Don't Miss!
- News Lok Sabha Election: ಗೂಗಲ್ನಲ್ಲೂ ಪ್ರಜಾಪ್ರಭುತ್ವದ ಹಬ್ಬದ ಸಂಭ್ರಮ
- Automobiles Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹನುಮ ಗೀತೆ ಹಾಡಲಿದ್ದಾರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಸರ್ಜಾ ಫ್ಯಾಮಿಲಿ
Recommended Video
ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ನಿರ್ದೇಶನ ಮಾಡಿ ನಿರ್ಮಾಣ ಮಾಡುತ್ತಿರುವ 'ಪ್ರೇಮ ಬರಹ' ಸಿನಿಮಾ ಚಿತ್ರೀಕರಣ ಮುಗಿಸಿ ತೆರೆಗೆ ಬರೋದಕ್ಕೆ ಸಿದ್ದವಾಗುತ್ತಿದೆ. ನಟಿ ಐಶ್ವರ್ಯ ಸರ್ಜಾರನ್ನ ಕನ್ನಡ ಸಿನಿಮಾರಂಗಕ್ಕೆ ಪರಿಚಯಿಸುತ್ತಿರುವ ಅರ್ಜುನ್ ಸರ್ಜಾ, ಸಿನಿಮಾವನ್ನ ವಿಭಿನ್ನವಾಗಿ ಪ್ರಮೋಷನ್ ಮಾಡೋದಕ್ಕೆ ಶುರು ಮಾಡಿದ್ದಾರೆ.
ಅಭಿಮಾನಿಗಳಿಗೆ ಟ್ಯೂನ್ ಸ್ಮ್ಯಾಶ್ ಕಾಂಪಿಟೇಷನ್ ಕೊಟ್ಟು ಒಂದು ಹಾಡನ್ನ ಅವರಿಂದಲೇ ಬರೆಸಿರುವ ಅರ್ಜುನ್ ಸರ್ಜಾ 'ಪ್ರೇಮ ಬರಹ' ಸಿನಿಮಾದ ಕೊನೆಯ ಹಾಡಿನ ಚಿತ್ರೀಕರಣ ಮಾಡಲು ಸಿದ್ದತೆ ನಡೆಸಿದ್ದಾರೆ. ವಿಶೇಷ ಅಂದರೆ ಈ ಹಾಡಿನಲ್ಲಿ ತೂಗುದೀಪ ಫ್ಯಾಮಿಲಿಯ ಚಾಲೆಂಜಿಂಗ್ ಸ್ಟಾರ್ ಹಾಗೂ ಸರ್ಜಾ ಕುಟುಂಬದ ಮೂವರು ನಾಯಕರು ಭಾಗಿಯಾಗಲಿದ್ದಾರೆ.
ಹನುಮನ ಮಂತ್ರ ಜಪಿಸಲು ತಯಾರಿ
ಐಶ್ವರ್ಯ ಸರ್ಜಾ ಹಾಗೂ ಚಂದನ್ ಅಭಿನಯದ 'ಪ್ರೇಮ ಬರಹ' ಸಿನಿಮಾದ ಕೊನೆಯ ಹಾಡಿನ ಚಿತ್ರೀಕರಣ ಮಾಡಲು ಸಿನಿಮಾತಂಡ ತಯಾರಿ ಮಾಡಿಕೊಂಡಿದೆ. ಈ ಹಾಡಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್, ಧ್ರುವ ಸರ್ಜಾ, ಚಿರಂಜೀವಿ ಸರ್ಜಾ ಮತ್ತು ಅರ್ಜುನ್ ಸರ್ಜಾ ಒಟ್ಟಿಗೆ ಹೆಜ್ಜೆ ಹಾಕಲಿದ್ದಾರೆ.
ಅದ್ದೂರಿ ಚಿತ್ರೀಕರಣ
ಈ ಹಾಡನ್ನ ನಾಲ್ಕು ದಿನಗಳ ಕಾಲ ಚಿತ್ರೀಕರಣ ಮಾಡಲು ನಟ-ನಿರ್ದೇಶಕ ಅರ್ಜುನ್ ಸರ್ಜಾ ಪ್ಲಾನ್ ಮಾಡಿದ್ದಾರೆ. ಅದ್ದೂರಿ ಸೆಟ್ ಮಧ್ಯೆಯಲ್ಲಿ ಸಾಂಗ್ ಶೂಟಿಂಗ್ ನಡೆಯಲಿದ್ದು ನೃತ್ಯ ನಿರ್ದೇಶಕ ಮೋಹನ್ ಕೋರಿಯೋಗ್ರಾಫ್ ಮಾಡಲಿದ್ದಾರೆ.
ಹಾಡಿನಲ್ಲಿ ಇರಲಿದೆ ಹನುಮಾನ್ ಚಾಲೀಸ
ಅದ್ದೂರಿ ಸೆಟ್ ಜೊತೆಯಲ್ಲಿ ನೂರು ಜನ ಸಹ ಕಲಾವಿದರನ್ನ ಈ ಹಾಡಿನಲ್ಲಿ ಬಳಸಿಕೊಳ್ಳಲಾಗುತ್ತಂತೆ. ಅರ್ಜುನ್ ಸರ್ಜಾ ಕುಟುಂಬಸ್ಥರು ಹನುಮಂತನ ಭಕ್ತರಾಗಿರೋದ್ರಿಂದ ಹಾಡಿನಲ್ಲಿ ಹನುಮಾನ್ ಚಾಲೀಸ ಕೇಳಿ ಬರಲಿದೆ.
ಪ್ರೇಮಕಥೆಯ ಜೊತೆಗೆ ಸೈನಿಕರಿಗೆ ನಮನ
ಸಿನಿಮಾ ಸಂಪೂರ್ಣ ಚಿತ್ರೀಕರಣ ಮುಗಿಸಿರುವ ಅರ್ಜುನ್ ಸರ್ಜಾ ಚಿತ್ರದಲ್ಲಿ ಕ್ಯೂಟ್ ಲವ್ ಸ್ಟೋರಿಯ ಜೊತೆಯಲ್ಲಿ ದೇಶದ ಗಡಿಯಲ್ಲಿ ಕಾವಲು ಕಾಯುವ ವೀರ ಯೋಧರಿಗೆ ಸಿನಿಮಾ ಮೂಲಕ ನಮನ ಸಲ್ಲಿಸಲಿದ್ದಾರೆ.