Don't Miss!
- News Shivamogga: ದೇಶದಲ್ಲಿ ಕಾಂಗ್ರೆಸ್ನ ಸ್ಪರ್ಧೆಯ ಕ್ಷೇತ್ರ, ಟಾರ್ಗೆಟ್ ಕ್ಷೇತ್ರಗಳ ಲೆಕ್ಕ ಕೊಟ್ಟ ಮಾಜಿ ಸಿಎಂ
- Finance ನೆಸ್ಲೆಯ ಸೆರೆಲಾಕ್ ಶಿಶು ಹಾಲಿನಲ್ಲಿ ಸಕ್ಕರೆ ಅಂಶ ಪತ್ತೆ: ತನಿಖಾ ವರದಿಯಲ್ಲಿ ಬಹಿರಂಗ
- Technology ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- Lifestyle ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- Automobiles Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡಿ ಬಾಸ್ ದರ್ಶನ್ 'ಸಾರಥಿ'ಯಾಗಿ ಇಂದಿಗೆ 10 ವರ್ಷ
ಸ್ಯಾಂಡಲ್ ವುಡ್ ನ ಡಿ ಬ್ರದರ್ಸ್ ಗೆ ಇಂದು ವಿಶೇಷವಾದ ದಿನ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ, ದಿನಕರ್ ತೂಗುದೀಪ ನಿರ್ದೇಶನದಲ್ಲಿ ಬಂದ ಸಾರಥಿ ಸಿನಿಮಾ ರಿಲೀಸ್ ಆದ ದಿನವಿದು. ಚಾಲೆಂಜಿಂಗ್ ಸ್ಟಾರ್ ಸಿನಿ ಜೀವನಕ್ಕೆ ಹೊಸ ತಿರುವು ಕೊಟ್ಟ ಸೂಪರ್ ಹಿಟ್ ಸಿನಿಮಾವಿದು. 2011ರಲ್ಲಿ ರಿಲೀಸ್ ಆದ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು.
ಈ ಸೂಪರ್ ಹಿಟ್ ಸಿನಿಮಾಗೆ ಈಗ 10 ವರ್ಷದ ಸಂಭ್ರಮ. ಇನ್ನೇನು ದರ್ಶನ್ ಸಿನಿಮಾ ಕರಿಯರ್ ಮುಗಿತೇ ಹೋಯಿತು ಎಂದು ಇಡೀ ಗಾಂಧಿನಗರ ಮಾತನಾಡಿಕೊಳ್ಳುತ್ತಿದ್ದ ಸಮಯದಲ್ಲಿ ಬಂದ 'ಸಾರಥಿ' ಸಿನಿಮಾ ಡಿ ಬಾಸ್ ರನ್ನ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿತು. 'ಸಾರಥಿ'ಯನ್ನು ಅಭಿಮಾನಿಗಳು ತಲೆಮೇಲೆ ಹೊತ್ತು ಮೆರವಣಿಗೆ ಮಾಡಿದ್ರು. ಆ ನಂತರ ಬಂದ ಚಾಲೆಂಜಿಂಗ್ ಸ್ಟಾರ್ ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಉತ್ತಮ ಕಲೆಕ್ಷನ್ ಮಾಡಿದವು.
ಈ ಸಿನಿಮಾದಲ್ಲಿ ದರ್ಶನ್ ಆಟೋ ಸಾರಥಿಯಾಗಿ ಕಾಣಿಸಿಕೊಂಡಿದ್ದಾರೆ. ರಾಜ ಅನ್ನೋ ಪಾತ್ರದಲ್ಲಿ ಮಿಂಚಿದ್ದ ದರ್ಶನ್ ಅಭಿಮಾನಿಗಳ ಮನಗೆದ್ದಿದರು. ಚಿತ್ರದ ಮೇಕಿಂಗ್, ಪವರ್ ಪುಲ್ ಪಂಚಿಂಗ್ ಡೈಲಾಗ್ಸ್, ಲವ್ ಸ್ಟೋರಿ, ಫ್ಲ್ಯಾಶ್ ಬ್ಯಾಕ್ ಕಥೆ ಎಲ್ಲವೂ ಚಿತ್ರಪ್ರಿಯರಿಗೆ ತುಂಬಾ ಇಷ್ಟವಾಗಿತ್ತು. ಚಿತ್ರದಲ್ಲಿ ನಾಯಕಿಯಾಗಿ ದೀಪಾ ಸನ್ನಿಧಿ ಕಾಣಿಸಿಕೊಂಡಿದ್ದರು. ದೀಪಾ ನಟನೆಯ ಮೊದಲ ಸಿನಿಮಾ ಇದಾಗಿದ್ದು, ಚೊಚ್ಚಲ ಚಿತ್ರದಲ್ಲೇ ದೊಡ್ಡ ಸಕ್ಸಸ್ ಕಂಡಿದ್ದರು.
ಇದೀಗ ಸಾರಥಿ 10 ವರ್ಷ ತುಂಬಿರುವ ಖುಷಿಯನ್ನು ಡಿ ಬಾಸ್ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಡಿ ಬ್ರದರ್ಸ್ ಮತ್ತೊಂದು ಸೂಪರ್ ಹಿಟ್ ಸಿನಿಮಾವನ್ನು ಆದಷ್ಟು ಬೇಗ ಮಾಡಲಿ ಎಂದು ಹರಿಸುತ್ತಿದ್ದಾರೆ. ದರ್ಶನ್ ಕ್ರಾಂತಿ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗಷ್ಟೆ ಸಿನಿಮಾದ ಟೈಟಲ್ ಅನೌನ್ಸ್ ಮಾಡಲಾಗಿದೆ. ಚಿತ್ರಕ್ಕೆ ಶೈಲಜಾ ನಾಗ್ ಬಂಡವಾಳ ಹೂಡುತ್ತಿದ್ದು, ಹರಿಕೃಷ್ಣ ಆಕ್ಷನ್ ಕಟ್ ಹೇಳುತ್ತಿದ್ದಾರೆ.