Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Automobiles ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮತ್ತೊಂದು ಜಾಲಿ ರೈಡ್ ಹೊರಟ ದರ್ಶನ್ ಅಂಡ್ ಟೀಂ; 'ಸಾರಥಿ' ಪಯಣ ಯಾವ ಕಡೆಗೆ?
ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಕ್ ಡೌನ್ ಬಳಿಕ ಹೆಚ್ಚಾಗಿ ತಮ್ಮ ಮೈಸೂರಿನ ತೋಟದ ಮನೆಯಲ್ಲೇ ವಾಸಿಸುತ್ತಿದ್ದಾರೆ. ಆಗಾಗ ತನ್ನ ಸ್ನೇಹಿತರ ಜೊತೆ ಗ್ಯಾಂಗ್ ಜೊತೆ ಕಾಣಿಸಿಕೊಳ್ಳುವ ದರ್ಶನ್ ಅವರ ಜಾಲಿ ಟ್ರಿಪ್ ಎಂಜಾಯ್ ಮಾಡುತ್ತಿರುತ್ತಾರೆ.
Recommended Video
ಲಾಕ್ ಡೌನ್ ಬಳಿಕ ಬಹುತೇಕರು ಚಿತ್ರೀಕರಣ ಪ್ರಾರಂಭ ಮಾಡಿದ್ದಾರೆ. ಆದರೆ ದರ್ಶನ್ ಇನ್ನೂ ಚಿತ್ರೀಕರಣ ಶುರುಮಾಡಿಲ್ಲ. ಈ ವರ್ಷ ಇನ್ನೇನು ಕಳೆಯುತ್ತಾ ಬಂತು. ಹಾಗಾಗಿ ದರ್ಶನ್ ಮುಂದಿನ ವರ್ಷದಿಂದ ಚಿತ್ರೀಕರಣ ಪ್ರಾರಂಭ ಮಾಡಲಿದ್ದಾರೆ. ಸದ್ಯ ಸಿನಿಮಾ ಕೆಲಸಗಳಿಗೆ ವಿರಾಮ ನೀಡಿರುವ ಡಿ ಬಾಸ್ ಸ್ನೇಹಿತರ ಜೊತೆ ಬೈಕ್ ರೈಡ್ ಎಂಜಾಯ್ ಮಾಡುತ್ತಿದ್ದಾರೆ.
ದರ್ಶನ್ ಗೆ ಕ್ಯೂಟ್ ಆದ ಉಡುಗೊರೆ ಕೊಟ್ಟ ಚಿಕ್ಕಣ್ಣ
ಇದೀಗ ದರ್ಶನ್ ಮತ್ತು ತಂಡ ಮತ್ತೊಂದು ಬೈಕ್ ರೈಡ್ ಹೊರಟಿದ್ದಾರೆ. ಇತ್ತೀಚಿಗಷ್ಟೆ ಮಡಿಕೇರಿ ಕಡೆ ಪಯಣ ಬೆಳೆಸಿದ್ದ ದರ್ಶನ್, ಈ ಬಾರಿ ಕೇರಳ ಕಡೆ ಹೊರಟಿದ್ದಾರೆ ಎಂದು ಹೇಳಲಾಗುತ್ತಿದೆ. ಆರ್ ಆರ್ ನಗರದ ತಮ್ಮ ನಿವಾಸದಿಂದ ಹೊರಟ ದರ್ಶನ್ ಗೆ ನಟ ಪ್ರಜ್ವಲ್ ದೇವರಾಜ್, ಚಿಕ್ಕಣ್ಣ, ಉಮಾಪತಿ ಸೇರಿದಂತೆ ಸ್ನೇಹಿತರು ಸಾಥ್ ನೀಡಿದರು.
ಸ್ನೇಹಿತರ ಗ್ಯಾಂಗ್ ಜೊತೆ ಮನೆಯಿಂದ ಹೊರಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮನೆಮುಂದೆ ನೆರೆದಿದ್ದ ಅಭಿಮಾನಿಗಳತ್ತ ಕೈ ಬೀಸಿ, ಮನೆದೇವರಿಗೆ ನಮಸ್ಕರಿಸಿ ಹೊರಟಿದ್ದಾರೆ. ದರ್ಶನ್ ಸದ್ಯ ರಾಬರ್ಟ್ ರಿಲೀಸ್ ಗೆ ಎದುರು ನೋಡುತ್ತಿದ್ದಾರೆ. ಬಹುನಿರೀಕ್ಷೆಯ ರಾಬರ್ಟ್ ಸಿನಿಮಾ ಮುಂದಿನ ವರ್ಷ ಜನವರಿಯಲ್ಲಿ ರಿಲೀಸ್ ಆಗುವ ಸಾಧ್ಯತೆ ಇದೆ.
ಇನ್ನೂ ಮದಕರಿ ನಾಯಕ ಸಿನಿಮಾದ ಚಿತ್ರೀಕರಣ ಪ್ರಾರಂಭಿಸಬೇಕಿದೆ. ಇತ್ತೀಗಷ್ಟೆ ನಿರ್ದೇಶಕ ರಾಜೇಂದ್ರ ಸಿಂಗ್ ಬಾಬು ಮತ್ತು ನಟ ದೊಡ್ಡಣ್ಣ ಸಿನಿಮಾ ಚಿತ್ರೀಕರಣಕ್ಕೆ ಲೊಕೇಶನ್ ಹುಡುಕಾಟ ಮಾಡುತ್ತಿದ್ದರು. ಸದ್ಯದಲ್ಲೇ ಸಿನಿಮಾದ ಚಿತ್ರೀಕರಣ ಪ್ರಾರಂಭ ಮಾಡುವುದಾಗಿ ಹೇಳಿದ್ದರು. ಜನವರಿಯಿಂದ ದರ್ಶನ್ ವೀರ ಮದಕರಿನಾಯಕ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ.