Don't Miss!
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- News ವಸೂಲಿ ಟೈಟಾನ್ಸ್, ಇಂಪ್ಯಾಕ್ಟ್ ಪ್ಲೇಯರ್ ಇ.ಡಿ; ಮೋದಿ, ಬಿಜೆಪಿಯನ್ನು ಅಣಕಿಸಿದ ಮಹಿಳಾ ಕ್ರಿಕೆಟರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು ಬರದಿರಿ: ನಟ ದರ್ಶನ್
Recommended Video
"ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು/ಪ್ರಚೋದಿಸಲು ಬರದಿರಿ" ಎಂದು ವಿರೋಧಿಗಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಖಡಕ್ ವಾರ್ನಿಂಗ್ ನೀಡುವ ಮೂಲಕ ಅಭಿಮಾನಿಗಳ ಬೆನ್ನಿಗೆ ನಿಂತಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ವಾರ್ ತಾರಕಕ್ಕೇರಿದೆ. ದರ್ಶನ್ ಮತ್ತು ಸುದೀಪ್ ಅಭಿಮಾನಿಗಳು ಕಿತ್ತಾಡುತ್ತಿದ್ದಾರೆ. ಅಭಿಮಾನಿಗಳ ವಾರ್ ಗೆ ಈಗ ದಾಸ ದರ್ಶನ್ ಎಂಟ್ರಿ ಕೊಟ್ಟಿದ್ದಾರೆ.
ಟ್ವಿಟ್ಟರ್ ನಲ್ಲಿ ಖಡಕ್ ಎಚ್ಚರಿಕೆ ನೀಡುವ ಮೂಲಕ ತಮ್ಮ ಅಭಿಮಾನಿಗಳ ಬೆನ್ನಿಗೆ ನಿಂತಿದ್ದಾರೆ ದರ್ಶನ್. ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ರಿಲೀಸ್ ಆದ ನಂತರ ಇಬ್ಬರು ಸ್ಟಾರ್ ನಟರ ಅಭಿಮಾನಿಗಳ ವಾರ್ ಜಾಸ್ತಿ ಆಗಿದೆ. ಸಾಮಾಜಿಕ ಜಾಲತಾಣವನ್ನು ಬಳಸಿಕೊಂಡು ಅಭಿಮಾನಿಗಳು ಮಾತ್ರ ಕಿತ್ತಾಡುತ್ತಿದ್ದರು, ಆದ್ರೀಗ ನಟ ದರ್ಶನ್ ನೇರವಾಗಿ ಫ್ಯಾನ್ಸ್ ವಾರ್ ಅಖಾಡಕ್ಕೆ ಇಳಿದಿದ್ದಾರೆ.
ದರ್ಶನ್-ಸುದೀಪ್ ಅಭಿಮಾನಿಗಳ ಕಿತ್ತಾಟ: 'ಪೈರಸಿ' ಹಿಂದಿರುವ ಅಸಲಿ ಕತೆ!
ವಿರೋಧಿಗಳಿಗೆ ದರ್ಶನ್ ವಾರ್ನಿಂಗ್
"ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್ ಅಲ್ಲಿ ಬ್ಯುಸಿಯಾಗಿದ್ದೇನೆ. ಸದ್ಯಕ್ಕೆ ಕೇಳಿ ಬರುತ್ತಿರುವ ಕೆಲವು ವ್ಯಕ್ತಿಗಳ ಬಗ್ಗೆ ಒಂದು ಕಿವಿಮಾತು-ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು/ಪ್ರಚೋದಿಸಲು ಬರದಿರಿ" ಎಂದು ಎಚ್ಚರಿಕೆ ನೀಡಿದ್ದಾರೆ.
ದರ್ಶನ್ ಅಭಿಮಾನಿಗಳ ಬಹಿರಂಗ ಪತ್ರ
ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ರಿಲೀಸ್ ಆದ ನಂತರ ಡಿ ಬಾಸ್ ಅಭಿಮಾನಿಗಳು ಮತ್ತು ಸುದೀಪ್ ಅಭಿಮಾನಿಗಳ ನಡುವೆ ಕಿತ್ತಾಟ ಜಾಸ್ತಿ ಆಗಿದೆ. ಪೈಲ್ವಾನ್ ಸಿನಿಮಾ ಪೈರಸಿಯಾಗಿ ವೈರಲ್ ಆಗುತ್ತಿದ್ದಂತೆ ಪೈರಸಿ ಆರೋಪ ದರ್ಶನ್ ಅಭಿಮಾನಿಗಳ ಮೇಲೆ ಬಂದಿದೆ. ಇದರಿಂದ ರೊಚ್ಚಿಗೆದ್ದ ದರ್ಶನ್ ಅಭಿಮಾನಿಗಳು ಸುದೀಪ್ ಫ್ಯಾನ್ಸ್ ಗೆ ಬಹಿರಂಗ ಪತ್ರ ಬರೆದಿದ್ದರು.
