Don't Miss!
- News Government Employees; ಸರ್ಕಾರಿ ನೌಕರರ ಜೀವ ವಿಮೆ ಪಾಲಿಸಿ ಅವಧಿ ಏರಿಕೆ
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Automobiles Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
- Sports RCB vs KKR: ಯಶ್ ಮೇಲೆ 'ದಯೆ' ತೋರುತ್ತಾರಾ ರಿಂಕು ಸಿಂಗ್?; ಜಿದ್ದು ತೀರಿಸಿಕೊಳ್ತಾರಾ ಆರ್ಸಿಬಿ ವೇಗಿ?
- Technology ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಡೀಪ್ಫೇಕ್ ದೊಡ್ಡ ಕಳವಳಕಾರಿ ಎಂದ ಮೋದಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರಾವಳಿಯ ದರ್ಶನ್ ಅಭಿಮಾನಿಗಳಿಗೆ ಭಾರಿ ನಿರಾಸೆ
ಸುಮಾರು 3 ವರ್ಷಗಳ ಹಿಂದೆ ಸೆಟ್ಟೇರಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿರೀಕ್ಷಿತ ಸಿನಿಮಾ 'ವಿರಾಟ್' ಇಂದು (ಜನವರಿ 29) ಇಡೀ ಕರ್ನಾಟಕದಾದ್ಯಂತ ಅದ್ಧೂರಿಯಾಗಿ ತೆರೆಕಂಡಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ.
ವಿಷಯ ಏನಪ್ಪಾ ಅಂದ್ರೆ ದರ್ಶನ್ ಅವರ 'ವಿರಾಟ್' ದರ್ಶನ ಇಡೀ ಬೆಂಗಳೂರಿಗರಿಗೆ ಏನೋ ಆಗ್ತಿದೆ. ಆದರೆ ಕರಾವಳಿ ಪ್ರದೇಶದ ಮಂಗಳೂರಿನ ಅಭಿಮಾನಿಗಳಿಗೆ ಮಾತ್ರ ನಿರಾಸೆಯಾಗಿದೆ.['ವಿರಾಟ್' ವಿಮರ್ಶೆ; ಕಡ್ಡಾಯವಾಗಿ ದರ್ಶನ್ ಅಭಿಮಾನಿಗಳಿಗೆ ಮಾತ್ರ]
ಹೌದು ನಿರ್ದೇಶಕ ಹೆಚ್.ವಾಸು ನಿರ್ದೇಶನದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 'ವಿರಾಟ್' ಸಿನಿಮಾ ಇಂದು ಮಂಗಳೂರಿನಲ್ಲಿ ಬಿಡುಗಡೆ ಆಗಿಲ್ಲ. ಕೆಲವು ತಾಂತ್ರಿಕ ದೋಷಗಳಿಂದ ಕರಾವಳಿ ಪ್ರದೇಶದಲ್ಲಿ ಇಂದು ಸಿನಿಮಾ ಪ್ರದರ್ಶನಗೊಂಡಿಲ್ಲ.[ದರ್ಶನ್ 'ವಿರಾಟ್' ದರ್ಶನ ಹೇಗಿದೆ? ಟ್ವಿಟ್ಟರ್ ನಲ್ಲಿ ವಿಮರ್ಶೆ]
ಆನ್ ಲೈನ್ ಮೂಲಕ 'ವಿರಾಟ್' ಚಿತ್ರದ ಕಂಟೆಂಟ್ ಗಳು ಮಂಗಳೂರಿನ ಚಿತ್ರಮಂದಿರಗಳಿಗೆ ತಲುಪಬೇಕಿತ್ತು. ಆದರೆ ಕೆಲವಾರು ತಾಂತ್ರಿಕ ದೋಷಗಳಿಂದ ಈ ಸಮಸ್ಯೆ ಎದುರಾಗಿದೆ ಎಂದು ಹೇಳಲಾಗಿದೆ.
ಆದರೆ ಒಂದೆಡೆ ಪೇಮೆಂಟ್ ವಿಳಂಬದಿಂದಾಗಿ ಈ ತೊಂದರೆ ಆಗಿರಬಹುದು ಎಂದು ಕೂಡ ಹೇಳಲಾಗುತ್ತಿದೆ. ಯಾವುದು ನಿಜ ಯಾವುದು ಸುಳ್ಳು ಅನ್ನೋದು ಮಾತ್ರ ಯಾರಿಗೂ ಗೊತ್ತಿಲ್ಲ ಒಟ್ನಲ್ಲಿ ಮಂಗಳೂರಲ್ಲಿ ಈ ದಿನ ದರ್ಶನ್ ಅಭಿಮಾನಿಗಳಿಗೆ 'ವಿರಾಟ್' ದರ್ಶನ ಆಗಿಲ್ಲ.