Don't Miss!
- News Heavy Rain Alert: ಮುಂದಿನ ನಾಲ್ಕು ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ
- Sports KKR vs RR IPL 2024: ಜೋಸ್ ದಿ ಬಾಸ್ ಬಟ್ಲರ್ ಆರ್ಭಟಕ್ಕೆ ಕೆಕೆಆರ್ ಹೈರಾಣ; ರಾಯಲ್ ಆಗಿ ಗೆದ್ದ ರಾಜಸ್ಥಾನ
- Lifestyle ಬೇಸಿಗೆಯಲ್ಲಿ ಇಡ್ಲಿ, ದೋಸೆಯ ಹಿಟ್ಟು ಹುಳಿ ಬಂದರೆ ಹುಳಿ ಕಡಿಮೆಯಾಗಲು ಏನು ಮಾಡಬೇಕು?
- Automobiles ಪೆಟ್ರೋಲ್ ಎಂಜಿನ್ಗಳಲ್ಲಿ ಮಾತ್ರ ಬರಲಿದೆ ರೆನಾಲ್ಟ್ನ ಬ್ರಹ್ಮಾಸ್ತ್ರ ಡಸ್ಟರ್
- Finance ಇಸ್ರೇಲ್-ಇರಾನ್ ಯುದ್ಧದ ಪರಿಣಾಮ ಷೇರು ಪೇಟೆಯಲ್ಲಿ ಭಾರಿ ನಷ್ಟ
- Technology YouTube: ಯೂಟ್ಯೂಬ್ ಬಳಕೆದಾರರಿಗೆ ಶಾಕಿಂಗ್ ನ್ಯೂಸ್! ಆಡ್ ಬ್ಲಾಕರ್ ವಿರುದ್ಧ ಸಮರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೊಸ ಚಿತ್ರ 'ಆಸ್ಫೋಟ'
ಕನ್ನಡ ಬಾಕ್ಸ್ ಆಫೀಸ್ ಸುಲ್ತಾನ್ ಎಂದೇ ಕರೆಸಿಕೊಂಡಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಹೊಸ ಚಿತ್ರಕ್ಕೆ ಮುಹೂರ್ತ ಕೂಡಿಬಂದಿದೆ. ಈ ಬಾರಿ ಸೈನೇಡ್, ಪೊಲೀಸ್ ಕ್ವಾಟ್ರಸ್, ಅಟ್ಟಹಾಸ ರೀತಿಯ ವಿಭಿನ್ನ ಚಿತ್ರಗಳನ್ನು ಕೊಟ್ಟ ಎ.ಎಂ.ಆರ್. ರಮೇಶ್ ಆಕ್ಷನ್ ಕಟ್ ಹೇಳಹೊರಟಿದ್ದಾರೆ.
ರಮೇಶ್ ಈ ಬಾರಿಯೂ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಕುರಿತ ಸಬ್ಜೆಕ್ಟ್ ಕೈಗೆತ್ತಿಕೊಂಡಿದ್ದಾರೆ. ರಾಜೀವ್ ಹಂತಕರನ್ನು ಹಿಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ ತಮಿಳುನಾಡಿನ ನಿಷ್ಠಾವಂತ ಪೊಲೀಸ್ ಅಧಿಕಾರಿ ಕಾರ್ತಿಯೇನ್ ಅವರ ಕಥೆಯನ್ನು ತೆರೆಗೆ ತರುತ್ತಿದ್ದಾರೆ.
'ಆಸ್ಫೋಟ' ಚಿತ್ರದ ಕಥೆ ಕೇಳಿ ದರ್ಶನ್ ಸಿಕ್ಕಾಪಟ್ಟೆ ಎಕ್ಸೈಟ್ ಆದರಂತೆ. ಚಿತ್ರದಲ್ಲಿ ಅಭಿನಯಿಸಲು ಅವರು ಓಕೆ ಎಂದಿದ್ದಾರೆ. ಒಂದೆರಡು ದಿನಗಳಲ್ಲಿ ಎಲ್ಲವೂ ಖಚಿತವಾಗಲಿದೆ ಎಂದಿದ್ದಾರೆ ರಮೇಶ್.
1991, ಮೇ 21ರಂದು ತಮಿಳುನಾಡಿನ ಶ್ರೀಪೆರಂಬದೂರಿನಲ್ಲಿ ನಡೆದ ಸ್ಫೋಟದಲ್ಲಿ ರಾಜೀವ್ ಗಾಂಧಿ ಅವರನ್ನು ಹತ್ಯೆ ಮಾಡಲಾಯಿತು. ಈ ಘಟನೆಯಲ್ಲಿ ಆರ್ ಡಿಎಕ್ಸ್ ಬಳಸಲಾಗಿತ್ತು. ಧನು ಮತ್ತವರ ಗ್ಯಾಂಗ್ ನಡೆಸಿದ ಸ್ಫೋಟಕ್ಕೆ 14 ಮಂದಿ ಸ್ಥಳದಲ್ಲೇ ಬೂದಿಯಾಗಿದ್ದರು.
ಈ ಪ್ರಕರಣದ ತನಿಖೆಯನ್ನು ನಡೆಸಿದ ತಮಿಳುನಾಡು ಐಪಿಎಸ್ ಅಧಿಕಾರಿ ಕಾರ್ತಿಕೇಯನ್ ಶೀಘ್ರದಲ್ಲೇ ಧನು ಮತ್ತವರ ಗ್ಯಾಂಗನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದರು. ಬಳಿಕ ಕಾರ್ತಿಕೇಯನ್ ತಮಿಳುನಾಡಿನಲ್ಲಿ ಮನೆಮಾತಾದರು.
ಸದ್ಯಕ್ಕೆ ದರ್ಶನ್ ಜೊತೆ ಮಾತುಕತೆ ನಡೆದಿದೆ. ದರ್ಶನ್ ಅವರಿಗೂ ಕಥೆ ಇಷ್ಟವಾಗಿದೆ. ಡೇಟ್ಸ್, ಸಂಭಾವನೆ ವಿಚಾರದ ವ್ಯಾವಹಾರಿಕ ಮಾತುಕಥೆ ನಡೆಯಬೇಕಿದೆ. ಶೀಘ್ರದಲ್ಲೇ ಎಲ್ಲವೂ ಅಂತಿಮವಾಗಲಿದೆ ಎಂಬ ವಿಶ್ವಾರ ರಮೇಶ್ ಅವರದು. ರಮೇಶ್ ಅವರಂತಹ ಪ್ರತಿಭಾವಂತ ನಿರ್ದೇಶಕರ ಜೊತೆ ದರ್ಶನ್ ಅಭಿನಯಿಸಿದರೆ ಚೆನ್ನಾಗಿರುತ್ತದೆ ಎಂಬುದು ಅವರ ಅಭಿಮಾನಿಗಳ ಆಸೆ. (ಏಜೆನ್ಸೀಸ್)