Just In
- 9 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- 10 hrs ago
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- 10 hrs ago
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- 12 hrs ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
Don't Miss!
- Lifestyle
"ಸೋಮವಾರದ ರಾಶಿಫಲ: ಮೇಷ-ಮೀನದವರೆಗಿನ ದಿನ ಭವಿಷ್ಯ"
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಚುನಾವಣೆ ಪ್ರಚಾರಕ್ಕೆ ಓಡೋಡಿ ಬರುವ ನಟರು, ರೈತರ ಬಗ್ಗೆ ತುಟಿಬಿಚ್ಚಿಲ್ಲವೇಕೆ: ಚೇತನ್ ಪ್ರಶ್ನೆ
ದೆಹಲಿಯಲ್ಲಿ ಸತತ ಎರಡು ವಾರದಿಂದಲೂ ನಡೆಯುತ್ತಿರುವ ರೈತ ಪ್ರತಿಭಟನೆ ದೇಶದ ಗಮನ ಸೆಳೆದಿದೆ. ಹಲವಾರು ಸೆಲೆಬ್ರಿಟಿಗಳು ಈಗಾಗಲೇ ಬಹಿರಂಗವಾಗಿಯೇ ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ.

ನಟ ಪ್ರಕಾಶ್ ರೈ ಸಹ ರೈತರ ಪ್ರತಿಭಟನೆ ಬಗ್ಗೆ ಟ್ವೀಟ್ ಮಾಡಿ, 'ರೈತರ ಪರ ನಿಲ್ಲುವುದು ನಮ್ಮೆಲ್ಲರ ಕರ್ತವ್ಯ' ಎಂದಿದ್ದರು. ಇದೀಗ ಕನ್ನಡದ ನಟ ಚೇತನ್ ಅಹಿಂಸಾ ಸಹ ರೈತರ ಪರ ದನಿ ಎತ್ತಿದ್ದಾರೆ. ಇಷ್ಟು ಮಾತ್ರವೇ ಅಲ್ಲದೆ, ರೈತರ ಪರ ಮಾತನಾಡದ ನಟರನ್ನು ಟೀಕಿಸಿದ್ದಾರೆ ಸಹ.
ಡರ್ಟಿ ಪೋಲೀಸ್ ಆಗಿ ಟಾಲಿವುಡ್ ಗೆ ಕಾಲಿಟ್ಟ ನಟ ಚೇತನ್
ರಾಜಕೀಯ ಪಕ್ಷಗಳ ಚುನಾವಣೆ ಪ್ರಚಾರಕ್ಕೆ ಬಹುಬೇಗನೆ ಬಂದು ಬಿಡುವ ನಟರು, ರೈತರಿಗೆ ಬೆಂಬಲವಾಗಿ ಒಂದು ಮಾತನ್ನೂ ಹೇಳಿಲ್ಲ ಏಕೆ?' ಎಂದು ಪ್ರಶ್ನಿಸಿದ್ದಾರೆ ನಟ ಚೇತನ್. ಕೆಲವು ದಿನಗಳ ಹಿಂದಷ್ಟೆ ನಟ ದರ್ಶನ್, ನಟಿ ಅಮೂಲ್ಯ, ರಾಕ್ಲೈನ್ ವೆಂಕಟೇಶ್ ಅವರುಗಳು ಚುನಾವಣೆ ಪ್ರಚಾರದಲ್ಲಿ ಭಾಗವಹಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಚುನಾವಣೆ ಪ್ರಚಾರಕ್ಕೆ ಬೇಗನೆ ಬರುತ್ತಾರೆ: ಚೇತನ್
'ದೇಶದಾದ್ಯಂತ ರೈತರು, ತಿಂಗಳುಗಳಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಚುನಾವಣೆ ಪ್ರಚಾರದ ಬ್ಯಾಂಡ್ ವ್ಯಾಗನ್ (ತೆರೆದ ವಾಹನ)ಗಳ ಮೇಲೆ ವೇಗವಾಗಿ ನೆಗೆಯುವ ಕನ್ನಡದ ಚಲನಚಿತ್ರ ನಟರು ರೈತರ ಬೆಂಬಲವಾಗಿ ಒಂದು ಮಾತನ್ನೂ ಹೇಳಿಲ್ಲ' ಎಂದಿದ್ದಾರೆ ನಟ ಚೇತನ್ ಅಹಿಂಸ.

