Don't Miss!
- News ಹನೂರು: ಮತದಾರರ ಪಟ್ಟಿಯಲ್ಲಿ ಹೆಸರಿಲ್ಲವೆಂದು ಬೀದಿಗಿಳಿದ ವ್ಯಕ್ತಿ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಎಸ್ ನಾರಾಯಣ್ ಮೇಲೆ ಚೆಕ್ ಬೌನ್ಸ್ ಪ್ರಕರಣ
'ಮುಂಜಾನೆ' ಚಿತ್ರಕ್ಕಾಗಿ ಪ್ರಸಾದ್ ಅವರ ಬಳಿ ನಾರಾಯಣ್ ಸಾಲ ಮಾಡಿದ್ದರಂತೆ. ಇದಕ್ಕೆ ಪ್ರತಿಯಾಗಿ ರು.2 ಕೋಟಿ ಚೆಕ್ ಬರೆದುಕೊಟ್ಟಿದ್ದರಂತೆ ನಾರಾಯಣ್. ಈಗ ಆ ಚೆಕ್ ಬೌನ್ಸ್ ಆಗಿದೆ. ನ್ಯಾಯ ಕೊಡಿಸಿ ಎಂದು ಫಿಲಂ ಚೇಂಬರ್ ಬಾಗಿಲು ತಟ್ಟಿದ್ದಾರೆ ಪ್ರಸಾದ್.
'ಮುಂಜಾನೆ' ಚಿತ್ರ ನಿರ್ಮಾಣದ ಸಂದರ್ಭದಲ್ಲಿ ಅವರು ಆರ್ಥಿಕ ಬಿಕ್ಕಟ್ಟಿಗೆ ಸಿಕ್ಕಿದ್ದರು. ಆಗ ಅವರ ಸಹಾಯಕ್ಕೆ ತಾವು ನಿಂತೆವು. ಈಗ ಅವರು ತಮಗೆ ವಂಚಿಸಿದ್ದಾರೆ ಎಂದು ವಿತರಕ ಪ್ರಸಾದ್ ಆರೋಪಿಸಿದ್ದಾರೆ.
ಅವರ ಚಿತ್ರ ಬಿಡುಗಡೆಯಾದ ಮೇಲೂ ಅವರು ತಮಗೆ ಹಣ ಹಿಂತಿರುಗಿಸಿಲ್ಲ. ಹಲವಾರು ಬಾರಿ ಅವರ ಮನೆಗೆ ಅಲೆದದ್ದೇ ಬಂತು. ಕಡೆಗೆ ಅವರ ಕೊಟ್ಟ ಚೆಕ್ ಸಹ ಬೌನ್ಸ್ ಆಗಿದೆ ಎಂದಿದ್ದಾರೆ ಪ್ರಸಾದ್. ಈಗ ಪ್ರಕರಣ ಫಿಲಂ ಚೇಂಬರ್ ಹಾಗೂ ನಿರ್ಮಾಪಕರ ಸಂಘದ ಟೇಬಲ್ ಮೇಲಿದೆ.
ಕರ್ನಾಟಕ ನಿರ್ಮಾಪರ ಸಂಘ ಇಬ್ಬರನ್ನೂ ಕರೆಸಿ ತಮ್ಮ ಸಮಸ್ಯೆಯನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವಂತೆ ಸೂಚಿಸಿದೆ. ನಾರಾಯಣ್ ಅವರಿಂದ ತಮಗೆ ಬಾಕಿ ಹಣ ಬಂದರೆ ಸಾಕು ಎಂಬ ಪರಿಸ್ಥಿತಿಯಲ್ಲಿ ಪ್ರಸಾದ್ ಇದ್ದಾರೆ. (ಏಜೆನ್ಸೀಸ್)