Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇವರ ಮೇಲಿನ ಅಭಿಮಾನ, ಪ್ರೀತಿ ಎಂದು ಕಮ್ಮಿಯಾಗಿಲ್ಲ; ನಟ ದರ್ಶನ್
ಕನ್ನಡ ಚಿತ್ರರಂಗದ ಮೇರು ನಟ, ಸಾಹಸ ಸಿಂಹ ಡಾ ವಿಷ್ಣುವರ್ಧನ್ ಅವರು ಅಗಲಿ ಇಂದಿಗೆ 11 ವರ್ಷಗಳು ಕಳೆದಿವೆ. ವಿಷ್ಣುದಾದ ದೈಹಿಕವಾಗಿ ಇಲ್ಲವಾದರೂ ಪ್ರತಿಯೊಬ್ಬ ಅಭಿಮಾನಿ ಹೃದಯದಲ್ಲಿ ಹೃದಯವಂತ ಇನ್ನೂ ಜೀವಂತವಾಗಿದ್ದಾರೆ.
ಇಂದು ಸಾಹಸಿಂಹ ವಿಷ್ಣುವರ್ಧನ್ ಅವರ 11ನೇ ವರ್ಷದ ಪುಣ್ಯತಿಥಿ ಆಚರಿಸಲಾಗುತ್ತಿದೆ. ಅಭಿಮಾನಿಗಳು ಮತ್ತು ಚಿತ್ರರಂಗದ ಗಣ್ಯರು ಹೃದಯವಂತನನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಅಭಿಮಾನಿಗಳು ವಿಷ್ಣುವರ್ಧನ್ ಸಮಾಧಿ ಇರುವ ಅಭಿಮಾನ್ ಸ್ಟುಡಿಯೋ ಹೋಗಿ ನೆಚ್ಚಿನ ನಟನ ಸಮಾಧಿಗೆ ನಮನ ಸಲ್ಲಿಸಲಿದ್ದಾರೆ. ಸಮಾಧಿಗೆ ಹೂವಿನಿಂದ ಅಲಂಕಾರ ಮಾಡಿ, ವಿಶೇಷ ಪೂಜೆ ಸಲ್ಲಿಸಿ ವಿಷ್ಣುದಾದನನ್ನು ಸ್ಮರಿಸಲಿದ್ದಾರೆ.
'ಸ್ನೇಹ ಪ್ರೀತಿಗೆ ಸಾಕಾರ ರೂಪ ನಮ್ಮ ವಿಷ್ಣುವರ್ಧನ್': ಸುಮಲತಾ ಅಂಬರೀಶ್
ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್ ವುಡ್ ಯಜಮಾನನನ್ನು ನೆನಪಿಸಿಕೊಂಡು ಟ್ವೀಟ್ ಮಾಡಿದ್ದಾರೆ. 'ಇವರ ಮೇಲಿನ ಅಭಿಮಾನ ಪ್ರೀತಿ ಎಂದು ಕಮ್ಮಿಯಾಗಿಲ್ಲ. ಅಭಿಮಾನಿಗಳ ಹೃದಯದಲ್ಲಿ ನಿರಂತರ ಯಜಮಾನನಾಗಿರುವ ನಮ್ಮೆಲ್ಲರ ಪ್ರೀತಿಯ ಸಾಹಸಸಿಂಹ ಅಭಿನಯ ಭಾರ್ಗವ ವಿಷ್ಣು ದಾದ ನೀವು ನಮ್ಮ ಹೃದಯದಲ್ಲಿ ಸದಾ ಜೀವಂತ, ವಿಷ್ಣು ದಾದ ಜನರ ಮನದಲ್ಲಿ ಎಂದಿಗೂ ಅಜರಾಮರ. 11ನೇ ಪುಣ್ಯ ಸ್ಮರಣೆ' ಎಂದು ಬರೆದುಕೊಂಡಿದ್ದಾರೆ.
ನಟ ದರ್ಶನ್ ವಿಷ್ಣುವರ್ಧನ್ ಅವರ ಜೊತೆ ಒಂದು ಸಿನಿಮಾದಲ್ಲೂ ನಟಿಸಿದ್ದಾರೆ. ಈ ಬಂಧನ ಸಿನಿಮಾದಲ್ಲಿ ದರ್ಶನ್ ವಿಷ್ಣುವರ್ಧನ್ ಅವರ ಪುತ್ರನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅತಿಥಿ ಪಾತ್ರದಲ್ಲಿ ದರ್ಶನ್ ಮಿಂಚಿದ್ದರು. ಇನ್ನು ವಿಷ್ಣುವರ್ಧನ್ ಅಭಿನಯದ ಸೂಪರ್ ಹಿಟ್ ಯಜಮಾನ ಸಿನಿಮಾದ ಟೈಟಲ್ ನಲ್ಲೇ ಸಿನಿಮಾ ಮಾಡಿ ಯಶಸ್ಸು ಗಳಿಸಿದ್ದಾರೆ.
Recommended Video
ಇನ್ನು ನಟಿ ಮತ್ತು ಸಂಸದೆ ಸುಮಲತಾ ಟ್ವೀಟ್ ಮಾಡಿ, 'ಸ್ನೇಹ ಪ್ರೀತಿಗೆ ಸಾಕಾರ ರೂಪವಾಗಿದ್ದ ನಮ್ಮ ವಿಷ್ಣುವರ್ಧನ್ ನಮ್ಮ ಕಣ್ಣ ಮುಂದೆ ಇರದೇ ಇರಬಹುದು. ಆದರೆ ನಮ್ಮ ನಿಶ್ಚಲ ಯೋಚನೆಗಳಲ್ಲಿ, ನಮ್ಮ ಚೈತನ್ಯದ ಯೋಜನೆಗಳಲ್ಲಿ, ನಮ್ಮ ಸಾಕ್ಷಿ ಪ್ರಜ್ಞೆಯಲ್ಲಿ ಮತ್ತು ಎಲ್ಲದಕ್ಕೂ ಹೆಚ್ಚಾಗಿ ನಮ್ಮೆಲ್ಲರ ಸ್ನೇಹದ ಸೇತುವೆಯಾಗಿ ಇನ್ನೂ ಜೀವಂತವಾಗಿದ್ದಾರೆ. ವಿಷ್ಣು ಚಿರಾಯು' ಎಂದು ನೆನಪಿಸಿಕೊಂಡಿದ್ದಾರೆ. ಜೊತೆಗೆ ಅಂಬರೀಶ್, ವಿಷ್ಣುವರ್ಧನ್ ಮನೆಯಲ್ಲಿ ಕುಳಿತಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ.