Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Automobiles ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
8 ವರ್ಷಗಳ ಬಳಿಕ ಶಿವಣ್ಣನಿಗೆ ಚಿ. ಗುರುದತ್ ಆಕ್ಷನ್ ಕಟ್: ಸಂದೇಶ್ ನಾಗರಾಜ್ ನಿರ್ಮಾಣ
ಸಂದೇಶ್ ನಾಗರಾಜ್ ಕನ್ನಡ ಚಿತ್ರರಂಗದ ಹಿರಿಯ ನಿರ್ಮಾಪಕ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಸಾಕಷ್ಟು ನಟರ ಸಿನಿಮಾಗಳನ್ನು ನಿರ್ಮಾಣ ಮಾಡಿದ ಸಂಸ್ಥೆ ಇದು. ಇತ್ತೀಚೆಗೆ 'ಶ್ರೀಕೃಷ್ಣ@ಜಿಮೇಲ್ ಡಾಟ್ಕಾಮ್' ಸಿನಿಮಾವನ್ನು ನಿರ್ಮಿಸಿ ಬಿಡುಗಡೆ ಮಾಡಿದ್ದಾರೆ. ಡಾರ್ಲಿಂಗ್ ಕೃಷ್ಣ ನಟಿಸಿ, ನಾಗಶೇಖರ್ ನಿರ್ದೇಶನ ಮಾಡಿದ್ದರು. ಆದರೆ, ಈ ಸಿನಿಮಾ ಬಾಕ್ಸಾಫೀಸ್ನಲ್ಲಿ ಅಂದಕೊಂಡಷ್ಟು ಸದ್ದು ಮಾಡಲಿಲ್ಲ.
ಈಗ ಸಂದೇಶ್ ನಾಗರಾಜ್ ಹೊಸ ಸಿನಿಮಾಗೆ ಕೈ ಹಾಕಿದ್ದಾರೆ. ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಿಸಿರುವ ಸಂದೇಶ್ ನಾಗರಾಜ್ 'ಶ್ರೀಕೃಷ್ಣ@ಜಿಮೇಲ್ ಡಾಟ್ಕಾಮ್' ಬಳಿಕ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ ಜೊತೆ ಕೈ ಜೋಡಿಸಿದ್ದಾರೆ. ಹಾಗಿದ್ದರೆ, ಶಿವಣ್ಣನ ಹೊಸ ಸಿನಿಮಾದ ಬಗ್ಗೆ ಇರುವ ಹೈ ಲೈಟ್ ಅನ್ನುವುದನ್ನು ನೋಡೋಣ.
ಶಿವಣ್ಣನ ಹೊಸ ಸಿನಿಮಾಗೆ ಸಂದೇಶ್ ನಾಗರಾಜ್ ನಿರ್ಮಾಪಕ
ದುಬಾರಿ ಸಿನಿಮಾಗಳ ನಿರ್ಮಾಪಕ ಸಂದೇಶ್ ನಾಗರಾಜ್ ಹೊಸ ಸಿನಿಮಾಗೆ ಕೈ ಹಾಕಿದ್ದಾರೆ. ವಿಶೇಷ ಅಂದರೆ, ಈ ಬಾರಿ ಸೆಂಚುರಿ ಸ್ಟಾರ್ ಶಿವರಾಜ್ಕುಮಾರ್ಗಾಗಿ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇದೇ ಮೊದಲ ಬಾರಿಗೆ ಸಂದೇಶ್ ನಾಗರಾಜ್ ಶಿವಣ್ಣನ ಸಿನಿಮಾ ನಿರ್ಮಿಸುತ್ತಿದ್ದು, ಈ ಹೊಸ ಕಾಂಬಿನೇಷನ್ ಬಗ್ಗೆ ಸ್ಯಾಂಡಲ್ವುಡ್ನಲ್ಲಿ ಕುತೂಹಲ ಹೆಚ್ಚಾಗಿದೆ. ಹಿಂದಿನ ಸಿನಿಮಾಗಳಂತೆ ಈ ಸಿನಿಮಾ ಕೂಡ ಅದ್ಧೂರಿಯಾಗಿರುತ್ತೆ ಎನ್ನುವುದನ್ನು ನಿರೀಕ್ಷೆ ಮಾಡಬಹುದು.
