Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಎಡಕಲ್ಲು' ಗುಡ್ಡದಿಂದ ಆರಂಭಿಸಿ ಎಡಕಲ್ಲಿನಲ್ಲೇ ಅಂತ್ಯ ಕಂಡ ಚಂದ್ರು
ಕನ್ನಡ ಸಿನಿಮಾರಂಗದಲ್ಲಿ ಬಾಲನಟನಾಗಿ ಸಿನಿಮಾರಂಗಕ್ಕೆ ಪ್ರವೇಶ ಮಾಡಿ ನಂತರ 'ಎಡಕಲ್ಲು ಗುಡ್ಡದ ಮೇಲೆ' ಚಿತ್ರದ ಮೂಲಕ ನಾಯಕನಾಗಿ ಅಭಿನಯಿಸಿದ ಕೂದುವಳ್ಳಿ ಚಂದ್ರಶೇಖರ್ ಇಂದು (ಜ.27) ಅಪಾರ ಸಂಖ್ಯೆಯ ಅಭಿಮಾನಿಗಳು ಹಾಗೂ ಪುತ್ರಿ ಥಾನ್ಯ ಮತ್ತು ಪತ್ನಿ ಶೀಲಾ ಚಂದ್ರಶೇಖರ್ ಅವರನ್ನ ಅಗಲಿದ್ದಾರೆ.
ಚಂದ್ರಶೇಖರ್ ನಾಯಕನಾಗಿ ಕಾಣಿಸಿಕೊಂಡ ಮೊದಲ ಚಿತ್ರದಲ್ಲೇ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರನ್ನ ಮೋಡಿ ಮಾಡಿ ಎಡಕಲ್ಲು ಗುಡ್ಡದ ಮೇಲೆ ಚಂದ್ರಶೇಖರ್ ಅಂತಾನೇ ಪ್ರಖ್ಯಾತಿ ಪಡೆದುಕೊಂಡ ನಟ. ವಿಪರ್ಯಾಸ ಎಂದರೆ ಚಂದ್ರಶೇಖರ್ ನಾಯಕನಾಗಿ ಅಭಿನಯಿಸಿದ ಚಿತ್ರದ ಹೆಸರಿನ ಸಿನಿಮಾದಲ್ಲೇ ಕಡೆಯದಾಗಿ ಬಣ್ಣ ಹಚ್ಚಿದ್ದು.
'ಎಡಕಲ್ಲು ಗುಡ್ಡದ ಮೇಲೆ' ಖ್ಯಾತಿಯ ಚಂದ್ರಶೇಖರ್ ಇನ್ನಿಲ್ಲ
1973 ರಲ್ಲಿ ಹೀರೋ ಆಗಿ ಚಂದ್ರಶೇಖರ್ ಚಿತ್ರರಂಗಕ್ಕೆ ಪರಿಚಯವಾದ ಸಿನಿಮಾದ ಹೆಸರು ಎಡಕಲ್ಲು ಗುಡ್ಡದ ಮೇಲೆ . ಇತ್ತಿಚೆಗಷ್ಟೇ ಚಂದ್ರಶೇಖರ್ ಅಭಿನಯಿಸಿದ್ದ ಚಿತ್ರದ ಹೆಸರು ಕೂಡ ಎಡಕಲ್ಲು ಗುಡ್ಡದ ಮೇಲೆ. ವಿವಿನ್ ಸೂರ್ಯ ಚಿತ್ರವನ್ನ ನಿರ್ದೇಶನ ಮಾಡಿದ್ದು ಬಹುತೇಕ ಹೊಸ ಕಲಾವಿದರೇ ಹೊಸ ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಅಭಿನಯಿಸಿದ್ದರು.
ಚಂದ್ರಶೇಖರ್ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸಿನಿಮಾಗಳಲ್ಲಿ ಹಿರಿಯ ನಟನಾಗಿ ಅಭಿನಯಿಸಿದ್ದರು. ಶಿವರಾಜ್ ಕುಮಾರ್ ಪುತ್ರಿ ನಿರ್ಮಾಣದಲ್ಲಿ ಪಾರಂಭವಾಗಿರುವ 'ಮಾನಸ ಸರೋವರ' ಧಾರಾವಾಹಿಯ ಚಿತ್ರೀಕರಣದಲ್ಲೂ ಚಂದಶೇಖರ್ ಭಾಗಿ ಆಗಿದ್ದರು.