Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ತೂಗುದೀಪ ನಿವಾಸದ ಮುಂದೆ ಆಯುಧ ಪೂಜೆಯ ಸಂಭ್ರಮ
ಹಿಂದೂಗಳ ವಿಶೇಷ ಹಬ್ಬಗಳಲ್ಲಿ ನವರಾತ್ರಿಯು ಒಂದು. ಒಂಬತ್ತು ದಿನ ಆಚರಿಸುವ ನವರಾತ್ರಿ ಹಬ್ಬದಲ್ಲಿ ಕೊನೆಯ ದಿನ ಆಯುಧ ಪೂಜೆ ಮಾಡಲಾಗುತ್ತೆ. ಮನೆಯಲ್ಲಿ ಇರುವ ವಸ್ತುಗಳಿಂದ ಹಿಡಿದು ಎಲ್ಲಾ ರೀತಿಯ ಆಯುಧಗಳನ್ನು ಇಟ್ಟು ವಿಶೇಷವಾಗಿ ಹೂವುಗಳಿಂದ ಅಲಂಕರಿಸಿ ಪೂಜೆ ಮಾಡಲಾಗುತ್ತೆ.
ಈ ಬಾರಿಯ ಆಯುಧ ಪೂಜೆ ದಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯಲ್ಲಿರುವ ವಾಹನಗಳಿಗೆ ಪೂಜೆ ಮಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಆರ್ ಆರ್ ನಗದರಲ್ಲಿರುವ ತೂಗುದೀಪ ನಿವಾಸದ ಮುಂದೆ ಮನೆಯಲ್ಲಿರುವ ಎಲ್ಲಾ ವೆರೈಟಿ ಕಾರುಗಳನ್ನು ಸಾಲಾಗಿ ನಿಲ್ಲಿಸಿ ಪೂಜೆ ಮಾಡಲಾಗಿದೆ.
ದರ್ಶನ್ ಅಭಿಮಾನಿಗಳಿಗೆ ಕ್ಷಮೆ ಕೇಳಿದ 'ಒಡೆಯ' ನಿರ್ಮಾಪಕ ಸಂದೇಶ್
ದರ್ಶನ್ ಮನೆ ಮುಂದೆ ಸಾಲುಗಟ್ಟಿ ನಿಂತಿರುವ ದುಬಾರಿ ಕಾರುಗಳ ವಿಡಿಯೋ ಎಲ್ಲಾ ಕಡೆ ಹರಿದಾಡುತ್ತಿದೆ. ಸುಮಾರು ಹದಿಮೂರು ಬೆಲೆ ಬಾಳುವ ಕಾರುಗಳು ಸಾಲಾಗಿ ನಿಂತಿವೆ. ಕಾರುಗಳ ಜೊತೆಗೆ ಮತ್ತೊಂದು ಸಾಲಿನಲ್ಲಿ ಬೈಕ್ ಗಳು ರಾರಾಜಿಸುತ್ತಿವೆ. ಈ ವಿಡಿಯೋ ಈಗ ಎಲ್ಲರ ಗಮನ ಸೆಳೆಯುತ್ತಿದೆ.
ದರ್ಶನ್ ಬಳಸುವ ಎಲ್ಲಾ ವಾಹನಗಳು ಒಟ್ಟಿಗೆ ನೋಡುವ ಅವಕಾಶ ಅಭಿಮಾನಿಗಳಿಗೆ ಸಿಕ್ಕಿದೆ. ದುಬಾರಿ ಕಾರುಗಳ ಒಡೆಯನಾಗಿರುವ ದರ್ಶನ್ ದಿನಕ್ಕೊಂದು ಕಾರನ್ನು ಬಳಸುತ್ತಾರೆ. ದರ್ಶನ್ ಗೆ ಇರುವ ಕಾರ್ ಕ್ರೇಜ್ ಬಗ್ಗೆಯು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಸ ಕಾರು ಮಾರುಕಟ್ಟೆಗೆ ಎಂಟ್ರಿ ಕೊಟ್ಟರೆ ಸಾಕು, ಅದೂ ಕೆಲವೆ ದಿನಗಳಲ್ಲಿ ದರ್ಶನ್ ಮನೆಯ ಕಾರು ಶೆಡ್ ಸೇರಿರುತ್ತೆ.
ದರ್ಶನ್ ಸದ್ಯ ರಾಬರ್ಟ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಬಹುನಿರೀಕ್ಷೆಯ ಚಿತ್ರದ ಚಿತ್ರೀಕರಣ ವಾರಣಾಸಿಯಲ್ಲಿ ನಡೆಯುತ್ತಿತ್ತು. ವಾರಣಾಸಿಯ ಚಿತ್ರೀಕರಣ ಮುಗಿಸಿ ಮತ್ತೆ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಒಡೆಯ ಸಿನಿಮಾ ಚಿತ್ರೀಕರಣ ಮುಗಿದಿದ್ದು ರಿಲೀಸ್ ಗೆ ರೆಡಿಯಾಗುತ್ತಿದೆ.