Don't Miss!
- News ಲೋಕಸಭಾ ಚುನಾವಣೆ: ಮೈಸೂರು ಜಿಲ್ಲೆಯಲ್ಲಿ ಭದ್ರತೆಗೆ 5 ಸಾವಿರ ಪೊಲೀಸರ ನಿಯೋಜನೆ
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಕಲಾತಪಸ್ವಿ' ಸಾವಿಗೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ
ಕನ್ನಡದ ಖ್ಯಾತ ನಿರ್ದೇಶಕ, ನಟ ಕಾಶಿನಾಥ್ ಅವರ ಅಗಲಿಕೆಗೆ ಇಡೀ ಕಲಾಭಿಮಾನಿಗಳು ಹಾಗೂ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಅಪರೂಪದ ಕಲಾವಿದನಿಗೆ ಸಂತಾಪ ಸೂಚಿಸಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು ಕಾಶಿನಾಥ್ ಅವರ ಅಭಿನಯ ಹಾಗೂ ಚಿತ್ರದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ''ಕಾಶಿನಾಥ್ ಅವರು ಕನ್ನಡ ಚಿತ್ರರಂಗದ ಹಿರಿಯ ನಟ. ಹಾಸ್ಯ ಪಾತ್ರಗಳನ್ನ ಹೆಚ್ಚು ಮಾಡುತ್ತಿದ್ದರು. ನಾನು ಅವರ ಎರಡು ಸಿನಿಮಾ ನೋಡಿದ್ದೇನೆ. ಪ್ರತಿಭಾನ್ವಿತ ಕಲಾವಿದರು. ಕನ್ನಡ ಚಿತ್ರರಂಗಕ್ಕೆ ಅವರ ಸಾವು ತುಂಬ ನಷ್ಟ ತಂದಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಸಿಗಲಿ'' ಎಂದು ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದ್ದಾರೆ.
'ಸಾಮಾನ್ಯ'ರಂತೆ ಬಂದು 'ಅಸಾಮಾನ್ಯ'ರಾಗಿ ಹೊರಟ ಕಾಶಿನಾಥ್
ಇಂದು ಸಂಜೆ 5.30ಕ್ಕೆ ಚಾಮರಾಜಪೇಟೆಯ ಚಿತಗಾರದಲ್ಲಿ ಕಾಶಿನಾಥ್ ಅವರ ಅಂತ್ಯಕ್ರಿಯೆ ನೆರವೇರಲಿದೆ. ಸಂಜೆ 5 ಗಂಟೆಯವರೆಗೂ ಕಾಶಿನಾಥ್ ಅವರ ಪಾರ್ಥೀವ ಶರೀರವನ್ನ ಬೆಂಗಳೂರಿನ ಎನ್.ಆರ್ ಕಾಲೋನಿಯಲ್ಲಿರುವ ಎ.ಪಿ.ಎಸ್ ಕಾಲೇಜ್ ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗುವುದು.
'ಗುರುಗಳ ಗುರು' ಕಾಶಿನಾಥ್ ನಿಧನಕ್ಕೆ ಕಣ್ಣೀರಿಟ್ಟ ಕಲಾ ಕುಟುಂಬ