Don't Miss!
- Sports ಕಮಿನ್ಸ್ ಟೆನ್ಷನ್ ಹೆಚ್ಚಿಸಿದ ಸ್ಟಾರ್ ಪ್ಲೇಯರ್ ನಿರ್ಧಾರ: ಎಸ್ಆರ್ಎಚ್ ತಂಡಕ್ಕೆ ಆರಂಭದಲ್ಲೇ ಪೆಟ್ಟು
- Lifestyle ಪಳ ಪಳ ಹೊಳೆಯುವ ಕೆಂಪು ನಾಗರ ನೋಡಿದ್ದೀರಾ..? ವೈರಲ್ ಆಗ್ತಿದೆ ವಿಡಿಯೋ..!
- Technology ಬಹುನಿರೀಕ್ಷಿತ ರಿಯಲ್ಮಿ ನಾರ್ಜೋ 70 ಪ್ರೊ 5G ಲಾಂಚ್!..ಇಯರ್ಬಡ್ಸ್ ಉಚಿತ!
- News ಜಗದೀಶ್ ಶೆಟ್ಟರ್ಗೆ ಬೆಳಗಾವಿ ಸ್ಪರ್ಧೆ ಮತ್ತಷ್ಟು ಜಟೀಲ: ಗೋಬ್ಯಾಕ್ ಅಭಿಯಾನ ಯಶಸ್ವಿ ಆಯ್ತಾ?
- Automobiles ನಟ ವಿಜಯ್ ನೋಡಲು ಬಂದ ಜನಸಾಗರ: ಅಭಿಮಾನಿಗಳಿಂದ ನಟನ ಕಾರಿಗೆ ಹಾನಿ!
- Finance ಬೆಂಗಳೂರಿನ ಮೇಘನಾ ಫುಡ್ಸ್ ಹೋಟೆಲ್ ಮಳಿಗೆಗಳ ಮೇಲೆ ಐಟಿ ದಾಳಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ದರ್ಶನ್ ತೂಗುದೀಪ ನಿವಾಸದ ಮುಂದೆ ಆಯುಧ ಪೂಜೆಯ ಸಂಭ್ರಮ
ಹಿಂದೂಗಳ ವಿಶೇಷ ಹಬ್ಬಗಳಲ್ಲಿ ನವರಾತ್ರಿಯು ಒಂದು. ಒಂಬತ್ತು ದಿನ ಆಚರಿಸುವ ನವರಾತ್ರಿ ಹಬ್ಬದಲ್ಲಿ ಕೊನೆಯ ದಿನ ಆಯುಧ ಪೂಜೆ ಮಾಡಲಾಗುತ್ತೆ. ಮನೆಯಲ್ಲಿ ಇರುವ ವಸ್ತುಗಳಿಂದ ಹಿಡಿದು ಎಲ್ಲಾ ರೀತಿಯ ಆಯುಧಗಳನ್ನು ಇಟ್ಟು ವಿಶೇಷವಾಗಿ ಹೂವುಗಳಿಂದ ಅಲಂಕರಿಸಿ ಪೂಜೆ ಮಾಡಲಾಗುತ್ತೆ.
ಈ ಬಾರಿಯ ಆಯುಧ ಪೂಜೆ ದಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನೆಯಲ್ಲಿರುವ ವಾಹನಗಳಿಗೆ ಪೂಜೆ ಮಾಡಿರುವ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬೆಂಗಳೂರಿನ ಆರ್ ಆರ್ ನಗದರಲ್ಲಿರುವ ತೂಗುದೀಪ ನಿವಾಸದ ಮುಂದೆ ಮನೆಯಲ್ಲಿರುವ ಎಲ್ಲಾ ವೆರೈಟಿ ಕಾರುಗಳನ್ನು ಸಾಲಾಗಿ ನಿಲ್ಲಿಸಿ ಪೂಜೆ ಮಾಡಲಾಗಿದೆ.
ದರ್ಶನ್ ಅಭಿಮಾನಿಗಳಿಗೆ ಕ್ಷಮೆ ಕೇಳಿದ 'ಒಡೆಯ' ನಿರ್ಮಾಪಕ ಸಂದೇಶ್
ದರ್ಶನ್ ಮನೆ ಮುಂದೆ ಸಾಲುಗಟ್ಟಿ ನಿಂತಿರುವ ದುಬಾರಿ ಕಾರುಗಳ ವಿಡಿಯೋ ಎಲ್ಲಾ ಕಡೆ ಹರಿದಾಡುತ್ತಿದೆ. ಸುಮಾರು ಹದಿಮೂರು ಬೆಲೆ ಬಾಳುವ ಕಾರುಗಳು ಸಾಲಾಗಿ ನಿಂತಿವೆ. ಕಾರುಗಳ ಜೊತೆಗೆ ಮತ್ತೊಂದು ಸಾಲಿನಲ್ಲಿ ಬೈಕ್ ಗಳು ರಾರಾಜಿಸುತ್ತಿವೆ. ಈ ವಿಡಿಯೋ ಈಗ ಎಲ್ಲರ ಗಮನ ಸೆಳೆಯುತ್ತಿದೆ.
ದರ್ಶನ್ ಬಳಸುವ ಎಲ್ಲಾ ವಾಹನಗಳು ಒಟ್ಟಿಗೆ ನೋಡುವ ಅವಕಾಶ ಅಭಿಮಾನಿಗಳಿಗೆ ಸಿಕ್ಕಿದೆ. ದುಬಾರಿ ಕಾರುಗಳ ಒಡೆಯನಾಗಿರುವ ದರ್ಶನ್ ದಿನಕ್ಕೊಂದು ಕಾರನ್ನು ಬಳಸುತ್ತಾರೆ. ದರ್ಶನ್ ಗೆ ಇರುವ ಕಾರ್ ಕ್ರೇಜ್ ಬಗ್ಗೆಯು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಸ ಕಾರು ಮಾರುಕಟ್ಟೆಗೆ ಎಂಟ್ರಿ ಕೊಟ್ಟರೆ ಸಾಕು, ಅದೂ ಕೆಲವೆ ದಿನಗಳಲ್ಲಿ ದರ್ಶನ್ ಮನೆಯ ಕಾರು ಶೆಡ್ ಸೇರಿರುತ್ತೆ.
ದರ್ಶನ್ ಸದ್ಯ ರಾಬರ್ಟ್ ಚಿತ್ರದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಬಹುನಿರೀಕ್ಷೆಯ ಚಿತ್ರದ ಚಿತ್ರೀಕರಣ ವಾರಣಾಸಿಯಲ್ಲಿ ನಡೆಯುತ್ತಿತ್ತು. ವಾರಣಾಸಿಯ ಚಿತ್ರೀಕರಣ ಮುಗಿಸಿ ಮತ್ತೆ ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಒಡೆಯ ಸಿನಿಮಾ ಚಿತ್ರೀಕರಣ ಮುಗಿದಿದ್ದು ರಿಲೀಸ್ ಗೆ ರೆಡಿಯಾಗುತ್ತಿದೆ.