ನಟರಿಗೆ ನಿಜವಾಗಿಯೂ ಜನಪರ ಕಾಳಜಿ ಇದೆಯೇ: ಚೇತನ್
'ನಾವು ನಟರು ಜನರಿಗೆ ಸಹಾಯ ಮಾಡುವ ಬಗ್ಗೆ ಕಾಳಜಿ ವಹಿಸುತ್ತೇವೆಯೇ? ಎಂದು ಪ್ರಶ್ನಿಸಿದ್ದಾರೆ. ನಮ್ಮ ಶ್ರೀಮಂತ, ಗಣ್ಯ ಸ್ನೇಹಿತರನ್ನು ಇನ್ನಷ್ಟು ಪ್ರಚೋದಿಸಲು ಮಾತ್ರವೇ ನಾವು ಆಸಕ್ತಿ ಹೊಂದಿದ್ದೇವೆಯೇ?' ಎಂದು ಪ್ರಶ್ನಿಸಿದ್ದಾರೆ ನಟ ಚೇತನ್.
'ಮಹಿಳೆಯನ್ನು ನಾಯಿ ನರಿ, ಕ್ರಿಮಿ, ಕೀಟ ಎನ್ನುವ ಹೀರೋ...': ನಟ ಚೇತನ್ ಕಿಡಿಕಾರಿದ್ದು ಯಾರ ವಿರುದ್ಧ?

ಮುನಿರತ್ನ ಪರ ದರ್ಶನ್ ಪ್ರಚಾರ ಮಾಡಿದ್ದರು
ಕೆಲವೇ ದಿನಗಳ ಹಿಂದೆ ನಟ ದರ್ಶನ್ ಅವರು ಬಿಜೆಪಿ ಅಭ್ಯರ್ಥಿ ಮುನಿರತ್ನ ಪರವಾಗಿ ಉಪಚುನಾವಣೆಯಲ್ಲಿ ಅದ್ಧೂರಿಯಾಗಿ ಪ್ರಚಾರ ನಡೆಸಿದ್ದರು. ಪ್ರಚಾರದಲ್ಲಿ ನಟಿ ಅಮೂಲ್ಯಾ, ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಸಹ ಭಾಗವಹಿಸಿದ್ದರು.

ಹೆಣ್ಣನ್ನು ನಾಯಿ, ನರಿ ಎನ್ನುವ ನಟ: ಚೇತನ್ ಅಸಮಾಧಾನ
ಕೆಲವು ದಿನಗಳ ಹಿಂದಷ್ಟೆ ಜೂಜು ಜಾಹೀರಾತುಗಳ ವಿರುದ್ಧ ಚೇತನ್ ಟ್ವೀಟ್ ಮಾಡಿದ್ದರು. ಅದಕ್ಕೂ ಮುನ್ನಾ 'ಹೆಣ್ಣನ್ನು ನಾಯಿ, ನರಿ, ಕ್ರಿಮಿ, ಕೀಟ ಎನ್ನುವ ನಟ' ಎಂದು ನಟರೊಬ್ಬರ ವಿರುದ್ಧ ಟೀಕೆ ಮಾಡಿದ್ದರು. ಈ ಟೀಕೆ ಧೃವ ಸರ್ಜಾ ವಿರುದ್ಧವೇ ಆಗಿತ್ತು ಎಂಬುದು ಬಹುತೇಕ ಸ್ಪಷ್ಟ.