Don't Miss!
- Lifestyle ಯಾವ ದಿಕ್ಕಿಗೆ ತಲೆ ಇಟ್ಟು ಮಲಗಬಾರದು..? ಹಿರಿಯರು ಈ ರೀತಿ ಹೇಳೋದೇಕೆ.?
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಯೋಧ ಗುರು' ಕುಟುಂಬಕ್ಕೆ 'ಕೆಮಿಸ್ಟ್ರಿ ಕರಿಯಪ್ಪ' ಚಿತ್ರತಂಡ ನೆರವು
ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಇಡೀ ದೇಶವೇ ಸಂತಾಪ ಸೂಚಿಸಿದೆ. ಆ ಯೋಧರ ಕುಟುಂಬಗಳಿಗೆ ಸರ್ಕಾರ, ಸಂಘ, ಸಂಸ್ಥೆ ಹಾಗೂ ಸಾರ್ವಜನಿಕರು ಹಲವು ರೀತಿಯಲ್ಲಿ ಸಹಾಯ ಹಸ್ತ ಚಾಚಿದ್ದಾರೆ. ರಿಷಬ್ ಶೆಟ್ಟಿ ಮತ್ತು ಹರಿಪ್ರಿಯಾ ಅಭಿನಯದ ಬೆಲ್ ಬಾಟಮ್ ಚಿತ್ರತಂಡ ಹುತಾತ್ಮ ಯೋಧ ಗುರು ಕುಟುಂಬಕ್ಕೆ 75 ಸಾವಿರ ಚೆಕ್ ನೀಡಿ ಧನಸಹಾಯ ಮಾಡಿದ್ದಾರೆ.
ಇದೀಗ, ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರತಂಡವೂ ಗುರು ಕುಟುಂಬಕ್ಕೆ ನೆರವು ನೀಡಲು ಮುಂದಾಗಿದೆ. ಈ ವಾರವಷ್ಟೇ ಬಿಡುಗಡೆಯಾಗಿರುವ ಕೆಮಿಸ್ಟ್ರಿ ಆಪ್ ಕರಿಯಪ್ಪ ಚಿತ್ರತಂಡ ಭಾನುವಾರದ ಒಟ್ಟು ಕಲೆಕ್ಷನ್ ಹಣವನ್ನ ಗುರು ಕುಟುಂಬಕ್ಕೆ ನೀಡಲಿದೆಯಂತೆ.
ಎಂ ಸಿರಿ ಪ್ರೊಡಕ್ಷನ್ ನಲ್ಲಿ ತಯಾರಾಗಿರುವ ಕೆಮಿಸ್ಟ್ರಿ ಆಫ್ ಕರಿಯಪ್ಪ ಚಿತ್ರ ಫೆಬ್ರವರಿ 15 ರಂದು ಬಿಡುಗಡೆಯಾಗಿತ್ತು. ತಬಲ ನಾಣಿ, ಚಂದನ್ ಆಚಾರ್, ಸಂಜನಾ ಆನಂದ್, ಅಪೂರ್ವ ಸೇರಿದಂತೆ ಹಲವರು ಅಭಿನಯಿಸಿದ್ದರು. ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣ್ತಿರುವ ಈ ಚಿತ್ರ ಈಗ ಹುತಾತ್ಮ ಯೋಧರಿಗೆ ಸಹಾಯವಾಗಿದೆ.
ವಿಶೇಷ ಅಂದ್ರೆ, ಈ ಹಿಂದೆ ಎಂ ಸಿರಿ ಪ್ರೊಡಕ್ಷನ್ ನಲ್ಲಿ ಮೂಡಿಬಂದಿದ್ದ ಸಂಯುಕ್ತ 2 ಚಿತ್ರದ ಮೊದಲ ದಿನದ ಕಲೆಕ್ಷನ್ ಹಣವನ್ನ ಆರ್ಮಿ ವೆಲ್ಫೆರ್ ಫಂಡ್ ಗೆ ನೀಡಲಾಗಿತ್ತು.