ರೈತರು ಚೆನ್ನಾಗಿದ್ದರೆ ಮಾತ್ರ ನಮ್ಮ ಹೊಟ್ಟೆಗೆ ಕೂಳು ಸಿಗುತ್ತದೆ: ದರ್ಶನ್
Recommended Video
ಇಂದು ವಿಶ್ವ ರೈತ ದಿನಾಚರಣೆ. ವಿಶ್ವದಾದ್ಯಂತ ಅನೇಕರು ಅನ್ನದಾತರನ್ನು ನೆನೆದು ಶುಭಾಶಯ ಕೋರುತ್ತಿದ್ದಾರೆ. ದೇಶದ ಬೆನ್ನೆಲುಬಾಗಿರುವ ರೈತರಿಗಾಗಿ ಒಂದು ದಿನ ಮೀಸಲಿಟ್ಟು ಅವರ ದಿನಾಚರಣೆ ಆಚರಿಸುತ್ತಿರುವುದು ಹೆಮ್ಮೆಯ ವಿಚಾರ. ಇಡೀ ದೇಶಕ್ಕೆ ಅನ್ನ ಕೊಡುವವರನ್ನು ಮರೆಯಲು ಸಾಧ್ಯವೆ ಇಲ್ಲ.
ಸ್ಯಾಂಡಲ್ ವುಡ್ ನ ಗಣ್ಯರು ರೈತರನ್ನು ನೆನೆಪಿಸಿಕೊಳ್ಳುತ್ತಿದ್ದಾರೆ. ಮೂರು ಹೊತ್ತು ಹೊಟ್ಟೆ ತುಂಬಿಸುವ ಅನ್ನ ದಾತರಿಗೆ ಶುಭಾಶಯ ಕೋರುತ್ತಿದ್ದಾರೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ರೈತರನ್ನು ನೆನಪಿಸಿಕೊಂಡು ಶುಭಾಶಯ ಕೋರಿದ್ದಾರೆ. ಈ ಬಗ್ಗೆ ದರ್ಶನ್ ಟ್ವೀಟ್ ಮಾಡಿದ್ದಾರೆ.
"ಬಲಿಷ್ಠ ರೈತರಿಂದ ಸದೃಢ ದೇಶ ನಿರ್ಮಾಣವಾಗುತ್ತದೆ. ರೈತರು ಚೆನ್ನಾಗಿದ್ದರೆ ಮಾತ್ರ ನಮ್ಮ ಹೊಟ್ಟೆಗೆ ಕೂಳು ಸಿಗುತ್ತದೆ. ದೇಶದ ಬೆನ್ನೆಲುಬಾಗಿ ನಿಂತಿರುವ ರೈತರಿಗೆ ಸದಾ ನನ್ನ ಸಲಾಂ" ಎಂದು ಹೇಳಿದ್ದಾರೆ.

ದರ್ಶನ್ ಸದ್ಯ ರಾಬರ್ಟ್ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಚಿತ್ರೀಕರಣ ಮುಗಿಸಿರುವ ದರ್ಶನ್ ಇದೆ ತಿಂಗಳು 25ಕ್ಕೆ ಅಂದರೆ ಕ್ರಿಸ್ ಮಸ್ ಪ್ರಯುಕ್ತ ಫಸ್ಟ್ ಲುಕ್ ಮೂಲಕ ಅಭಿಮಾನಿಗಳ ಮುಂದೆ ಬರಲಿದ್ದಾರೆ. ರಾಬರ್ಟ್ ಮುಗಿಯುತ್ತಿದ್ದಂತೆ ಮದಕರಿ ನಾಯಕನಾಗಿ ಆಳ್ವಿಕೆ ಶುರು ಮಾಡಲಿದ್ದಾರೆ.


Click it and Unblock the Notifications











