Don't Miss!
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- News ವಸೂಲಿ ಟೈಟಾನ್ಸ್, ಇಂಪ್ಯಾಕ್ಟ್ ಪ್ಲೇಯರ್ ಇ.ಡಿ; ಮೋದಿ, ಬಿಜೆಪಿಯನ್ನು ಅಣಕಿಸಿದ ಮಹಿಳಾ ಕ್ರಿಕೆಟರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫಿಲಂಫೇರ್ ಪ್ರಶಸ್ತಿಗೆ ದರ್ಶನ್ ಗೈರಾಗಲು ಕಾರಣ!
ಚಾಲೆಂಜಿಂಗ್ ಸ್ಟಾರ್ ದರ್ಶನ್ ಈಗ ಮುಟ್ಟಿದೆಲ್ಲಾ ಚಿನ್ನ. ಸಾರಥಿ ನಂತರ ಬಿಡುಗಡೆಗೊಂಡ ಮೂರೂ ಚಿತ್ರಗಳು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದವು. ಬಾಕ್ಸ್ ಆಫೀಸ್ ಸುಲ್ತಾನ್ ಎಂದೇ ಅಭಿಮಾನಿಗಳಿಂದ ಕರೆಯಲ್ಪಡುತ್ತಿರುವ ದರ್ಶನ್ ಮೊದಲ ಬಾರಿಗೆ ನೋವನ್ನು ತೋಡಿಕೊಂಡಿದ್ದಾರೆ.
ಪ್ರತಿಷ್ಠಿತ ಫಿಲಂಫೇರ್ ಪ್ರಶಸ್ತಿಯ 60ನೇ ಕಂತಿನಲ್ಲಿ ಪ್ರಪ್ರಥಮ ಬಾರಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ ಅವರು ಅತ್ಯುತ್ತಮ ನಟ ಪ್ರಶಸ್ತಿ ಗಳಿಸಿದ್ದರು. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಚಿತ್ರದ ನಟನೆಗಾಗಿ ದರ್ಶನ್ ಪ್ರಶಸ್ತಿಗೆ ಭಾಜನರಾಗಿದ್ದರು.
ಹೈದರಾಬಾದಿನಲ್ಲಿ ನಡೆದ ಈ ಪ್ರಶಸ್ತಿ ಸ್ವೀಕರಿಸಲು ದರ್ಶನ್ ಹಾಜರಾಗರಿರಲಿಲ್ಲ. ಮೊದಲ ಬಾರಿಗೆ ಒಲಿದ ಪಶಸ್ತಿ ಖುದ್ದಾಗಿ ಸ್ವೀಕರಿಸಲು ಸಾಧ್ಯವಾಗಲಿಲ್ಲ ಎನ್ನುವ ನೋವು ದರ್ಶನಿಗೆ ಕಾಡುತ್ತಿದೆ ಎಂದು ಅವರೇ ಮೈಸೂರಿನಲ್ಲಿ ಹೇಳಿದ್ದಾರೆ.
ಪ್ರಶಸ್ತಿ ವಿತರಣೆಯ ದಿನ ಮೈಸೂರಿನಲ್ಲಿ ಚಿತ್ರೀಕರಣದಲ್ಲಿ ಬ್ಯೂಸಿಯಾಗಿದ್ದರಿಂದ ದರ್ಶನ್ ಫಿಲಂಫೇರ್ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಸಂಪತ್, ಸಾಯಿಕುಮಾರ್ ಮತ್ತು ನಟಿ ಗೀತಾ ಭಾಗಿಯಾಗಿದ್ದ ಚಿತ್ರೀಕರಣ ನಡೆಯುತ್ತಿತ್ತು.
ನಾನು ಪ್ರಶಸ್ತಿ ಸ್ವೀಕರಿಸಲು ತೆರಳಿದಿದ್ದರೆ ಶೂಟಿಂಗ್ ಮೂರು ತಿಂಗಳು ಮುಂದೆ ಹೋಗುತ್ತಿತ್ತು. ನಾವು ಮೂರು ಜನ ಒಟ್ಟಿಗೆ ಚಿತ್ರೀಕರಣದಲ್ಲಿ ಮತ್ತೆ ಒಂದಾಗಲು ಡೇಟ್ಸ್ ಸಮಸ್ಯೆ ತೋರಿ ನನ್ನಿಂದ ಚಿತ್ರೀಕರಣ ಮುಗಿಯಲು ತೊಂದರೆಯಾಗುತ್ತಿತ್ತು.
ನಿರ್ಮಾಪಕರು ನನಗೆ ಪ್ರಶಸ್ತಿ ಸ್ವೀಕರಿಸಿ ಬರಲು ಅನುಮತಿ ನೀಡಿದ್ದರೂ ನನ್ನ ವೃತ್ತಿ ಧರ್ಮಕ್ಕೆ ಅನ್ಯಾಯ ಮಾಡಲು ನನಗೆ ಇಷ್ಟವಿರಲಿಲ್ಲ. ನನ್ನಿಂದ ಎಲ್ಲರಿಗೂ ತೊಂದರೆಯಾಗುವುದು ಬೇಡ, ಮುಖ್ಯವಾಗಿ ನಿರ್ಮಾಪಕರಿಗೆ ನಷ್ಟ ಆಗಬಾರದು ಎಂದು ಚಿತ್ರೀಕರಣದಲ್ಲೇ ಮುಂದುವರಿದೆ ಎಂದು ದರ್ಶನ್ ಹೇಳಿದ್ದಾರೆ.
ಪ್ರಶಸ್ತಿಯನ್ನು ಇನ್ನೂ ನಾನು ಕೈಯಿಂದ ಮುಟ್ಟಿಲ್ಲ, ಬೆಂಗಳೂರು ತಲುಪಿದ ಮೇಲೆ ಆನಂದ್ ಅಪ್ಪುಗೋಳ್ ಅವರಿಂದ ಪಡೆದುಕೊಳ್ಳುವೆ ಎಂದು ದರ್ಶನ್ ತೂಗುದೀಪ್ ಹೇಳಿದ್ದಾರೆ.
ದರ್ಶನ್, ಪ್ರಿಯಾಮಣಿಗೆ ಫಿಲಂಫೇರ್ ಪ್ರಶಸ್ತಿ ಗರಿ
ಫಿಲಂಫೇರ್ ದಕ್ಷಿಣ ಪ್ರಶಸ್ತಿ ಸಂಪೂರ್ಣ ಪಟ್ಟಿ