ಮತ್ತೆ ನಿರ್ದೇಶನಕ್ಕೆ ಮರಳಿದ ಚಿ ಗುರುದತ್
ಶಿವಣ್ಣನ ಜೊತೆಯಲ್ಲಿಯೇ ಚಿ ಗುರುದತ್ ಕೂಡ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಗುರುದತ್, ನಿರ್ದೇಶನದಲ್ಲೂ ಹೆಸರು ಮಾಡಿದ್ದಾರೆ. 1995ರಲ್ಲಿ ಶಿವಣ್ಣ ನಟಿಸಿದ 'ಸಮರ' ಚಿತ್ರಕ್ಕೆ ಮೊದಲ ಬಾರಿಗೆ ಆಕ್ಷನ್ ಕಟ್ ಹೇಳಿದ್ದರು. 2014ರಲ್ಲಿ ಶಿವಣ್ಣ ಹಾಗೂ ರಮ್ಯಾ ನಟಿಸಿದ 'ಆರ್ಯನ್' ಗುರುದತ್ ನಟಿಸಿದ ಕೊನೆಯ ಸಿನಿಮಾ. ಈಗ ಮತ್ತೆ ಗೆಳೆಯ ಶಿವರಾಜ್ಕುಮಾರ್ಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ.
ಶಿವಣ್ಣ-ಗುರುದತ್ ಸಿನಿಮಾ ಸೀಕ್ರೆಟ್ ರಿವೀಲ್ ಆಗಿಲ್ಲ
ಶಿವಣ್ಣ ಹಾಗೂ ಗೆಳೆಯ ಚಿ ಗುರುದತ್ ಅವರ ಈ ಹೊಸ ಸಿನಿಮಾ ಬಗ್ಗೆ ಅನೌನ್ಸ್ ಆಗಿದೆ ಅಷ್ಟೇ. ಆದರೆ, ಈ ಸಿನಿಮಾದ ಟೈಟಲ್ ಏನು? ಶಿವಣ್ಣನೊಂದಿಗೆ ಯಾರು ನಟಿಸುತ್ತಾರೆ? ತಾಂತ್ರಿಕ ವರ್ಗ ಹೇಗಿದೆ? ಮ್ಯೂಸಿಕ್ ಇವೆಲ್ಲವನ್ನೂ ನಿರ್ದೇಶಕ ಸಂದೇಶ್ ನಾಗರಾಜ್ ಬಿಟ್ಟುಕೊಟ್ಟಿಲ್ಲ. "ತಾರಾಬಳಗ ಹಾಗೂ ತಾಂತ್ರಿಕವರ್ಗದ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಸದ್ಯದಲ್ಲೇ ನೀಡಲಾಗುವುದು." ಎಂದು ನಿರ್ಮಾಪಕ ಸಂದೇಶ್ ನಾಗರಾಜ್ ತಿಳಿಸಿದ್ದಾರೆ.
ಸಂದೇಶ್ ನಾಗರಾಜ್ ನಿರ್ಮಿಸಿದ ಸಿನಿಮಾಗಳು
ಸಂದೇಶ್ ನಾಗರಾಜ್ ಹಾಗೂ ದರ್ಶನ್ ಇಬ್ಬರೂ ಆತ್ಮೀಯರಾಗಿದ್ದರು. ಇವರಿಬ್ಬರ ಕಾಂಬಿನೇಷನ್ನಲ್ಲಿ ಅದ್ದೂರಿ ಸಿನಿಮಾಗಳು ರಿಲೀಸ್ ಆಗಿವೆ. ದರ್ಶನ್ ನಟಿಸಿದ 'ಪ್ರಿನ್ಸ್', 'ಐರಾವತ' ಹಾಗೂ 'ಒಡೆಯ' ಹೈ ಬಜೆಟ್ ಸಿನಿಮಾ ಆಗಿದ್ದವು. ಇದರೊಂದಿಗೆ 'ಅಮರ್', ಶ್ರೀಕೃಷ್ಣ ಜಿಮೇಲ್ ಡಾಟ್ ಸಿನಿಮಾಗಳೂ ಬಿಡುಗಡೆಯಾಗಿವೆ. ಸದ್ಯ ರಿಷಬ್ ಶೆಟ್ಟಿ ಅಭಿನಯದ ಹರಿಕಥೆ ಅಲ್ಲ ಗಿರಿ ಕಥೆ ಸಿನಿಮಾ ಶೂಟಿಂಗ್ ಮುಗಿದಿದ್ದು, ಶಿವಣ್ಣ ಹಾಗೂ ಗುರುದತ್ ಕಾಂಬಿನೇಷನ್ನಲ್ಲಿ ಹೊಸ ಸಿನಿಮಾ ಸೆಟ್ಟೇರಿದೆ.