Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕ್ರೈಂ ಥ್ರಿಲ್ಲರ್ ಕಥೆಗೆ ಜೈ ಎಂದ ಚಂದನ್ ಶೆಟ್ಟಿ: ವಿಜಯ ದಶಮಿಗೆ ಮುಹೂರ್ತ!
ಚಂದನ್ ಶೆಟ್ಟಿ ಹಾಡುಗಳನ್ನು ಕೇಳಿ ಎಂಜಾಯ್ ಮಾಡಿದ್ದೀರಿ. ಇನ್ಮುಂದೆ ಇದೇ ಚಂದನ್ ಶೆಟ್ಟಿ ಹೀರೊ ಆಗಿಯೂ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಎಲ್ರ ಕಾಲೆಳಿಯತ್ತೆ ಕಾಲ' ಚಿತ್ರದ ಚಿತ್ರೀಕರಿಣದಲ್ಲಿ ಭಾಗಿಯಾಗಿದ್ದಾರೆ. ಆ ಸಿನಿಮಾ ಬಿಡುಗಡೆಯಾಗಿಲ್ಲ. ಅಷ್ಟರಲ್ಲೇ ಮತ್ತೊಂದು ಸಿನಿಮಾ ಅವರನ್ನು ಹುಡುಕಿಕೊಂಡು ಬಂದಿದೆ.
ಗಾಯನ ಹಾಗೂ ಸಂಗೀತ ನಿರ್ದೇಶನದ ಜೊತೆಗೆ ಚಂದನ್ ಶೆಟ್ಟಿ ನಟನೆಗೂ ಕೈ ಹಾಕಿದ್ದಾರೆ. ಹೀರೊ ಆಗಿ ಕನ್ನಡದ ಗಾಯಕನಿಗೆ ಯಶಸ್ಸು ಸಿಗುತ್ತಾ? ಅನ್ನೋದು ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ. ಆದರೆ, ಅಷ್ಟರೊಳಗೆ ಚಂದನ್ ಶೆಟ್ಟಿಗೆ ಮತ್ತೊಂದು ಅವಕಾಶ ಸಿಕ್ಕಿದೆ.
ಚಂದನ್ ಶೆಟ್ಟಿ ಹೀರೊ ಆಗಲಿರುವ ಹೊಸ ಸಿನಿಮಾ ವಿಜಯ ದಶಮಿ ಶುಭದಿನದಂದು ಆರಂಭವಾಗಲಿದೆ. ಈಗಾಗಲೇ ಸಿನಿಮಾ ಸೆಟ್ಟೇರಿಸಲು ಬೇಕಿರೋ ಸಕಲ ಸಿದ್ಧತೆಗಳನ್ನೂ ಚಿತ್ರತಂಡ ಮಾಡಿಕೊಂಡಿದೆ. ಮೊದಲ ಸಿನಿಮಾಗಿಂತ ಎರಡನೇ ಸಿನಿಮಾ ವಿಭಿನ್ನವಾಗಿರಲಿದೆ.
ಕನ್ನಡ ಚಿತ್ರರಂಗದಲ್ಲಿ ಆಡಿಯೋ ರಿಲೀಸ್, ಪ್ರೀ ರಿಲೀಸ್ ಇವೆಂಟ್ ಸೇರಿದಂತೆ ಸಾಕಷ್ಟು ಕಾರ್ಯಕ್ರಮಗಳನ್ನು ಅದ್ದೂರಿಯಾಗಿ ನಡೆಸಿಕೊಡುವ ನವರಸನ್ ಈ ಸಿನಿಮಾದ ನಿರ್ಮಾಪಕ. ಮೈ ಮೂವೀ ಬಜಾರ್ ಹಾಗೂ ಶ್ರೇಯಸ್ ಮೀಡಿಯಾದ ಮಾಲೀಕ ನವರಸನ್ ಚಂದನ್ ಶೆಟ್ಟಿ ಸಿನಿಮಾಗೆ ಬಂಡವಾಳವನ್ನು ಹೂಡುತ್ತಿದ್ದಾರೆ. ಈ ಹಿಂದೆ 'ದಮಯಂತಿ' ಸೇರಿದಂತೆ ಸುಮಾರು ನಾಲ್ಕು ಚಿತ್ರಗಳನ್ನು ನವರಸನ್ ನಿರ್ಮಾಣ ಮಾಡಿದ್ದಾರೆ. ಅಲ್ಲದೆ ಬೇರೆ ಬೇರೆ ಸಿನಿಮಾಗಳಿಗೆ ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಕೆಲಸ ಮಾಡುತ್ತಿದ್ದಾರೆ.
ವಿಜಯ ದಶಮಿಗೆ ಸೆಟ್ಟೇರುತ್ತಿರುವ ಈ ಸಿನಿಮಾ ಕ್ರೈಮ್ ಥ್ರಿಲ್ಲರ್ ಸಿನಿಮಾ. ವಿಭಿನ್ನ ಸ್ಟೋರಿಯನ್ನು ಕಿರಣ್ ಕುಮಾರ್ ನಿರ್ದೇಶಿಸಲಿದ್ದಾರೆ. ಈ ಸಿನಿಮಾ ಕಿರಣ್ಗೆ ಚೊಚ್ಚಲ ಚಿತ್ರ. ಸ್ವತ: ಚಂದನ್ ಶೆಟ್ಟಿ ತಮ್ಮ ಸಿನಿಮಾಗೆ ಮ್ಯೂಸಿಕ್ ಕಂಪೋಸ್ ಮಾಡಲಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಾಹಕರಾಗಿದ್ದು, ತಬಲ ನಾಣಿ ಸೇರಿದಂತೆ ಅನೇಕ ಹಿರಿಯ ಕಲಾವಿದರು ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಇನ್ನೂ ಹಲವು ಪಾತ್ರಗಳ ಆಯ್ಕೆ ಆಗಬೇಕಿದೆ.
ವಿಜಯ ದಶಮಿಗೆ ಸಿನಿಮಾ ಮುಹೂರ್ತ ಕಾಣುತ್ತಿದ್ದಂತೆ ಶೂಟಿಂಗ್ಗೆ ಚಿತ್ರತಂಡ ರೆಡಿಯಾಗಲಿದೆ. ಅಕ್ಟೋಬರ್ 10ರಿಂದ ಸಿನಿಮಾದ ಚಿತ್ರೀಕರಣ ಆರಂಭ ಆಗಲಿದೆ. ಅಷ್ಟರೊಳಗೆ ಸಿನಿಮಾದ ಇನ್ನುಳಿದ ಪ್ರಮುಖ ಪಾತ್ರಗಳ ಆಯ್ಕೆ ನಡೆಯಲಿದೆ.