Don't Miss!
- Lifestyle ಗ್ರಹಣ ಕಾಲದಲ್ಲಿ ಆಹಾರ ಸೇವಿಸಬಾರದೇಕೆ.? ಹಿರಿಯರ ವಾದವೇನು..?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Finance ಆದಾಯ ತೆರಿಗೆ ಇಲಾಖೆಯಿಂದ ಕಾಂಗ್ರೆಸ್ಗೆ 1,823 ಕೋಟಿ ರೂ. ನೋಟಿಸ್: ತೆರಿಗೆ ಭಯೋತ್ಪಾದನೆ ನಿಲ್ಲಲೇಬೇಕು ಎಂದ ಪಕ್ಷ
- News Namma Metro Purple Line: ದೈನಂದಿನ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರೀ ಇಳಿಕೆ, ಕಾರಣಗಳೇನು?
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Automobiles ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಎಂ ಯಡಿಯೂರಪ್ಪ, ಸಿದ್ಧರಾಮಯ್ಯ, ಕುಮಾರಸ್ವಾಮಿ ಕೈ ಸೇರಿದ ಚೇತನ್ ಮದುವೆ ಆಮಂತ್ರಣ
ಸ್ಯಾಂಡಲ್ ವುಡ್ ನಟ, ಆ ದಿನಗಳು ಖ್ಯಾತಿಯ ಚೇತನ್ ಮದುವೆ ತಯಾರಿಯಲ್ಲಿದ್ದಾರೆ. ಅಸ್ಸಾಂ ಮೂಲದ ಯುವತಿ ಮೇಘಾ ಕೈಹಿಡಿಯುತ್ತಿರುವ ಚೇತನ್ ಸದ್ಯ ಮದುವೆ ಕರೆಯೋಲೆಯಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೆ ಸಾಕಷ್ಟು ಗಣ್ಯರಿಗೆ ಮದುವೆ ಆಮಂತ್ರಣ ನೀಡಿರುವ ಚೇತನ್, ಇತ್ತೀಚಿಗೆ ಪವರ್ ಸ್ಟಾರ್ ಮನೆಗೆ ಭೇಟಿ ನೀಡಿ ಮದುವೆಗೆ ಆಹ್ವಾನಿಸಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.
ಚಿತ್ರರಂಗದ ಗಣ್ಯರ ಜೊತೆಗೆ ಚೇತನ್ ರಾಜಕೀಯ ಗಣ್ಯರಿಗೂ ಮದುವೆಯ ಮಮತೆಯ ಕರೆಯೋಲೆ ನೀಡುತ್ತಿದ್ದಾರೆ. ಇತ್ತೀಚಿಗೆ ಚೇತನ್ ರಾಜಕೀಯ ಮುಖಂಡರಾದ ಸಿದ್ಧರಾಮಯ್ಯ, ಕುಮಾರಸ್ವಾಮಿ ಮತ್ತು ಸಿಎಂ ಯಡಿಯೂರಪ್ಪ ಅವರಿಗೆ ಮದುವೆ ಆಮಂತ್ರಣ ನೀಡಿದ್ದಾರೆ. ಅವರ ನಿವಾಸಕ್ಕೆ ತೆರಳಿ ಮದುವೆಗೆ ಆಹ್ವಾನಿಸಿದ್ದಾರೆ.
ಪವರ್ ಸ್ಟಾರ್ ಪುನೀತ್ ಗೆ ಮದುವೆ ಆಮಂತ್ರಣ ನೀಡಿದ 'ಆ ದಿನಗಳು' ಚೇತನ್
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ನಟ ಚೇತನ್ "ನಾವು ಕೆಲವು ಸಾಮಾಜಿಕ ಹೋರಾಟಗಳನ್ನ ಮಾಡುವಾಗ ಆಯಾ ಸರ್ಕಾರದ ಮುಖ್ಯಮಂತ್ರಿಗಳನ್ನ ಪ್ರಶ್ನೆ ಮಾಡಲಾಗಿತ್ತು.. ನನ್ನ ಮದುವೆ ಕೂಟಕ್ಕೆ ಆಹ್ವಾನಿಸಲು ಹೋದಾಗ ಅಂದು ನಾವು ಮಾಡಿದ ಪ್ರಶ್ನೆಗಳನ್ನ ವೈಯಕ್ತಿಕವಾಗಿ ತೆಗೆದುಕೊಳ್ಳದೆ ತುಂಬಾ ಆತ್ಮೀಯವಾಗಿ ಬರಮಾಡಿಕೊಂಡು ಪ್ರೀತಿಯಿಂದ ಹಾರೈಸಿ ಮದುವೆಗೆ ಬರುವುದಾಗಿ ಹೇಳಿದರು" ಎಂದು ಹೇಳಿದ್ದಾರೆ.
ಮುಂದಿನ ತಿಂಗಳು ಫೆಬ್ರವರಿ 2 ಭಾನುವಾರ ಚೇತನ್ ಗೆಳತಿ ಮೇಘಾ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಸಮಾಜಮುಖಿ ಕೆಲಸಗಳಲ್ಲಿ ಗುರುತಿಸಿಕೊಂಡಿರುವ ಚೇತನ್, ಸರಳವಾಗಿ ಮದುವೆ ಆಗಲು ನಿರ್ಧರಿಸಿದ್ದಾರೆ. ವಲ್ಲಭ್ ನಿಕೇತನ ವಿನೋಬಾ ಭಾವೆ ಆಶ್ರಮದ ಮಕ್ಕಳು ಮತ್ತು ವೃದ್ಧರ ಸಮ್ಮುಖದಲ್ಲಿ ಸಂಜೆ 6 ಗಂಟೆಗೆ ವಿವಾಹಬಂಧನಕ್ಕೆ ಒಳಗಾಗಲಿದ್ದಾರೆ