Don't Miss!
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್ ಬಗ್ಗೆ ಭಾರತದ ಮಾಜಿ ಆಟಗಾರರ ಅಭಿಪ್ರಾಯ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- News ಧಾರವಾಡ; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ವಾಪಸ್, ಕಣದಲ್ಲಿ 17 ಮಂದಿ
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bangalore Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದರ್ಶನ್ ಡಿಸ್ಚಾರ್ಜ್, ಒಂದು ವಾರ ವಿಶ್ರಾಂತಿ
ಚಾಲೆಂಜಿಂಗ್
ಸ್ಟಾರ್
ದರ್ಶನ್
ಅವರನ್ನು
ಶನಿವಾರ
(ಆ.3)
ಮಧ್ಯಾಹ್ನ
12
ಗಂಟೆಗೆ
ಬಿಜಿಎಸ್
ಆಸ್ಪತ್ರೆಯಿಂದ
ಡಿಸ್ಚಾರ್ಜ್
ಮಾಡಲಾಯಿತು.
'ಬೃಂದಾವನ'
ಚಿತ್ರೀಕರಣ
ವೇಳೆ
ಕುದುರೆ
ಮೇಲಿಂದ
ಬಿದ್ದು
ಗಾಯಗೊಂಡಿದ್ದ
ಅವರನ್ನು
ಚಿಕಿತ್ಸೆಗಾಗಿ
ಕೆಂಗೇರಿ
ಬಳಿಯ
ಬಿಜಿಎಸ್
ಅಸ್ಪತ್ರೆಗೆ
ದಾಖಲಿಸಲಾಗಿತ್ತು.
ತಮ್ಮ ನೆಚ್ಚಿನ ನಟನನ್ನು ನೋಡಲು ಆಸ್ಪತ್ರೆ ಬಳಿ ದರ್ಶನ್ ಅವರ ಅಪಾರ ಅಭಿಮಾನಿಗಳು ಜಮಾಯಿಸಿದ್ದರು. ಅವರ ಕುತ್ತಿಗೆಗೆ ಪಟ್ಟಿ ಕಟ್ಟಲಾಗಿತ್ತು. ಕತ್ತನ್ನು ಅತ್ತ ಇತ್ತ ತಿರುಗಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೂ ಅವರು ಮಾಧ್ಯಮಗಳೊಂದಿಗೆ ಹಸನ್ಮುಖಿಯಾಗಿ ಮಾತನಾಡಿದರು.
ಒಂದು ವಾರದ ನಂತರ ದರ್ಶನ್ ಮತ್ತೆ ಆಕ್ಷನ್, ಫೈಟಿಂಗ್ ಮಾಡಲು ಅಡ್ಡಿಯಿಲ್ಲ ಎಂದಿದ್ದಾರೆ ವೈದ್ಯರು. 'ಬೃಂದಾವನ' ಚಿತ್ರೀಕರಣ ವೇಳೆ ದರ್ಶನ್ ಎರಡು ಬಾರಿ ಗಾಯಗೊಂಡಿದ್ದರು. ಐಸ್ ಲ್ಯಾಂಡ್ ನಲ್ಲಿ ಹಾಡಿನ ಚಿತ್ರೀಕರಣ ವೇಳೆ ಕುದುರೆ ಮೇಲಿಂದ ಬಿದ್ದಿದ್ದರು.
ಬಳಿಕ ಮೈಸೂರಿನಲ್ಲಿ ನಡೆದ ಡಿಶುಂ ಡಿಶುಂ ಸನ್ನಿವೇಶಗಳಲ್ಲಿ ಅವರಿಗೆ ಕೆಲವು ಪೆಟ್ಟುಗಳಾಗಿದ್ದವು. ಆದರೆ ದರ್ಶನ್ ಈ ನೋವುಗಳನ್ನೂ ಲೆಕ್ಕಿಸದೆ ಶೂಟಿಂಗ್ ನಲ್ಲಿ ಪಾಲ್ಗೊಂಡಿದ್ದ ಕಾರಣ ನೋವು ಉಲ್ಬಣಿಸಿತ್ತು. ಕಡೆಗೆ ಅವರು ಬಿಜಿಎಸ್ ಆಸ್ಪತ್ರೆಗೆ ದಾಖಲಾಗಿದ್ದರು. (ಒನ್ಇಂಡಿಯಾ ಕನ್ನಡ)