ಕಷ್ಟದಲ್ಲಿದ್ದ ಅಭಿಮಾನಿಗೆ ಆರ್ಥಿಕ ನೆರವು ನೀಡಿ ಮಾನವೀಯತೆ ಮೆರೆದ ದರ್ಶನ್
Recommended Video
ಕಷ್ಟದಲ್ಲಿದ್ದರನ್ನು ಕಂಡರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮನ ಮಿಡಿಯುತ್ತೆ. ಕಷ್ಟ ಎಂದವರಿಗೆ ಸದ ಸಹಾಯ ಹಸ್ತ ಚಾಚುವ ಸರಳತೆಯ ಸಾಮ್ರಾಟ್ ಚಾಲೆಂಜಿಂಗ್ ಸ್ಟಾರ್ ದರ್ಶನ್, ಈಗ ಮತ್ತೊಮ್ಮೆ ಅಭಿಮಾನಿಯೊಬ್ಬರಿಗೆ ನೆರವಾಗುವ ಮೂಲಕ ಮಾನವೀಯತೆ ಮೆರೆದಿದ್ದಾರೆ.
ದರ್ಶನ್ ತೆರೆಮೇಲೆ ಮಾತ್ರ ಹೀರೋ ಆಗಿ ಅಬ್ಬರಿಸದೆ, ನಿಜ ಜೀವನದಲ್ಲೂ ಹೀರೋನೆ ಎಂದು ಪದೇ ಪದೇ ಸಾಭೀತು ಪಡಿಸುತ್ತಲೆ ಇದ್ದಾರೆ. ಇತ್ತೀಚಿಗಷ್ಟೆ ಅಪಘಾತದಲ್ಲಿ ಗಾಯಗೊಂಡು ಸಂಕಷ್ಟದಲ್ಲಿದ್ದ ಅಭಿನಯೊಬ್ಬರಿಗೆ ಆರ್ಥಿಕ ನೆರವು ನೀಡಿ ಮತ್ತೊಮ್ಮೆ ಸಾಮಾಜಿಕ ಕಳಕಳಿ ತೋರಿದ್ದಾರೆ.
ಮಂಡ್ಯ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ನಾಮಪತ್ರ ಸಲ್ಲಿಸುವ ವೇಳೆ ಮೆರಮಣಿಗೆಯಲ್ಲಿ ಪಾಲ್ಗೊಂಡಿದ್ದ ಕಿರಣ್ ಎನ್ನುವರು, ಮನೆಗೆ ವಾಪಸ್ ಆಗುವಾಗ ಅಪಘಾತ ಸಂಭವಿಸಿ ತೀವ್ರವಾಗಿ ಗಾಯಗೊಂಡಿದ್ದರು.

ಈ ವಿಚಾರ ತಿಳಿದ ದರ್ಶನ್ ಕಿರಣ್ ಕುಟುಂಬಕ್ಕೆ 1 ಲಕ್ಷ ಆರ್ಥಿಕ ನೆರವು ನೀಡಿದ್ದಾರೆ. ದರ್ಶನ್ ಅವರ ಆಪ್ತ ಸಚ್ಚಿದಾನಂದ ಎನ್ನುವರ ಬಳಿ ನೆರವು ನೀಡಿದ್ದಾರೆ. ಬೆರೆಯವರ ಕಷ್ಟಕ್ಕೆ ಬಹುಬೇಗ ಸ್ಪಂದಿಸುವ ಡಿ ಬಾಸ್ ಸಾಕಷ್ಟು ಸಮಾಜಮುಖಿ ಕೆಲಸಗಳನ್ನು ಮಾಡಿಕೊಂಡು ಬಂದಿದ್ದಾರೆ. ಹಾಗಾಗಿ ದಚ್ಚು ಅವರನ್ನು ಅಭಿಮಾನಿಗಳು ಆರಾಧ್ಯ ದೈವ ಎಂದು ಪೂಜಿಸುವುದು.


Click it and Unblock the Notifications