ವಿರೋಧಿಗಳಿಗೆ ಬಹಿರಂಗ ಪತ್ರ ಬರೆದ ದರ್ಶನ್ ಅಭಿಮಾನಿಗಳು
ಸುದೀಪ್ ಫ್ಯಾನ್ಸ್ ಬಹಿರಂಗ ಪತ್ರ
ದರ್ಶನ್ ಅಭಿಮಾನಿಗಳು ಬಹಿರಂಗ ಪತ್ರ ಬರೆಯುತ್ತಿದ್ದಂತೆ ಸುದೀಪ್ ಅಭಿಮಾನಿಗಳು ಸಹ ಬಹಿರಂಗ ಪತ್ರ ಬರೆದಿದ್ದಾರೆ. ಪತ್ರದಲ್ಲಿ ದರ್ಶನ್ ಅಭಿಮಾನಿಗಳು ಹೇಳಿರುವ ಮಾತುಗಳಿಗೆ ಕೌಂಟರ್ ಕೊಡುವ ಹಾಗೆ ಸುದೀಪ್ ಅಭಿಮಾನಿಗಳು ಪತ್ರ ಬರೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಫ್ಯಾನ್ಸ್ ವಾರ್ ಜಾಸ್ತಿಯಾಗುತ್ತಿದೆ
ಫ್ಯಾನ್ಸ್ ವಾರ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಏನಾದರು ಪೋಸ್ಟ್ ಮಾಡಿದ್ರೆ ಸುದೀಪ್ ಅಭಿಮಾನಿಗಳು ಕಮೆಂಟ್ ಮಾಡುತ್ತಾರೆ. ಸುದೀಪ್ ಅಭಿಮಾನಿಗಳು ಪೋಸ್ಟ್ ಮಾಡಿದರೆ ದರ್ಶನ್ ಅಭಿಮಾನಿಗಳು ಕಮೆಂಟ್ ಮಾಡಿ ಕೆಣಕುತ್ತಿರುತ್ತಾರೆ. ಇತ್ತೀಚಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮಾಡಿರುವ ಟ್ವೀಟ್ ಗೆ ಸುದೀಪ್ ಫ್ಯಾನ್ಸ್ ಬೆಂಬಲಿಸಿ ಕಮೆಂಟ್ ಮಾಡಿದ್ದರು. ಹೀಗೆ ಸಾಮಾಜಿಕ ಜಾಲತಾಣದಲ್ಲಿ ಕಳೆದ ಕೆಲವು ದಿನಗಳಿಂದ ಸ್ಟಾರ್ ನಟರಿಬ್ಬರ ಅಭಿಮಾನಿಗಳು ಕೆಸರೆರಚಾಟ ನಡೆಸುತ್ತಿದ್ದಾರೆ.
ದರ್ಶನ್ ಈಗ ಎಲ್ಲಿದ್ದಾರೆ?
ದರ್ಶನ್ ಈಗ ರಾಬರ್ಟ್ ಚಿತ್ರದ ಶೂಟಿಂಗ್ ನಲ್ಲಿ ಇದ್ದಾರೆ. ಹೈದರಾಬಾದ್ ನಲ್ಲಿ ಶೂಟಿಂಗ್ ನಲ್ಲಿರುವ ದರ್ಶನ್ ಅಭಿಮಾನಿಗಳ ಕಿತ್ತಾಟವನ್ನು ಗಮನಿಸಿ ವಿರೋಧಿಗಳಿಗೆ ಟ್ವಿಟ್ಟರ್ ನಲ್ಲಿ ಎಚ್ಚರಿಕೆ ನೀಡುವ ಮೂಲಕ ತಮ್ಮ ಅಭಿಮಾನಿಗಳ ಬೆನ್ನಿಗೆ ನಿಂತಿದ್ದಾರೆ. ಇದಿನ್ನು ಎಲ್ಲಿಗೆ ಹೋಗಿ ಮುಟ್ಟುತ್ತೊ ಆ ದೇವರಿಗೆ ಗೊತ್ತು.