Don't Miss!
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚೆಕ್ ಬೌನ್ಸ್ ಕೇಸಲ್ಲಿ ನಟ, ನಿರ್ಮಾಪಕ ದ್ವಾರಕೀಶ್
ಕನ್ನಡ ಚಿತ್ರರಂಗದ ಮತ್ತೊಬ್ಬ ನಿರ್ಮಾಪಕರಾದ ಕೆಸಿಎನ್ ಚಂದ್ರಶೇಖರ್ ಅವರು ಕೊಟ್ಟ ದೂರಿನ ಮೇರೆಗೆ ನ್ಯಾಯಾಲಯ ಸೋಮವಾರ ವಿಚಾರಣೆ ನಡೆಸಿತು. ಬಳಿಕ ದ್ವಾರಕೀಶ್ ಖುದ್ದು ಹಾಜರಾಗುವಂತೆ ಆಗಸ್ಟ್ 27ಕ್ಕೆ ಕೇಸಿನ ವಿಚಾರಣೆಯನ್ನು ಮುಂದೂಡಿದೆ.
ಪ್ರಿಯಾಮಣಿ ಮುಖ್ಯಭೂಮಿಕೆಯಲ್ಲಿದ್ದ 'ಚಾರುಲತಾ' ಚಿತ್ರದ ನಿರ್ಮಾಣಕ್ಕಾಗಿ ದ್ವಾರಕೀಶ್ ರು.50 ಲಕ್ಷ ಸಾಲ ಪಡೆದಿದ್ದರಂತೆ. ಈ ಸಂಬಂಧ ಅವರು ಆಂಧ್ರ ಬ್ಯಾಂಕ್ ನ ರು.50 ಲಕ್ಷದ ಚೆಕ್ ಕೆಸಿಎನ್ ಚಂದ್ರಶೇಖರ್ ಅವರಿಗೆ ನೀಡಿದ್ದರು. ಆದರೆ ಚೆಕ್ ಬೌನ್ಸ್ ಆಗಿದೆ ಎಂದು ಚಂದ್ರಶೇಖರ್ ಕೋರ್ಟ್ ಮೆಟ್ಟಿಲೇರಿದ್ದರು.
ದ್ವಾರಕೀಶ್ ನಿರ್ಮಾಣದ 'ಚಾರುಲತಾ' ಚಿತ್ರ ನಿರೀಕ್ಷೆಗಳೆಲ್ಲವನ್ನೂ ತಲೆಕೆಳಗೆ ಮಾಡಿತ್ತು. ಥಾಯ್ ಭಾಷೆಯ 'ಅಲೋನ್' ಚಿತ್ರವನ್ನು ಅವರು 'ಚಾರುಲತಾ' ಮಾಡಿದ್ದರು. ಈ ಬಾರಿ ಅವರು ಮತ್ತೊಮ್ಮೆ ರೊಮ್ಯಾಂಟಿಕ್ ಕಾಮಿಡಿ ಚಿತ್ರವನ್ನು ಕೈಗೆತ್ತಿಕೊಂಡಿದ್ದಾರೆ.
ಚಿತ್ರಕ್ಕೆ 'ಬ್ರೆಡ್ ಬಟರ್ ಜಾಮ್' ಎಂದು ಹೆಸರಿಟ್ಟಿದ್ದಾರೆ. ಸದ್ಯಕ್ಕೆ ಸ್ಕ್ರಿಪ್ಟ್ ವರ್ಕ್ ನಡೆಯುತ್ತಿದ್ದು ಶೀಘ್ರದಲ್ಲೇ ಚಿತ್ರ ಸೆಟ್ಟೇರಲಿದೆ. ಈ ಬಾರಿ ಅವರು ಬಾಕ್ಸ್ ಆಫೀಸ್ ಮೇಲೆ ಕಣ್ಣಿಟ್ಟುಕೊಂಡೇ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.