಿನಯದ ಈ ಬಂಧನ ಸಿನಿಮಾದಲ್ಲಿ ನಟ ದರ್ಶನ್ ಕೂಡ ಕಾಣಿಸಿಕೊಂಡಿದ್ದರು. ದಾದಾನ ಸಾಕು ಮಗನ ಪಾತ್ರದಲ್ಲಿ ದರ್ಶನ್ ಮಿಂಚಿದ್ದರು. ಅದೆ ಫೋಟೋವನ್ನು ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ ದರ್ಶನ್.